![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 10, 2023, 9:46 AM IST
ಕೋಲ್ಕತ್ತಾ: ಗಾಲೆ ಕ್ರಿಕೆಟ್ ಸಂಸ್ಥೆಯ ಅಧೀನದಲ್ಲಿರುವ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ.
ಕ್ರೀಡಾಂಗಣದ ಡ್ರೆಸ್ಸಿಂಗ್ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪ್ರಕಾರ ಬುಧವಾರ ತಡರಾತ್ರಿ ಕ್ರೀಡಾಂಗಣದ ಡ್ರೆಸ್ಸಿಂಗ್ ರೂಂನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಸಂಭವನೀಯ ಅವಘಡವೊಂದು ತಪ್ಪಿದಂತಾಗಿದೆ. ಆದಾಗ್ಯೂ ಡ್ರೆಸ್ಸಿಂಗ್ ರೂಂನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.
ನವೀಕರಣ ಕಾರ್ಯ ನಡೆಯುತಿತ್ತು:
ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ವಿಶ್ವ ಕಪ್ ಪಂದ್ಯಾಟಕ್ಕೆ ಸಜ್ಜುಗೊಳ್ಳಬೇಕಾಗಿದ್ದ ಕ್ರೀಡಾಂಗಣದ ನವೀಕರಣ ಕಾರ್ಯ ನಡೆಯುತ್ತಿತ್ತು ಎನ್ನಲಾಗಿದೆ ಈ ನಡುವೆ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದ ಸಂಭವನೀಯ ಅವಘಡ ತಪ್ಪಿದ್ದು ಆದರೂ ಡ್ರೆಸ್ಸಿಂಗ್ ರೂಮ್ ನಲ್ಲಿದ್ದ ವಸ್ತುಗಳು ಸುಟ್ಟು ಹೋಗಿವೆ ಎನ್ನಲಾಗಿದೆ.
ಸುಟ್ಟು ಕರಕಲಾದ ವಸ್ತುಗಳು :
ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮಧ್ಯರಾತ್ರಿ 12 ರ ಸುಮಾರಿಗೆ ಕ್ರೀಡಾಂಗಣದ ಡ್ರೆಸ್ಸಿಂಗ್ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಗ್ನಿಶಾಮಕ ಇಲಾಖೆಗೆ ಕರೆ ಬಂದಿತು. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಒಂದು ಗಂಟೆ ಶ್ರಮವಹಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬೆಂಕಿ ಅನಾಹುತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದು ಬಂದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಘಡದಲ್ಲಿ ಡ್ರೆಸ್ಸಿಂಗ್ ರೂಮಿನ ಫಾಲ್ಸ್ ಸೀಲಿಂಗ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರೊಂದಿಗೆ ಅಲ್ಲಿ ಇಟ್ಟಿದ್ದ ಸಾಮಾಗ್ರಿಗಳೂ ನಾಶವಾಗಿವೆ ಎನ್ನಲಾಗಿದೆ.
ಅಕ್ಟೋಬರ್ ನಿಂದ ವಿಶ್ವಕಪ್ ಪಂದ್ಯಾಟ :
ಅಕ್ಟೋಬರ್ 5 ರಿಂದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ವಿಶ್ವಕಪ್ ಕೂಟ ನಡೆಯಲಿದ್ದು ಮೊದಲ ಪಂದ್ಯ ನೆದರ್ಲೆಂಡ್ಸ್ ಮತ್ತು ಬಾಂಗ್ಲಾದೇಶ ನಡುವೆ ಅಕ್ಟೋಬರ್ 28 ರಂದು ನಡೆಯಲಿದೆ. ನವೆಂಬರ್ 5 ರಂದು ಈ ಮೈದಾನದಲ್ಲಿ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಇತ್ತೀಚೆಗಷ್ಟೇ ಐಸಿಸಿ ತಂಡವೊಂದು ಈ ಕ್ರೀಡಾಂಗಣದ ವ್ಯವಸ್ಥೆಯನ್ನು ನೋಡಲು ಬಂದಿತ್ತು.
ಇದನ್ನೂ ಓದಿ: Uttarakhand: ಭಾರಿ ಮಳೆಗೆ 9 ಮಂದಿ ಮೃತ್ಯು… ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಭೆ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.