ಭಾರತ-ನ್ಯೂಜಿಲ್ಯಾಂಡ್‌ ಟಿ20 ಟ್ರೋಫಿ ಅನಾವರಣ; ಮುಂದಿನ ವಿಶ್ವಕಪ್‌ಗೆ ಕಾರ್ಯಯೋಜನೆ: ಪಾಂಡ್ಯ


Team Udayavani, Nov 17, 2022, 8:00 AM IST

ಭಾರತ-ನ್ಯೂಜಿಲ್ಯಾಂಡ್‌ ಟಿ20 ಟ್ರೋಫಿ ಅನಾವರಣ; ಮುಂದಿನ ವಿಶ್ವಕಪ್‌ಗೆ ಕಾರ್ಯಯೋಜನೆ: ಪಾಂಡ್ಯ

ವೆಲ್ಲಿಂಗ್ಟನ್‌: ರೊಂಯ್ಯನೆ ಬೀಸುತ್ತಿದ್ದ ಗಾಳಿಯ ನಡುವೆ ಭಾರತ-ನ್ಯೂಜಿಲ್ಯಾಂಡ್‌ ನಡುವಿನ ಟಿ20 ಸರಣಿ ಟ್ರೋಫಿ ಅನಾವರಣ, ಬಳಿಕ ನಾಯಕರಾದ ಕೇನ್‌ ವಿಲಿಯಮ್ಸನ್‌-ಹಾರ್ದಿಕ್‌ ಪಾಂಡ್ಯ ಅವರಿಂದ ವೆಲ್ಲಿಂಗ್ಟನ್‌ ಬೀದಿಯಲ್ಲಿ “ಕ್ರೊಕೊಡೈಲ್‌ ಬೈಕ್‌’ ಸವಾರಿ, ಪತ್ರಿಕಾಗೋಷ್ಠಿ, ಟೀಮ್‌ ಇಂಡಿಯಾದಿಂದ ಕಠಿನ ಅಭ್ಯಾಸ… ಹೀಗೆ ಎರಡು ದಿನ ಮೊದಲೇ ಸರಣಿಗೆ ಸಿದ್ಧತೆ ಆರಂಭಗೊಳ್ಳುವ ಮೂಲಕ ಟೀಮ್‌ ಇಂಡಿಯಾ ನೂತನ ನಿರೀಕ್ಷೆಗಳನ್ನು ಬಿತ್ತಿದೆ.

ಮಾಧ್ಯಮದವರೊಂದಿಗೆ ಮಾತಾಡಿದ ಭಾರತ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ, “2024ರಲ್ಲಿ ನಡೆಯಲಿರುವ ಮುಂದಿನ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಈ ಸರಣಿಯಿಂದಲೇ ಸಿದ್ಧತೆ, ಕಾರ್ಯಯೋಜನೆ ಆರಂಭಗೊಳ್ಳಲಿದೆ’ ಎಂದರು.

ಇತ್ತಂಡಗಳ ನಡುವಿನ ಮೊದಲ ಟಿ20 ಪಂದ್ಯ ಶುಕ್ರವಾರ ಇಲ್ಲಿ ನಡೆಯಲಿದೆ. ಎರಡೂ ತಂಡಗಳು ಟಿ20 ವಿಶ್ವಕಪ್‌ ಸೆಮಿಫೈನಲ್‌ ಹಂತದಲ್ಲಿ ಹೊರಬಿದ್ದ ಕಾರಣ ಒಂದೇ ದೋಣಿಯಲ್ಲಿ ಪಯಣಿಸುತ್ತಿವೆ. ಇತ್ತಂಡಗಳ ಸ್ಥಿತಿಯೂ ಒಂದೇ ಆಗಿದೆ. ಆದರೆ ಭಾರತ ತನ್ನ ತಂಡದಲ್ಲಿ ಬಹಳಷ್ಟು ಬದಲಾವಣೆ ಮಾಡಿಕೊಂಡರೆ, ನ್ಯೂಜಿಲ್ಯಾಂಡ್‌ ಸೀನಿಯರ್‌ ಆಟಗಾರರಾದ ಮಾರ್ಟಿನ್‌ ಗಪ್ಟಿಲ್‌ ಮತ್ತು ಟ್ರೆಂಟ್‌ ಬೌಲ್ಟ್ಗೆ ವಿಶ್ರಾಂತಿ ನೀಡಿ ಹೋರಾಟಕ್ಕಿಳಿಯಲಿದೆ.

