Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Team Udayavani, Oct 5, 2024, 4:41 PM IST
ದುಬೈ: ಐಸಿಸಿ ವನಿತಾ ಟಿ20 ವಿಶ್ವಕಪ್ 2024ರಲ್ಲಿ (Women’s T20 World Cup 2024) ಆಡಿದ ಮೊದಲ ಪಂದ್ಯದಲ್ಲಿ ