Dharwad: ಅಂತರಾಷ್ಟ್ರೀಯ ಟೆನ್ನಿಸ್‌ ಪಂದ್ಯಾವಳಿಗೆ ಚಾಲನೆ


Team Udayavani, Oct 15, 2023, 10:06 PM IST

tennis

ಧಾರವಾಡ : ಧಾರವಾಡ ಜಿಲ್ಲಾ ಟೆನಿಸ್ ಸಂಸ್ಥೆ (ಡಿಡಿಎಲ್‌ಟಿಎ) ಆಶ್ರಯದಲ್ಲಿ ಎಂಟು ದಿನಗಳ ಕಾಲ ಆಯೋಜಿಸಿರುವ 25 ಸಾವಿರ ಡಾಲರ್ ಬಹುಮಾನ
ಮೊತ್ತದ ಅಂತರ್ ರಾಷ್ಟೀಯ ಪುರುಷರ ಸಿಂಗಲ್ಸ್ ಮತ್ತು ಡಬಲ್ಸ್ ಟೆನಿಸ್ ಪಂದ್ಯಾವಳಿಗೆ ರವಿವಾರ ಚಾಲನೆ ದೊರೆಯಿತು.

ಅಕ್ಟೋಬರ್ 17 ರಿಂದ ಮುಖ್ಯ ಡ್ರಾ ಪಂದ್ಯಾಟಗಳು ಆರಂಭಗೊಳ್ಳಲಿದ್ದು, ಇದೀಗ ರವಿವಾರದಿಂದ ಎರಡು ದಿನಗಳ ಅರ್ಹತಾ ಸುತ್ತಿನ ಪಂದ್ಯಾಟಗಳು ಆರಂಭಗೊಂಡಿವೆ. ಅಖಿಲ ಭಾರತ ಟೆನಿಸ್ ಸಂಸ್ಥೆ (ಎಐಟಿಎ) ಅರ್ಹತಾ ಟೂರ್ನಿಗಾಗಿ ನೀರಜ್ ಯಶಪಾಲ್, ಮುಕಿಲ್ ರಾಮನನ್ ಹಾಗೂ ಧರ್ಮಿಲ್ ಶಾ ಅವರಿಗೆ ವೈಲ್ಡ್ ಕಾರ್ಡ್ ಪ್ರವೇಶ ನೀಡಲಾಗಿದ್ದು, ಸಿದ್ದಾಂತ ಬಂಥಿಯಾ ಹಾಗೂ ಶಿವಾಂಕ ಭಟ್ನಾಗರ್ ಅವರಿಗೆ ವೈಲ್ಡ್ ಕಾರ್ಡ್ ಮೂಲಕ ಮುಖ್ಯ ಡ್ರಾಗೆ ನೇರ ಪ್ರವೇಶ ನೀಡಲಾಗಿದೆ.

ಶುಭಾರಂಭ; :ಭಾರತದ ಮಾಜಿ ಡೆವಿಸ್‌ ಕಪ್‌ ಆಟಗಾರ ಮತ್ತು ಒಲಿಂಪಿಕ್‌ ಪಟು ವಿಷ್ಣುವರ್ಧನ ಸೇರಿದಂತೆ ಪ್ರಮುಖ ಆಟಗಾರರು ಐಟಿಎಫ್‌ ಧಾರವಾಡ ಪುರುಷರ ವಿಶ್ವ ಟೆನಿಸ್‌ ಪಂದ್ಯಾವಳಿಯ ಅರ್ಹತಾ ಸುತ್ತಿನ ಮೊದಲ ಪಂದ್ಯಗಳನ್ನು ಸುಲಭವಾಗಿ ಗೆದ್ದು ಮುಂದಿನ ಸುತ್ತಿಗೆ ಪ್ರವೇಶಿಸಿದರು. ಅಗ್ರ ಶ್ರೇಯಾಂಕ ಪಡೆದಿರುವ ವಿಷ್ಣುವರ್ಧನ ತಮ್ಮ ಎದುರಾಳಿ ಪಾರ್ಥ ಅಗರವಾಲ್‌ ಅವರನ್ನು 6-3, 6-2 ರಿಂದ ಸುಲಭವಾಗಿ ಪರಾಭವಗೊಳಿಸಿದರು. ಇನ್ನೊಂದು ಪಂದ್ಯದಲ್ಲಿ ಸೂರಜ ಪ್ರಬೋಧ ಆರನೇ ಶ್ರೇಯಾಂಕಿತ ಅಥರ್ವ ಶರ್ಮಾ ವಿರುದ್ಧ 6-2, 6-3ರ ಸುಲಭ ಜಯ ಸಾಧಿಸಿದರು.
ಅರ್ಹತಾ ಪಂದ್ಯಗಳಿಗೆ ನೇರವಾಗಿ ವೈಲ್ಡ್‌ ಕಾರ್ಡ್‌ ಪ್ರವೇಶ ಪಡೆದಿದ್ದ ಸ್ಥಳೀಯ ಯುವ ಆಟಗಾರ ಅಮರ ಧರೆಣ್ಣವರ ಆರಂಭದಲ್ಲಿ ಉತ್ತಮ ಪ್ರತಿರೋಧ ತೋರಿದರೂ ನಂತರ ಎದುರಾಳಿ ವಿಯೆಟ್ನಾಂದ ಹಾ ಮಿನ್ಹ್‌ ಡುಕ್ ವು ಅವರ ಬಿರುಸಿನ ಆಟಕ್ಕೆ ಮಣಿಯಬೇಕಾಯಿತು. ಹಾ ಮಿನ್ಹ್‌ 6-2, 6-0 ಅಂಕಗಳಿಂದ ಜಯಶಾಲಿಯಾದರು.