“ಹೌದು. ವಿಶ್ವಕಪ್‌ ಸಾಧನೆ ನಿರಾಸೆ ಮೂಡಿಸಿದೆ. ಆದರೆ ನಾವು ವೃತ್ತಿಪರ ಆಟಗಾರರು. ಇದನ್ನೆಲ್ಲ ನಿಭಾಯಿಸಿಕೊಂಡು ಮುಂದು ವರಿಯಲಿದ್ದೇವೆ. ತಪ್ಪುಗಳನ್ನು ತಿದ್ದಿಕೊಂಡು ನಡೆದರೆ ಧನಾತ್ಮಕ ಫ‌ಲಿತಾಂಶ ಸಾಧ್ಯ. ಮುಂದಿನ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಈ ಸರಣಿಯೇ ಮೊದಲ ಮೆಟ್ಟಿಲಾಗಬೇಕು, ಇಲ್ಲಿಂದಲೇ ಸೂಕ್ತ ಕಾರ್ಯಯೋಜನೆ ರೂಪಿಸಿಕೊಂಡು ಮುಂದಡಿ ಇಡಬೇಕು’ ಎಂಬುದಾಗಿ ಹಾರ್ದಿಕ್‌ ಪಾಂಡ್ಯ ಹೇಳಿದರು.

“ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಇನ್ನೂ 2 ವರ್ಷ ಇದೆ. ಈ ಅವಧಿಯಲ್ಲಿ ನಾವು ಸಾಕಷ್ಟು ಕ್ರಿಕೆಟ್‌ ಆಡಲಿಕ್ಕಿದೆ. ಎಲ್ಲರಿಗೂ ಧಾರಾಳ ಅವಕಾಶ ಲಭಿಸಲಿದೆ. ನಮ್ಮ ಈ ತಂಡದ ತುಂಬ ಯುವ ಆಟಗಾರರೇ ತುಂಬಿದ್ದಾರೆ. ಎಲ್ಲರೂ ಖುಷಿ ಖುಷಿಯಲ್ಲಿದ್ದಾರೆ. ಇವರ ಭವಿಷ್ಯ ಮುಂದೆ ನಿರ್ಧಾರಗೊಳ್ಳಲಿದೆ’ ಎಂದರು.

2024ರ ಟಿ20 ವಿಶ್ವಕಪ್‌ ಪಂದ್ಯಾವಳಿ ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ನಡೆಯಲಿದೆ.

 

View this post on Instagram

 

A post shared by BLACKCAPS (@blackcapsnz)


ಹಾರಿಹೋದ ಟ್ರೋಫಿ!
ಟಿ20 ಟ್ರೋಫಿ ಅನಾವರಣ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವೆಲ್ಲಿಂಗ್ಟನ್‌ನಲ್ಲಿ ತೀವ್ರ ಗಾಳಿ ಬೀಸುತ್ತಿತ್ತು. ಇದರ ರಭಸಕ್ಕೆ ಟೇಬಲ್‌ ಮೇಲೆ ಇರಿಸಲಾಗಿದ್ದ ಟ್ರೋಫಿ ಹಾರಿ ಹೋಯಿತು. ಕೂಡಲೇ ಇದನ್ನು ಕೇನ್‌ ವಿಲಿಯಮ್ಸನ್‌ “ಕ್ಯಾಚ್‌’ ಮಾಡಿದರು. ಉರುಳಿ ಬೀಳುತ್ತಿದ್ದ ಟೇಬಲ್‌ ಅನ್ನು ಹಾರ್ದಿಕ ಪಾಂಡ್ಯ ತಡೆದು ನಿಲ್ಲಿಸಿದರು. ಈ ರೀತಿ ಔಪಚಾರಿಕ ಕಾರ್ಯಕ್ರಮ ಸಾಂಗವಾಗಿ ನೆರವೇರಿತು.

