ಮೂರನೇ ಟೆಸ್ಟ್‌ ಪಂದ್ಯ: ದಕ್ಷಿಣ ಆಫ್ರಿಕಾ 118ಕ್ಕೆ ಸರ್ವಪತನ; ಇಂಗ್ಲೆಂಡ್‌ ಮೇಲುಗೈ 


Team Udayavani, Sep 10, 2022, 10:21 PM IST

ಮೂರನೇ ಟೆಸ್ಟ್‌ ಪಂದ್ಯ: ದಕ್ಷಿಣ ಆಫ್ರಿಕಾ 118ಕ್ಕೆ ಸರ್ವಪತನ; ಇಂಗ್ಲೆಂಡ್‌ ಮೇಲುಗೈ 

ಓವಲ್‌: ಸರಣಿ ನಿರ್ಣಾಯಕ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ಮೇಲುಗೈ ಸಾಧಿಸಿದೆ. ಪಂದ್ಯದ ಮೂರನೇ ದಿನ ಆಟ ಆರಂಭವಾಗಿದ್ದು ಆತಿಥೇಯ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ಕೇವಲ 118 ರನ್ನಿಗೆ ಆಲೌಟಾಗಿದೆ.

ಇದಕ್ಕುತ್ತರವಾಗಿ ಇಂಗ್ಲೆಂಡ್‌ 4 ವಿಕೆಟಿಗೆ 107 ರನ್‌ ಗಳಿಸಿ ಆಡುತ್ತಿದೆ. ಈ ನಡುವೆ ಸ್ವಲ್ಪ ಹೊತ್ತು ಮಳೆಯಿಂದ ಆಟ ಸ್ಥಗಿತಗೊಂಡಿತ್ತು. ಒಲಿ ಪೋಪ್‌ 48 ರನ್‌ ಗಳಿಸಿ ಆಡುತ್ತಿದ್ದಾರೆ.

ಒಲಿ ರಾಬಿನ್ಸನ್‌ (49ಕ್ಕೆ 5) ಮತ್ತು ಸ್ಟುವರ್ಟ್‌ ಬ್ರಾಡ್‌ (41ಕ್ಕೆ 4) ಅವರ ಭರ್ಜರಿ ದಾಳಿಗೆ ದಕ್ಷಿಣ ಆಫ್ರಿಕಾ ನೆಲಕಚ್ಚಿದೆ. ಪ್ರವಾಸಿ ತಂಡದ ಯಾವುದೇ ಆಟಗಾರ ಉತ್ತಮ ಪ್ರದರ್ಶನ ನೀಡಲು ವಿಫ‌ಲರಾದರು. 30 ರನ್‌ ಗಳಿಸಿದ ಮಾರ್ಕೊ ಜಾನ್ಸೆನ್‌ ತಂಡದ ಗರಿಷ್ಠ ಸ್ಕೋರರ್‌ ಎನಿಸಿಕೊಂಡರು.

ಎರಡನೇ ಓವರಿನಲ್ಲಿಯೇ ತಂಡದ ಮೊದಲ ವಿಕೆಟ್‌ ಪತನಗೊಂಡಿತ್ತು. 36 ರನ್‌ ಗಳಿಸುವಷ್ಟರಲ್ಲಿ ಆರು ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು. ಖಾಯ ಝಂಡೊ ಮತ್ತು ಮಾರ್ಕೊ ಜಾನ್ಸೆನ್‌ 7 ವಿಕೆಟಿಗೆ 36 ರನ್‌ ಪೇರಿಸಿದ್ದರಿಂದ ತಂಡ ಸ್ವಲ್ಪಮಟ್ಟಿಗೆ ಚೇತರಿಸಿಕೊಂಡಿತು. ಚಾನ್ಸೆನ್‌ ಎಂಟನೆಯವರಾಗಿ ಔಟ್‌ ಆದಾಗ ತಂಡದ ಮೊತ್ತ 99 ತಲಪಿತ್ತು.

ಶನಿವಾರದ ಆಟ ಆರಂಭವಾಗುವ ಮೊದಲು ಅಗಲಿದ ರಾಜಿ ಎಲಿಜಬೆತ್‌ ಗೌರವಾರ್ಥ ಉಭಯ ತಂಡಗಳ ಸದಸ್ಯರು ಮೈದಾನದಲ್ಲಿ ಸಾಲಾಗಿ ನಿಂತು ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಿದರು. ಈ ಮೊದಲು ಗುರುವಾರದ ಮೊದಲ ದಿನದ ಆಟ ಟಾಸ್‌ಗಷ್ಟೇ ಸೀಮಿತವಾಗಿತ್ತು. ಬಳಿಕ ಸುರಿದ ಭಾರೀ ಮಳೆಯಿಂದ ಒಂದೂ ಎಸೆತ ಸಾಧ್ಯವಾಗಲಿಲ್ಲ. ಅಗಲಿದ ರಾಣಿ ಎಲಿಜಬೆತ್‌ ಗೌರವಾರ್ಥ ಶುಕ್ರವಾರದ ಆಟವನ್ನು ಮುಂದೂಡಲಾಗಿತ್ತು. ಈ ನಿರ್ಧಾರ ದಿಂದ ಪಂದ್ಯವನ್ನು ಇನ್ನೊಂದು ದಿನಕ್ಕೆ ವಿಸ್ತರಿಸಲು ಪ್ರಯತ್ನಿಸಲಾಗಿತ್ತು. ಆದರೆ ದಕ್ಷಿಣ ಆಫ್ರಿಕಾ ತಂಡ ಮಂಗಳವಾರವೇ ತವರಿಗೆ ಮರಳಬೇಕಿದ್ದರಿಂದ ಇದು ಸಾಧ್ಯವಾಗಲಿಲ್ಲ.

ಟಾಪ್ ನ್ಯೂಸ್

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.