Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್ ಸರಣಿ ವೈಟ್ವಾಶ್ ಆಗಿದ್ದು ಯಾವಾಗ ಗೊತ್ತಾ?
Team Udayavani, Oct 27, 2024, 1:34 PM IST
ಮುಂಬೈ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ದದ ಟೆಸ್ಟ್ ಸರಣಿಯ (Test series) ಮೊದಲ ಎರಡು ಪಂದ್ಯಗಳನ್ನು ಸೋತಿರುವ ಭಾರತ ತಂಡವು ಇದೀಗ ತವರಿನಲ್ಲಿ ವೈಟ್ವಾಶ್ ಅನುಭವಿಸುವ ಆತಂಕದಲ್ಲಿದೆ. ಮುಂಬೈನಲ್ಲಿ ನಡೆಯಲಿರುವ ಕೊನೆಯ ಟೆಸ್ಟ್ ಪಂದ್ಯದಲ್ಲಿ ಗೆದ್ದು ವೈಟ್ವಾಶ್ ಅವಮಾನದಿಂದ ತಪ್ಪಿಸಿಕೊಳ್ಳುವ ಯೋಜನೆಯಲ್ಲಿದೆ ರೋಹಿತ್ ಬಳಗ.
ಬೆಂಗಳೂರು ಮತ್ತು ಪುಣೆಯಲ್ಲಿ ನಡೆದ ಮೊದಲೆರಡು ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಕಾರಣದಿಂದ ಹೀನಾಯ ಸೋಲು ಅನುಭವಿಸಿತ್ತು. ಇದೀಗ ನವೆಂಬರ್ 1ರಿಂದ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium, Mumbai) ಮೂರನೇ ಪಂದ್ಯ ನಡೆಯಲಿದ್ದು, ಟಾಮ್ ಲ್ಯಾಥಂ ಪಡೆಯನ್ನು ಕಟ್ಟಿಹಾಕುವ ಯೋಜನೆ ರೂಪಿಸಿದೆ.
ಭಾರತ ತಂಡವು ತವರು ನೆಲದಲ್ಲಿ ಈ ಹಿಂದೆಯೂ ಟೆಸ್ಟ್ ಸರಣಿಯಲ್ಲಿ ಕ್ಲೀನ್-ಸ್ವೀಪ್ ಆಗಿತ್ತು. ಕೊನೆಯ ಬಾರಿಗೆ ಈ ಅವಮಾನ ಯಾವಾಗ ಅನುಭವಿಸಿತ್ತು? ಇಲ್ಲಿದೆ ಉತ್ತರ.
ದ.ಆಫ್ರಿಕಾ ವಿರುದ್ದ ಸೋಲು
2000ನೇ ಇಸವಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಭಾರತವು ಕೊನೆಯ ಬಾರಿಗೆ ಕ್ಲೀನ್ ಸ್ವೀಪ್ ಆಗಿತ್ತು. 2000ರ ಫೆಬ್ರವರಿ ಮಾರ್ಚ್ ನಲ್ಲಿ ನಡೆದಿದ್ದ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 2-0 ಅಂತರದಿಂದ ಗೆಲುವು ಸಾಧಿಸಿತ್ತು. ಮುಂಬೈನಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಭಾರತವು ನಾಲ್ಕು ವಿಕೆಟ್ ಗಳಿಂದ ಸೋಲನುಭವಿಸಿತ್ತು. ಆದರೂ ಸಚಿನ್ ತೆಂಡೂಲ್ಕರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಅವರು ಮೊದಲ ಇನ್ನಿಂಗ್ಸ್ ನಲ್ಲಿ 96 ರನ್ ಗಳಿಸಿದ್ದರು ಮತ್ತು ಮೂರು ವಿಕೆಟ್ ಪಡೆದಿದ್ದರು.
ಎರಡನೇ ಪಂದ್ಯವು ಬೆಂಗಳೂರಿನಲ್ಲಿ ನಡೆದಿತ್ತು. ಇದನ್ನು ಇನ್ನಿಂಗ್ಸ್ ಮತ್ತು 71 ರನ್ ಅಂತರದಿಂದ ಸೋಲನುಭವಿಸಿತ್ತು. ಮೊಹಮ್ಮದ್ ಅಜರುದ್ದೀನ್ ಶತಕ ಬಾರಿಸಿದ್ದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ನಿಕಿ ಬೊಯೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ
IND-W vs NZ-W: ಇಂದು ದ್ವಿತೀಯ ಏಕದಿನ: ಸರಣಿ ಗೆಲ್ಲಲು ವನಿತೆಯರ ಸ್ಕೆಚ್
Pro Kabaddi: ಮುಂಬಾ-ಬೆಂಗಾಲ್ ರೋಚಕ ಟೈ
Ranji Trophy: ಕರ್ನಾಟಕದ ಬೌಲಿಂಗ್ ದಾಳಿಗೆ ಬಿಹಾರ ತತ್ತರ
Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ
MUST WATCH
ಹೊಸ ಸೇರ್ಪಡೆ
Health: ಮೊಣಕಾಲಿನ ಅಸ್ಥಿಸಂಧಿವಾತ; ಸಾಮಾನ್ಯ ಸಮಸ್ಯೆಯನ್ನು ಮಾಡಿಕೊಳ್ಳುವುದು
Darshan Thoogudeepa: ನವೆಂಬರ್ನಲ್ಲಿ ದರ್ಶನ್ ಎರಡು ಸಿನಿಮಾ ರೀರಿಲೀಸ್
Tobacco Cessation Centre: ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ತಂಬಾಕು ವರ್ಜನ ಕೇಂದ್ರ
Kundapura: ಟೆನಿಸ್ ಬಾಲ್ ಕ್ರಿಕೆಟ್ ಆಡುತ್ತಿದ್ದ ಹುಡುಗನೀಗ ರಣಜಿ ಆಟಗಾರ
Puttur: ನೆಲ್ಯಾಡಿ-ಪೆರಿಯಶಾಂತಿ; ತಿರುಗಿ ತಿರುಗಿ ಸುಸ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.