World Cup ಅಂತೂ ದ್ರಾವಿಡ್‌ಗೆ ಸಿಕ್ತು: ಆಟಗಾರನಾಗಿ, ನಾಯಕನಾಗಿ ವಿಫ‌ಲ, ಕೋಚ್‌ ಆಗಿ ವಿಜಯ


Team Udayavani, Jun 30, 2024, 6:30 AM IST

rahul-dravid

“ದ ವಾಲ್‌’ ಎಂದೇ ಖ್ಯಾತರಾದ ರಾಹುಲ್‌ ದ್ರಾವಿಡ್‌ ಅಂತೂ ವಿಶ್ವಕಪ್‌ಗೆ ಮುತ್ತಿಕ್ಕಿದ್ದಾರೆ. ಆಟಗಾರನಾಗಿ, ನಾಯಕನಾಗಿ ಗೆಲ್ಲಲಾಗದ ಟ್ರೋಫಿ ಯನ್ನು ದ್ರಾವಿಡ್‌ ಭಾರತ ತಂಡದ ತರಬೇತುದಾರಾಗಿ ಗೆದ್ದಿದ್ದಾರೆ.

1996ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರಾಹುಲ್‌ ದ್ರಾವಿಡ್‌ 2012ರ ವರೆಗೆ ಭಾರತ ತಂಡದ ಪರವಾಗಿ ಆಡಿದ್ದರು. ಭಾರತ 2007ರಲ್ಲಿ ಟಿ20 ವಿಶ್ವಕಪ್‌ ಗೆದ್ದಾಗ, ದ್ರಾವಿಡ್‌ ಟಿ20 ತಂಡದಲ್ಲಿರಲಿಲ್ಲ. 2011ರಲ್ಲಿ ಏಕದಿನ ವಿಶ್ವಕಪ್‌ ಗೆದ್ದಾಗಲೂ ರಾಹುಲ್‌ ಕೇವಲ ಟೆಸ್ಟ್‌ ಮಾತ್ರ ಆಡುತ್ತಿದ್ದರು. ಅಲ್ಲದೇ ವೆಸ್ಟ್‌ ಇಂಡೀಸ್‌ನಲ್ಲಿ 2007ರಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ರಾಹುಲ್‌ ದ್ರಾವಿಡ್‌ ನಾಯಕರಾಗಿದ್ದರು, ಆದರೆ ಭಾರತ ತಂಡ ಹೀನಾಯವಾಗಿ ಸೋತು ಪಂದ್ಯಾವಳಿಯಿಂದ ನಿರ್ಗಮಿಸಿತ್ತು.

ದ್ರಾವಿಡ್‌ ಭಾರತ ತಂಡದ ಕೋಚ್‌ ಆದ ಬಳಿಕ ಭಾರತ ಏಕದಿನ ವಿಶ್ವಕಪ್‌ ಹಾಗೂ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ ತಲುಪಿದ್ದರೂ ಕಪ್‌ ಗೆಲ್ಲಲಾಗಿರಲಿಲ್ಲ. ನಾಯಕನಾಗಿ ವೆಸ್ಟ್‌ ಇಂಡೀಸ್‌ನಲ್ಲಿ ಗೆಲ್ಲಲಾಗದ ವಿಶ್ವಕಪ್‌ ಅನ್ನು ದ್ರಾವಿಡ್‌ ಈಗ ತರಬೇತುದಾರನಾಗಿ ಗಳಿಸಿಕೊಂಡಿದ್ದಾರೆ. ಇದು ಭಾರತದ ತರಬೇತುದಾರನಾಗಿಯೂ ದ್ರಾವಿಡ್‌ಗೆ ಕೊನೆಯ ವಿಶ್ವಕಪ್‌ ಆಗಿದ್ದು, ಅಭಿಯಾ ನವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ.