ದೀಪಕ ಅನಂತರಾಮು ಇತ್ತೀಚೆಗೆ 37ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದು, 3ನೇ ಶ್ರೇಯಾಂಕಿತ ಫೈಸಲ್‌ ಕಮರ್‌ ಅವರಿಗೆ 6-0, 6-4 ರಿಂದ ಸುಲಭದ ತುತ್ತಾದರು.

ಮಧ್ಯಾಹ್ನ 2ರಿಂದ ಸುರಿದ ಮಳೆಯಿಂದಾಗಿ ಪಂದ್ಯಗಳಿಗೆ ವ್ಯತ್ಯಯ ಉಂಟಾಗಿ ರವಿವಾರ ನಡೆಯಬೇಕಿದ್ದ ಐದು ಪಂದ್ಯಗಳು ಸೋಮವಾರಕ್ಕೆ ಮುಂದೂಡಲ್ಪಟ್ಟವು. ಮುಖ್ಯ ಡ್ರಾ ಪಂದ್ಯಗಳು ಮಂಗಳವಾರದಿಂದ ಆರಂಭವಾಗಲಿವೆ. ಅರ್ಹತಾ ಸುತ್ತಿನಿಂದ ಎಂಟು ಆಟಗಾರರು, ವೈಲ್ಡ್‌ ಕಾರ್ಡ್‌ ಪ್ರವೇಶ ಮೂಲಕ ನಾಲ್ವರು ಹಾಗೂ ಈಗಾಗಲೇ ಮುಖ್ಯ ಡ್ರಾದಲ್ಲಿರುವ 20 ಆಟಗಾರರು ಮೇನ್‌ ಡ್ರಾನಲ್ಲಿ ಪಾಲ್ಗೊಳ್ಳಲಿದ್ದಾರೆ.

ಅರ್ಹತಾ ಸುತ್ತಿನ ಪ್ರಥಮ ಪಂದ್ಯಗಳ ಫಲಿತಾಂಶಗಳು: (ವಿಜೇತರ ಹೆಸರು ಮೊದಲು-ಹೆಸರಿನ ಮೊದಲು ಕಾಣುವ ಸಂಖ್ಯೆ ಆಟಗಾರರ ಶ್ರೇಯಾಂಕ)

1-ವಿಷ್ಣುವರ್ಧನ ವಿರುದ್ಧ ಪಾರ್ಥ ಅಗರವಾಲ್‌ 6-3, 6-2

3-ಫೈಸಲ್‌ ಕಮರ್‌ ವಿರುದ್ಧ ದೀಪಕ ಅನಂತರಾಮು 6-0, 6-4

12-ಹಾ ಮಿನ್ಹ್ ಡುಕ್‌ ವು (ವಿಯೆಟ್ನಾಂ) ವಿರುದ್ಧ ಅಮರ ಧರೆಣ್ಣವರ 6-2, 6-0

5- ರಣಜೀತ ವಿರಾಳಿ ಮುರುಗೇಶನ್‌ ವಿರುದ್ಧ ಯಶ್‌ ಚೌರಾಸಿಯಾ 6-1, 6-2

2- ಲೂಕ್‌ ಸೋರೆನ್‌ಸೆನ್‌ (ಆಸ್ಟ್ರೇಲಿಯಾ) ವಿರುದ್ಧ ಅರ್ಜುನ್‌ ಮಹಾದೇವನ್‌ 7-6 (4), 6-3

4-ಜಾಕ್‌ ಕಾರ್ಲಸನ್‌ ವಿಸ್ಟ್ರಾಂಡ (ಸ್ವೀಡನ್‌) ವಿರುದ್ಧ ಧೀರಜ್‌ ಕೋಡಂಚಾ ಶ್ರೀನಿವಾಸನ್‌ 6-2, 6-3

9-ಎನ್ರಿಕೋ ಗೀಯಾಕೋಮೆನಿ (ಇಟಲಿ) ವಿರುದ್ಧ ಜೇಕ್‌ ಭಾಂಗಡಿಯಾ (ಅಮೇರಿಕಾ) 6-1, 6-3

11-ಮಾಧ್ವಿನ್‌ ಕಾಮತ್‌ ವಿರುದ್ಧ ಮ್ಯಾಥ್ಯೂ ಓರ್ಯಾಂಡಲ್‌ (ಆಸ್ಟ್ರೇಲಿಯಾ) 7-6 (2), 6-1
ಸೂರಜ್‌ ಪ್ರಬೋಧ ವಿರುದ್ಧ ಅಥರ್ವ ಶರ್ಮಾ 6-2, 6-3

ಧಾರವಾಡ ಪೇಡಾ ಸವಿದರು ಈ ಪಂದ್ಯಾಟಗಳಿಗೆ ವಿದೇಶಗಳಿಂದ ವಿದ್ಯಾಕಾಶಿಗೆ ಬಂದಿಳಿದ ಟೆನಿಸ್ ಕ್ರೀಡಾಪಟುಗಳಿಗೆ ನೋಂದಣಿ ಸಮಯದಲ್ಲಿ ಅಗತ್ಯ ಕಿಟ್ ಜತೆಗೆ ಧಾರವಾಡ ಪೇಡಾ ಬಾಕ್ಸ್ ನೀಡಲಾಗಿದೆ. ಈ ಬಾಕ್ಸ್ ತೆರೆದು ಪೇಡೆ ಸವಿದ ಕ್ರೀಡಾಪಟುಗಳು ಇದರ ರುಚಿಗೆ ಮನ ಸೋತಿಸಿದ್ದಾರೆ. ಇದರ ಬಗ್ಗೆ ಕೆಲ ಕ್ರೀಡಾಪಟುಗಳು ಮಾಹಿತಿ ಪಡೆದು, ಪೇಡೆಯ ರುಚಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.