Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ


Team Udayavani, Sep 14, 2024, 9:13 PM IST

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

ಅನಂತಪುರ: ಆರಂಭಕಾರ ಪ್ರಥಮ್‌ ಸಿಂಗ್‌ ಹಾಗೂ ವನ್‌ಡೌನ್‌ ಬ್ಯಾಟರ್‌ ತಿಲಕ್‌ ವರ್ಮ ಬಾರಿಸಿದ ಅಮೋಘ ಶತಕದ ನೆರವಿನಿಂದ ಇಂಡಿಯಾ ಡಿ ಎದುರಿನ ದುಲೀಪ್‌ ಟ್ರೋಫಿ ಪಂದ್ಯದಲ್ಲಿ ಇಂಡಿಯಾ ಎ ಮೇಲುಗೈ ಸಾಧಿಸಿದೆ. ಇಂಡಿಯಾ ಡಿ ತಂಡಕ್ಕೆ 488 ರನ್‌ ಗೆಲುವಿನ ಗುರಿ ನೀಡಲಾಗಿದ್ದು, ಒಂದು ವಿಕೆಟಿಗೆ 62 ರನ್‌ ಮಾಡಿ ಶನಿವಾರದ ಆಟ ಮುಗಿಸಿದೆ.

ಇಂಡಿಯಾ ಎ 3 ವಿಕೆಟಿಗೆ 380 ರನ್‌ ಪೇರಿಸಿ ದ್ವಿತೀಯ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿತು. ಪ್ರಥಮ್‌ ಸಿಂಗ್‌ 122 ರನ್‌ ಹೊಡೆದರೆ (189 ಎಸೆತ, 12 ಬೌಂಡರಿ, 1 ಸಿಕ್ಸರ್‌), ತಿಲಕ್‌ ವರ್ಮ 111 ರನ್‌ ಗಳಿಸಿ ಅಜೇಯರಾಗಿ ಉಳಿದರು (193 ಎಸೆತ, 9 ಬೌಂಡರಿ). ಇಬವರಿಬ್ಬರ 2ನೇ ವಿಕೆಟ್‌ ಜತೆಯಾಟದಲ್ಲಿ 104 ರನ್‌ ಒಟ್ಟುಗೂಡಿತು. ಪ್ರಥಮ್‌ ಸಿಂಗ್‌ ಮತ್ತು ನಾಯಕ ಮಾಯಾಂಕ್‌ ಅಗರ್ವಾಲ್‌ (56) ಮೊದಲ ವಿಕೆಟ್‌ ಜತೆಯಾಟದಲ್ಲಿ 115 ರನ್‌ ಪೇರಿಸಿದ್ದರು. ಶಾಶ್ವತ್‌ ರಾವತ್‌ ಮತ್ತೋರ್ವ ಪ್ರಮುಖ ಸ್ಕೋರರ್‌ (ಔಟಾಗದೆ 64).

ಅಗರ್ವಾಲ್‌ ಬಳಗಕ್ಕೆ 107 ರನ್ನುಗಳ ಮೊದಲ ಇನ್ನಿಂಗ್ಸ್‌ ಲೀಡ್‌ ಲಭಿಸಿತ್ತು. ಇಂಡಿಯಾ ಎ ತಂಡದ 290 ರನ್ನುಗಳಿಗೆ ಉತ್ತರವಾಗಿ ಇಂಡಿಯಾ ಡಿ 183ಕ್ಕೆ ಆಲೌಟ್‌ ಆಗಿತ್ತು. ಡಿ ತಂಡದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಯಶ್‌ ದುಬೆ 15 ಮತ್ತು ರಿಕಿ ಭುಯಿ 44 ರನ್‌ ಗಳಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಸಂಕ್ಷಿಪ್ತ ಸ್ಕೋರ್‌:

ಭಾರತ ಎ 290, 380/3 ಡಿಕ್ಲೇರ್‌ (ಪ್ರಥಮ್‌ 122, ತಿಲಕ್‌ 111, ಸೌರಭ್‌ 110ಕ್ಕೆ 2), ಭಾರತ ಡಿ 183, 19 ಓವರ್‌ನಲ್ಲಿ 62/1 (ಯಶ್‌ 15, ರಿಕಿ 44, ಖಲೀಲ್‌ 17ಕ್ಕೆ 1).

ಬಿ ಪರ ಈಶ್ವರನ್‌ ಹೋರಾಟ:

ಇನ್ನೊಂದು ಪಂದ್ಯದಲ್ಲಿ, ಇಂಡಿಯಾ ಸಿ ತಂಡದ 525 ರನ್ನುಗಳ ಬೃಹತ್‌ ಮೊತ್ತಕ್ಕೆ ಜವಾಬು ನೀಡುತ್ತಿರುವ ಇಂಡಿಯಾ ಬಿ 7 ವಿಕೆಟಿಗೆ 309 ರನ್‌ ಗಳಿಸಿ 3ನೇ ದಿನದಾಟ ಮುಗಿಸಿದೆ. ನಾಯಕ, ಆರಂಭಕಾರ ಅಭಿಮನ್ಯು ಈಶ್ವರನ್‌ 143 ರನ್‌ ಗಳಿಸಿ ಹೋರಾಟವೊಂದನ್ನು ಜಾರಿಯಲ್ಲಿರಿಸಿದ್ದಾರೆ.

ಅಭಿಮನ್ಯು ಈಶ್ವರನ್‌ ಮತ್ತು ಎನ್‌. ಜಗದೀಶನ್‌ ಮೊದಲ ವಿಕೆಟಿಗೆ 129 ರನ್‌ ಪೇರಿಸಿ ಉತ್ತಮ ಬುನಾದಿಯನ್ನೇನೋ ನಿರ್ಮಿಸಿದರು. ಆದರೆ 70 ರನ್‌ ಮಾಡಿದ ಜಗದೀಶನ್‌ ಔಟಾದ ಬಳಿಕ ತಂಡ ಕುಸಿತಕ್ಕೆ ಸಿಲುಕಿತು. ಮಧ್ಯಮ ವೇಗಿ ಅಂಶುಲ್‌ ಕಾಂಬೋಜ್‌ 66 ರನ್ನಿಗೆ 5 ವಿಕೆಟ್‌ ಉರುಳಿಸಿ ಮಿಂಚಿದರು.

ಸಂಕ್ಷಿಪ್ತ ಸ್ಕೋರ್‌:

ಭಾರತ ಸಿ 124.1 ಓವರ್‌ನಲ್ಲಿ 525/10 (ಕಿಶನ್‌ 111, ಮನವ್‌ 82, ರಾಹುಲ್‌ 73ಕ್ಕೆ 4), ಭಾರತ ಬಿ 101 ಓವರ್‌ನಲ್ಲಿ 309/7 (ಅಭಿಮನ್ಯು 143, ಜಗದೀಶನ್‌ 70, ಅಂಶುಲ್‌ 66ಕ್ಕೆ 5)

 

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

China Open Badminton: Priyanshu Rajawat out

China Open Badminton: ಪ್ರಿಯಾಂಶು ರಾಜಾವತ್‌ ಹೊರಕ್ಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.