![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 28, 2022, 11:02 AM IST
ಬರ್ಮಿಂಗ್ ಹ್ಯಾಮ್: ಭಾರತದ ವಿರುದ್ಧ ಜುಲೈ 1ರಿಂದ ಆರಂಭವಾಗಲಿರುವ ಅಂತಿಮ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಹೆಸರಿಸಲಾಗಿದೆ. ಬೆನ್ ಸ್ಟೋಕ್ಸ್ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನು ಇಂಗ್ಲೆಂಡ್ ಕಣಕ್ಕಿಳಿಸಲಿದೆ.
ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು 3-0 ಅಂತರದಿಂದ ಗೆದ್ದ ಹುಮ್ಮಸ್ಸಿನಲ್ಲಿರುವ ಆಂಗ್ಲರು ಭಾರತದ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಅಣಿಯಾಗುತ್ತಿದ್ದಾರೆ.
ವಿಕೆಟ್ ಕೀಪರ್ ಬೆನ್ ಫೋಕ್ಸ್ ಗೆ ಕೋವಿಡ್ ಪಾಸಿಟಿವ್ ಆದ ಕಾರಣ ಬ್ಯಾಕಪ್ ಕೀಪರ್ ಆಗಿ ಸ್ಯಾಮ್ ಬಿಲ್ಲಿಂಗ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಹಿರಿಯ ವೇಗಿಗಳಾದ ಜೇಮ್ಸ್ ಆ್ಯಂಡರ್ಸನ್ ಮತ್ತು ಸ್ಟುವರ್ಟ್ ಬ್ರಾಡ್ ಇಬ್ಬರೂ ತಂಡದಲ್ಲಿದ್ದಾರೆ.
ಇದನ್ನೂ ಓದಿ:ಮತ್ತೆ ನಿರ್ದೇಶನದತ್ತ ಅರ್ಜುನ್ ಸರ್ಜಾ: ಪುತ್ರಿಯ ಹೊಸ ಚಿತ್ರಕ್ಕೆ ನಿರ್ದೇಶನ
ಭಾರತ ತಂಡದ ನಾಯಕ ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್ ಆದ ಕಾರಣ ಅವರು ಕ್ವಾರಂಟೈನ್ ನಲ್ಲಿದ್ದಾರೆ. ಒಂದು ವೇಳೆ ರೋಹಿತ್ ಲಭ್ಯರಾಗದಿದ್ದರೆ ಅವರ ಬದಲಿಗೆ ಜಸ್ಪ್ರೀತ್ ಬುಮ್ರಾ ತಂಡ ಮುನ್ನಡೆಸಬಹುದು. ರೋಹಿತ್ ಗೆ ಬ್ಯಾಕಪ್ ಆರಂಭಿಕ ಆಟಗಾರನಾಗಿ ಮಯಾಂಕ್ ಅಗರ್ವಾಲ್ ಈಗಾಗಲೇ ತಂಡ ಕೂಡಿಕೊಂಡಿದ್ದಾರೆ.
2011ರ ಸಪ್ಟೆಂಬರ್ ನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಭಾರತ 2-1 ಅಂತರದಿಂದ ಮುಂದಿದೆ. ಕೋವಿಡ್ ಕಾರಣಗಳಿಂದ ಅಂತಿಮ ಪಂದ್ಯ ಮುಂದೂಡಲಾಗಿತ್ತು. ಆ ಪಂದ್ಯ ಜುಲೈ 1ರಿಂದ ಎಜ್ ಬಾಸ್ಟನ್ ನಲ್ಲಿ ನಡೆಯಲಿದೆ.
ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾ), ಜೇಮ್ಸ್ ಆಂಡರ್ಸನ್, ಜಾನಿ ಬೈರ್ಸ್ಟೋ, ಸ್ಯಾಮ್ ಬಿಲ್ಲಿಂಗ್ಸ್, ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಫೋಕ್ಸ್, ಜ್ಯಾಕ್ ಲೀಚ್, ಅಲೆಕ್ಸ್ ಲೀಸ್, ಕ್ರೇಗ್ ಓವರ್ಟನ್, ಜೇಮೀ ಓವರ್ಟನ್, ಮ್ಯಾಥ್ಯೂ ಪಾಟ್ಸ್, ಓಲಿ ಪೋಪ್, ಜೋ ರೂಟ್.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.