Duleep Trophy Cricket: ಇಂದಿನಿಂದ ದ್ವಿತೀಯ ಸುತ್ತಿನ ಹಣಾಹಣಿ


Team Udayavani, Sep 12, 2024, 7:15 AM IST

Duleep Trophy Cricket: ಇಂದಿನಿಂದ ದ್ವಿತೀಯ ಸುತ್ತಿನ ಹಣಾಹಣಿ

ಅನಂತಪುರ: ದುಲೀಪ್‌ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ದ್ವಿತೀಯ ಸುತ್ತಿನ ಸ್ಪರ್ಧೆಗಳು ಗುರುವಾರ ಅನಂತಪುರದ 2 ಕ್ರೀಡಾಂಗಣಗಳಲ್ಲಿ ಏಕಕಾಲಕ್ಕೆ ಆರಂಭವಾಗಲಿವೆ. ಒಂದರಲ್ಲಿ ಇಂಡಿಯಾ ಎ ಮತ್ತು ಇಂಡಿಯಾ ಡಿ, ಇನ್ನೊಂದರಲ್ಲಿ ಇಂಡಿಯಾ ಬಿ ಮತ್ತು ಇಂಡಿಯಾ ಸಿ ತಂಡಗಳು ಎದುರಾಗಲಿವೆ.

ಮೊದಲ ಸುತ್ತಿನಲ್ಲಿ ಇಂಡಿಯಾ ಬಿ ಮತ್ತು ಇಂಡಿಯಾ ಸಿ ತಂಡಗಳು ಜಯ ಸಾಧಿಸಿದ್ದವು. ಹೀಗಾಗಿ ಎ ಮತ್ತು ಡಿ ತಂಡಗಳ ಮೇಲೆ ಸಹಜವಾಗಿಯೇ ಒತ್ತಡವಿದೆ. ಈ ಬಾರಿ ಇಂಡಿಯಾ ಎ ತಂಡದ ನಾಯಕತ್ವದಲ್ಲಿ ಬದಲಾವಣೆ ಸಂಭವಿಸಿದ್ದು, ಶುಭಮನ್‌ ಗಿಲ್‌ ಬದಲು ಮಾಯಾಂಕ್‌ ಅಗರ್ವಾಲ್‌ ಮುನ್ನಡೆಸಲಿದ್ದಾರೆ.

ಶುಭಮನ್‌ ಗಿಲ್‌ ಸೇರಿದಂತೆ, ಮುಂಬರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ ಸರಣಿಗಾಗಿ ಆಯ್ಕೆಯಾದ ಹೆಚ್ಚಿನೆಲ್ಲ ಆಟಗಾರರನ್ನು ದುಲೀಪ್‌ ಟ್ರೋಫಿಯಿಂದ ಹೊರಗುಳಿಸಲಾಗಿದೆ. ಟೀಮ್‌ ಇಂಡಿಯಾದ ಏಕೈಕ ಸದಸ್ಯನೆಂದರೆ ಸಫ‌ìರಾಜ್‌ ಖಾನ್‌. ಇವರ ಸಹೋದರ ಮುಶೀರ್‌ ಖಾನ್‌ ಮೊದಲ ಪಂದ್ಯದಲ್ಲಿ 181 ರನ್‌ ಬಾರಿಸುವ ಇಂಡಿಯಾ ಬಿ ತಂಡದ ಗೆಲುವಿನ ರೂವಾರಿಯಾಗಿದ್ದರು.