ವೆಲ್ಲಿಂಗ್ಟನ್‌ನಲ್ಲಿ ಭಾರತ-ನ್ಯೂಜಿಲ್ಯಾಂಡ್‌
ವೆಲ್ಲಿಂಗ್ಟನ್‌ನಲ್ಲಿ ಭಾರತ-ನ್ಯೂಜಿಲ್ಯಾಂಡ್‌ ಈವರೆಗೆ 3 ಟಿ20 ಪಂದ್ಯಗಳನ್ನಾಡಿವೆ. ನ್ಯೂಜಿಲ್ಯಾಂಡ್‌ ಎರಡರಲ್ಲಿ ಗೆದ್ದಿದೆ. ಒಂದು ಪಂದ್ಯ ಟೈ ಆಗಿತ್ತು, ಭಾರತ ಇದನ್ನು ಸೂಪರ್‌ ಓವರ್‌ನಲ್ಲಿ ಜಯಿಸಿತು.

ಇಲ್ಲಿ ಇತ್ತಂಡಗಳ ನಡುವೆ ಮೊದಲ ಪಂದ್ಯ ಏರ್ಪಟ್ಟದ್ದು 2009ರಲ್ಲಿ. ಸರಣಿಯ ಈ ದ್ವಿತೀಯ ಪಂದ್ಯವನ್ನು ಡೇನಿಯಲ್‌ ವೆಟರಿ ಪಡೆ 5 ವಿಕೆಟ್‌ಗಳಿಂದ ಜಯಿಸಿತ್ತು. ಯುವರಾಜ್‌ ಸಿಂಗ್‌ ಅವರ ಅರ್ಧ ಶತಕದಿಂದ (50) ಧೋನಿ ಬಳಗ 6ಕ್ಕೆ 149 ರನ್‌ ಮಾಡಿದರೆ, ನ್ಯೂಜಿಲ್ಯಾಂಡ್‌ ಅಂತಿಮ ಎಸೆತದಲ್ಲಿ ಗೆಲುವಿನ ರನ್‌ ಬಾರಿಸಿತ್ತು. 69 ರನ್‌ ಹೊಡೆದ ಬ್ರೆಂಡನ್‌ ಮೆಕಲಮ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸರಿಯಾಗಿ 10 ವರ್ಷಗಳ ಬಳಿಕ (2019) ಇಲ್ಲಿ ಇತ್ತಂಡಗಳ ನಡುವಿನ 2ನೇ ಟಿ20 ಮುಖಾಮುಖೀ ಏರ್ಪಟ್ಟಿತು. ನಾಯಕರಾಗಿದ್ದವರು ರೋಹಿತ್‌ ಶರ್ಮ ಮತ್ತು ಕೇನ್‌ ವಿಲಿಯಮ್ಸನ್‌. ಕಿವೀಸ್‌ 6ಕ್ಕೆ 219 ರನ್‌ ರಾಶಿ ಹಾಕಿದರೆ, ಭಾರತ 19.2 ಓವರ್‌ಗಳಲ್ಲಿ 139ಕ್ಕೆ ಕುಸಿಯಿತು.

ಇತ್ತಂಡಗಳು ವೆಲ್ಲಿಂಗ್ಟನ್‌ನಲ್ಲಿ ಕೊನೆಯ ಸಲ ಮುಖಾಮುಖಿಯಾದದ್ದು 2020ರಲ್ಲಿ. ಈ ಪಂದ್ಯ ಟೈಯಲ್ಲಿ ಅಂತ್ಯ ಕಂಡಿತ್ತು. ಭಾರತದ 8ಕ್ಕೆ 165 ರನ್‌ ಸವಾಲಿಗೆ ಉತ್ತರವಾಗಿ ನ್ಯೂಜಿಲ್ಯಾಂಡ್‌ 7ಕ್ಕೆ 165 ರನ್‌ ಮಾಡಿತು.

ಬುಮ್ರಾ ಎಸೆದ ಸೂಪರ್‌ ಓವರ್‌ನಲ್ಲಿ ನ್ಯೂಜಿ ಲ್ಯಾಂಡ್‌ ಒಂದಕ್ಕೆ 13 ರನ್‌ ಮಾಡಿತು. ಚೇಸಿಂಗ್‌ ವೇಳೆ ರಾಹುಲ್‌ ಮೊದಲೆರಡು ಎಸೆತಗಳಲ್ಲೇ 10 ರನ್‌ ಬಾರಿಸಿದರು (6, 4). 3ನೇ ಎಸೆತದಲ್ಲಿ ಔಟಾದರು. 4-5ನೇ ಎಸೆತಗಳಲ್ಲಿ ಕೊಹ್ಲಿ 2 ಹಾಗೂ 4 ರನ್‌ ಬಾರಿಸಿ ಭಾರತದ ಗೆಲುವನ್ನು ಸಾರಿದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.