![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Jul 7, 2019, 5:54 AM IST
ಲಂಡನ್: ರವಿವಾರ ಧೋನಿ ಹುಟ್ಟುಹಬ್ಬ. ಅವರು 39ರ ಹರೆಯಕ್ಕೆ ಕಾಲಿಡಲಿದ್ದಾರೆ. ಎಲ್ಲ ಕಡೆಯಿಂದ ಅಭಿಮಾನದ ಮಹಾಪೂರವೇ ಹರಿದುಬರುತ್ತಿದೆ. ಇದರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ) ಅಭಿನಂದನೆ ಅತೀ ವಿಶಿಷ್ಟವಾದೆ. “ಧೋನಿಯೆಂದರೆ ಕೇವಲ ಒಂದು ಹೆಸರಲ್ಲ, ಅವರೊಂದು ಮರೆಯಲಾಗದ ಪರಂಪರೆ. ಅವರು ಭಾರತೀಯ ಕ್ರಿಕೆಟಿನ ಚಹರೆಯನ್ನೇ ಬದಲಿಸಿದರು. ಜಾಗತಿಕವಾಗಿ ಲಕ್ಷಾಂತರ ಮಂದಿಯನ್ನು ಪ್ರಭಾವಿಸಿದ ವ್ಯಕ್ತಿ ಅವರು’ ಎಂದು ಐಸಿಸಿ ಹೇಳಿದೆ.
ಧೋನಿ ನಾಯಕನಾಗಿ ಅದ್ಭುತ ಯಶಸ್ಸು ಸಾಧಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡ ಮೂರೂ ಮಾದರಿಗಳಲ್ಲಿ ಅವರ ನಾಯಕತ್ವದಡಿಯಲ್ಲಿ ವಿಶ್ವದ ನಂ.1 ಎನಿಸಿತ್ತು. ನಾಯಕನಾಗಿ ಅವರು ಒಂದು ಟಿ20, ಒಂದು ಏಕದಿನ ವಿಶ್ವಕಪ್ ಗೆದ್ದಿದ್ದಾರೆ. ಹಾಗೆಯೇ ಮಿನಿ ವಿಶ್ವಕಪ್ ಎಂದು ಕರೆಸಿಕೊಳ್ಳುವ ಚಾಂಪಿ ಯನ್ಸ್ ಟ್ರೋಫಿಯನಣು ಗೆದ್ದು ಕೊಟ್ಟಿದ್ದಾರೆ. ವಿಶ್ವದ ಬೇರಾ ವುದೇ ನಾಯಕ ಈ ಮೂರು ಕಿರೀಟಗಳನ್ನು ಗೆದ್ದಿಲ್ಲ. ಇದೊಂದು ವಿಶ್ವದಾಖಲೆಯಾಗಿದೆ. ಮೇಲು ಕ್ರಮಾಂಕದ ಬ್ಯಾಟ್ಸ್ಮನ್ ಆಗಿ, ಕಡೆಯ ಕಡೆಯ ಹಂತದ ಬ್ಯಾಟ್ಸ್ ಮನ್ ಆಗಿ ಅವರು ಜಾಗತಿಕ ಖ್ಯಾತಿ ಗಳಿಸಿದ್ದಾರೆ. ಈಗಲೂ ಭಾರತೀಯ ಕ್ರಿಕೆಟ್ ತಂಡದಲ್ಲಿ ಅವರಿಗೆ ಅತ್ಯಂತ ಮಹತ್ವದ ಸ್ಥಾನವಿದೆ.
“ನಾನು ಈಗಲೇ ನಿವೃತ್ತಿಯಾಗಬೇಕೆಂದು ಹಲವರು ಕಾಯುತ್ತಿದ್ದಾರೆ’
ವಿಶ್ವಕಪ್ ಮುಕ್ತಾಯದ ಹಂತಕ್ಕೆ ಬಂದಿದೆ. ಧೋನಿ ನಿವೃತ್ತಿಯಾಗುತ್ತಾರೆನ್ನುವ ಸುದ್ದಿ ಜೋರಾಗಿದೆ. ಈ ಬಗ್ಗೆ ಮೊದಲ ಬಾರಿ ಸ್ವತಃ ಧೋನಿ ಮೌನ ಮುರಿದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. “ನಾನು ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಮುನ್ನವೇ ನಿವೃತ್ತಿಯಾಗಬೇಕೆಂದು ಬೇಕಾದಷ್ಟು ಮಂದಿ ಹಾರೈಸುತ್ತಿದ್ದಾರೆ. ಆದರೆ ಯಾವಾಗ ನಿವೃತ್ತಿಯಾಗುತ್ತೇನೆಂದು ನನಗೇ ಗೊತ್ತಿಲ್ಲ’ ಎಂದು ಹೇಳಿದ್ದಾರೆ. ಈ ಹೇಳಿಕೆ ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.