ಟಿ20 ವಿಶ್ವಕಪ್‌ ವಿಜೇತರು
2007: ಪಾಕಿಸ್ಥಾನ ವಿರುದ್ಧ ಭಾರತಕ್ಕೆ 5 ರನ್‌ ಜಯ
2009: ಶ್ರೀಲಂಕಾ ವಿರುದ್ಧ ಪಾಕಿಸ್ಥಾನಕ್ಕೆ 8 ವಿಕೆಟ್‌ ಜಯ
2010: ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ಗೆ 7 ವಿಕೆಟ್‌ ಜಯ
2012: ಶ್ರೀಲಂಕಾ ವಿರುದ್ಧ ವೆಸ್ಟ್‌ಇಂಡೀಸ್‌ಗೆ 36 ರನ್‌ ಜಯ
2014: ಭಾರತದ ವಿರುದ್ಧ ಶ್ರೀಲಂಕಾಕ್ಕೆ 6 ವಿಕೆಟ್‌ ಜಯ
2016: ಇಂಗ್ಲೆಂಡ್‌ ವಿರುದ್ಧ ವೆಸ್ಟ್‌ಇಂಡೀಸ್‌ಗೆ 4 ವಿಕೆಟ್‌ ಜಯ
2021: ನ್ಯೂಜಿಲ್ಯಾಂಡ್‌ ವಿರುದ್ಧ ಆಸ್ಟ್ರೇಲಿಯಾಗೆ 8 ವಿಕೆಟ್‌ ಜಯ
2022: ಪಾಕಿಸ್ಥಾನ ವಿರುದ್ಧ ಇಂಗ್ಲೆಂಡ್‌ಗೆ 5 ವಿಕೆಟ್‌ ಜಯ

2024: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 7 ರನ್‌ ಜಯ
ಕಳೆದ ಜೂನ್‌ನಿಂದ ಈ ಜೂನ್‌ವರೆಗೆ 3 ಫೈನಲ್‌ ಆಡಿದ ಭಾರತ 2023ರ ಜೂನ್‌ ತಿಂಗಳಿಂದ ಈ ವರ್ಷ ಜೂನ್‌ ತಿಂಗಳ ನಡುವೆ ಭಾರತ ಮೂರು ಫೈನಲ್‌ ಆಡಿದಂತಾಗಿದೆ. 2023ರ ಜೂ. 7ರಿಂದ 11ರ ವರೆಗೆ ಲಂಡನ್‌ನಲ್ಲಿ ನಡೆದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಭಾರತ, ಆಸ್ಟ್ರೇಲಿಯ ವಿರುದ್ಧ 209 ರನ್‌ಗಳಿಂದ ಸೋತು ಹೋಯಿತು. ಅದೇ ವರ್ಷ ನ. 19ರಂದು ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯ ವಿರುದ್ಧ 6 ವಿಕೆಟ್‌ಗಳಿಂದ ಸೋತು ಹೋಗಿತ್ತು. ಈ ವರ್ಷ ಪ್ರಸ್ತುತ ಜೂನ್‌ ತಿಂಗಳ 29ರಂದು ಭಾರತ, ದ.ಆಫ್ರಿಕಾ ವಿರುದ್ಧ ಫೈನಲ್‌ ಆಡಿದೆ.

ಮೊದಲು ಟೆಸ್ಟ್‌  , ಅನಂತರ ಏಕದಿನ, ಈಗ ಟಿ20 ವಿಶ್ವಕಪ್‌ ಫೈನಲ್‌ ಕಳೆದ ವರ್ಷ ಜೂನ್‌ನಿಂದ ಈ ವರ್ಷ ಜೂನ್‌ವರೆಗೆ ಭಾರತ 3 ಭಿನ್ನ ಮಾದರಿಯ ವಿಶ್ವಕಪ್‌ ಫೈನಲ್‌ಗ‌ಳಲ್ಲಿ ಆಡಿದೆ. ಕಳೆದ ವರ್ಷ ಜೂನ್‌ನಲ್ಲಿ ಟೆಸ್ಟ್‌ ವಿಶ್ವಕಪ್‌, ಅದೇ ವರ್ಷ ನವೆಂಬರ್‌ನಲ್ಲಿ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಆಡಿತು. ಇದೀಗ ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಆಡಿದೆ.

ಟಾಪ್ ನ್ಯೂಸ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

1-LOP

Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್‌ ವಿರುದ್ಧ ಕ್ರಮ?

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

1-sikka

India ಸರಣಿಗೆ ಜಿಂಬಾಬ್ವೆ ತಂಡ : ಸಿಕಂದರ್‌ ರಝ ನಾಯಕ

jay-shah

Sri Lanka ಪ್ರವಾಸದಿಂದ ಭಾರತ ತಂಡಕ್ಕೆ ಹೊಸ ಕೋಚ್‌: ಶಾ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.