Duleep Trophy ಕ್ರಿಕೆಟ್‌ : ಅಗರ್ವಾಲ್‌ ಬಳಗಕ್ಕೆ ಜಯ


Team Udayavani, Sep 16, 2024, 12:10 AM IST

1-acd

ಅನಂತಪುರ: ದುಲೀಪ್‌ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ದ್ವಿತೀಯ ಸುತ್ತಿನ ಮುಖಾಮುಖೀ ಯಲ್ಲಿ ಮಾಯಾಂಕ್‌ ಅಗರ್ವಾಲ್‌ ನೇತೃತ್ವದ ಇಂಡಿಯಾ ಎ ತಂಡ 186 ರನ್ನುಗಳಿಂದ ಇಂಡಿಯಾ ಡಿ ತಂಡವನ್ನು ಮಣಿಸಿ ಗೆಲುವಿನ ಖಾತೆ ತೆರೆಯಿತು. ಇಂಡಿಯಾ ಬಿ ಮತ್ತು ಇಂಡಿಯಾ ಸಿ ನಡುವಿನ ಇನ್ನೊಂದು ಪಂದ್ಯ ಡ್ರಾಗೊಂಡಿತು.

ಗೆಲುವಿಗೆ 488 ರನ್ನುಗಳ ಕಠಿನ ಗುರಿ ಪಡೆದಿದ್ದ ಇಂಡಿಯಾ ಡಿ, ರವಿವಾರ ಬ್ಯಾಟಿಂಗ್‌ ಮುಂದುವರಿಸಿ 301ಕ್ಕೆ ಆಲೌಟ್‌ ಆಯಿತು. ಇದು ಶ್ರೇಯಸ್‌ ಅಯ್ಯರ್‌ ನಾಯಕತ್ವದ ಇಂಡಿಯಾ ಡಿ ತಂಡಕ್ಕೆ ಎದುರಾದ ಸತತ 2ನೇ ಸೋಲು. ಹೀಗಾಗಿ ಅದು ಪ್ರಶಸ್ತಿ ರೇಸ್‌ನಿಂದ ಹೊರಬಿದ್ದಿದೆ. ಇಂಡಿಯಾ ಎ ಮೊದಲ ಪಂದ್ಯದಲ್ಲಿ ಇಂಡಿಯಾ ಬಿ ವಿರುದ್ಧ 76 ರನ್ನುಗಳ ಸೋಲನುಭವಿಸಿತ್ತು. ಆಗ ಶುಭಮನ್‌ ಗಿಲ್‌ ಎ ತಂಡದ ನಾಯಕರಾಗಿದ್ದರು.

ಚೇಸಿಂಗ್‌ ವೇಳೆ ರಿಕಿ ಭುಯಿ ಶತಕವೊಂದನ್ನು ಬಾರಿಸಿ ಹೋರಾಟ ಸಂಘಟಿಸಿದರೂ ಪ್ರಯೋಜನವಾಗ ಲಿಲ್ಲ. 195 ಎಸೆತಗಳನ್ನು ಎದುರಿಸಿ ನಿಂತ ಅವರು 14 ಬೌಂಡರಿ, 3 ಸಿಕ್ಸರ್‌ ನೆರವಿನಿಂದ 111 ರನ್‌ ಹೊಡೆದರು. ಉಳಿದಂತೆ ನಾಯಕ ಶ್ರೇಯಸ್‌ ಅಯ್ಯರ್‌ 41, ಕೀಪರ್‌ ಸಂಜು ಸ್ಯಾಮ್ಸನ್‌ 40 ರನ್‌ ಮಾಡಿದರು.

ಇಂಡಿಯಾ ಎ ಬೌಲಿಂಗ್‌ ವಿಭಾಗದಲ್ಲಿ ಸ್ಪಿನ್ನರ್‌ಗಳಾದ ತನುಷ್‌ ಕೋಟ್ಯಾನ್‌ (73ಕ್ಕೆ 4) ಮತ್ತು ಶಮ್ಸ್‌ ಮುಲಾನಿ (117ಕ್ಕೆ 3) ಹೆಚ್ಚಿನ ಯಶಸ್ಸು ಸಾಧಿಸಿದರು. ಮೊದಲ ಇನ್ನಿಂಗ್ಸ್‌ ವೇಳೆ ಬ್ಯಾಟಿಂಗ್‌ನಲ್ಲೂ ಮಿಂಚಿದ್ದ ಮುಲಾನಿ (89) ಪಂದ್ಯಶ್ರೇಷ್ಠರೆನಿಸಿದರು.

ಅಭಿಮನ್ಯು ಅಜೇಯ 157
ಇನ್ನೊಂದು ಪಂದ್ಯದಲ್ಲಿ ಇಂಡಿಯಾ ಸಿ ವಿರುದ್ಧ ಮೊದಲ ಇನ್ನಿಂಗ್ಸ್‌ ಮುನ್ನಡೆ ಸಂಪಾದಿಸುವಲ್ಲಿ ಇಂಡಿಯಾ ಬಿ ವಿಫ‌ಲವಾಯಿತು. ಸಿ ತಂಡದ 525 ರನ್ನುಗಳ ಬೃಹತ್‌ ಮೊತ್ತಕ್ಕೆ ಉತ್ತರವಾಗಿ 332ಕ್ಕೆ ಆಲೌಟ್‌ ಆಯಿತು. ಆದರೆ ಇಂಡಿಯಾ ಬಿ ತಂಡದ ನಾಯಕ ಹಾಗೂ ಆರಂಭಕಾರ ಅಭಿಮನ್ಯು ಈಶ್ವರನ್‌ ಕೊನೆಯ ವರೆಗೂ ಕ್ರೀಸ್‌ ಆಕ್ರಮಿಸಿಕೊಂಡು 157 ರನ್‌ ಮಾಡಿ ಅಜೇಯರಾಗಿ ಉಳಿದರು (286 ಎಸೆತ, 14 ಬೌಂಡರಿ, 1 ಸಿಕ್ಸರ್‌). ಸಿ ತಂಡದ ಮಧ್ಯಮ ವೇಗಿ ಅಂಶುಲ್‌ ಕಾಂಬೋಜ್‌ ಘಾತಕ ದಾಳಿಯನ್ನು ಮುಂದುವರಿಸಿ 69ಕ್ಕೆ 8 ವಿಕೆಟ್‌ ಉಡಾಯಿಸಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಪಂದ್ಯಕ್ಕೆ ಡ್ರಾ ಮುದ್ರೆ ಬೀಳುವ ವೇಳೆ ಇಂಡಿಯಾ ಸಿ ದ್ವಿತೀಯ ಇನ್ನಿಂಗ್ಸ್‌ನಲ್ಲಿ 4ಕ್ಕೆ 128 ರನ್‌ ಗಳಿಸಿತ್ತು.
3ನೇ ಹಾಗೂ ಕೊನೆಯ ಸುತ್ತಿನ ಸ್ಪರ್ಧೆಗಳು ಸೆ. 19ರಂದು ಅನಂತಪುರದಲ್ಲೇ ಆರಂಭವಾಗಲಿವೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.