ರಿಂಕು, ಪ್ರಸಿದ್ಧ್ ಆಯ್ಕೆ
ಉಳಿದಂತೆ ಮೊದಲ ಸುತ್ತಿನ ವೇಳೆ ಆಯ್ಕೆಯಾಗದಿದ್ದ ಬಿಗ್‌ ಹಿಟ್ಟರ್‌ ರಿಂಕು ಸಿಂಗ್‌, ಪೇಸ್‌ ಬೌಲರ್‌ ಪ್ರಸಿದ್ಧ್ ಕೃಷ್ಣ ಈ ಬಾರಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರು ಕ್ರಮವಾಗಿ ಬಿ ಮತ್ತು ಎ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವರ್ಷಾಂತ್ಯ ಭಾರತ ತಂಡ ಆಸ್ಟ್ರೇಲಿಯ ಪ್ರವಾಸ ಕೈಗೊಳ್ಳುವುದರಿಂದ ಪ್ರಸಿದ್ಧ್ ಕೃಷ್ಣ ಫಾರ್ಮ್ ಗಮನಿಸಲು ಇದೊಂದು ಉತ್ತಮ ಅವಕಾಶ.

ಇಂಡಿಯಾ ಬಿ ತಂಡದಲ್ಲಿ ವಾಷಿಂಗ್ಟನ್‌ ಸುಂದರ್‌, ಪೇಸರ್‌ ಮುಕೇಶ್‌ ಕುಮಾರ್‌ ಮೇಲೆ ಹೆಚ್ಚಿನ ನಿರೀಕ್ಷೆ ಇಡಲಾಗಿದೆ. ಇಂಡಿಯಾ ಸಿ ತಂಡದ ಋತುರಾಜ್‌ ಗಾಯಕ್ವಾಡ್‌-ಸಾಯಿ ಸುದರ್ಶನ್‌ ಭಾರತದ ಮೀಸಲು ಆರಂಭಿಕರಾಗಿದ್ದು, ರನ್‌ ರಾಶಿ ಪೇರಿಸಬೇಕಿದೆ. ಎಡಗೈ ಸ್ಪಿನ್ನರ್‌ ಮಾನವ್‌ ಸುಥಾರ್‌ ಡಿ ತಂಡದ ವಿರುದ್ಧ ಮ್ಯಾಚ್‌ ವಿನ್ನಿಂಗ್‌ ಸಾಧನೆಗೈದಿದ್ದರು. ಇದನ್ನು ಪುನರಾವರ್ತಿಸಿದರೆ ಉಜ್ವಲ ಭವಿಷ್ಯವನ್ನು ನಿರೀಕ್ಷಿಸಲಡ್ಡಿಯಿಲ್ಲ.

ಡಿ ತಂಡದ ನಾಯಕ ಶ್ರೇಯಸ್‌ ಅಯ್ಯರ್‌ ಪಾಲಿಗೆ ಇದೊಂದು ಬಲವಾದ ಅಗ್ನಿಪರೀಕ್ಷೆ. ತಂಡವನ್ನು ಗೆಲುವಿನ ಹಳಿಗೆ ತರಬೇಕಿರುವ ಅವರು, ಬ್ಯಾಟಿಂಗ್‌ನಲ್ಲೂ ಉತ್ತಮ ಪ್ರದರ್ಶನ ನೀಡಬೇಕಿದೆ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

China Open Badminton: Priyanshu Rajawat out

China Open Badminton: ಪ್ರಿಯಾಂಶು ರಾಜಾವತ್‌ ಹೊರಕ್ಕೆ

FIH: Harman, Sreejesh in award competition

FIH: ಪ್ರಶಸ್ತಿ ಸ್ಪರ್ಧೆಯಲ್ಲಿ ಹರ್ಮನ್‌, ಶ್ರೀಜೇಶ್‌

Asian Champions Trophy 2024: ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

Asian Champions Trophy 2024: ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

1-ccrr

Cricket ದಾಖಲೆಯ ಹೊಸ್ತಿಲಲ್ಲಿ ಭಾರತ-ಬಾಂಗ್ಲಾ ಸರಣಿ

K L RAhul

KL Rahul ಮತ್ತೆ ಆರ್‌ಸಿಬಿಗೆ ? ವೀಡಿಯೊ ವೈರಲ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.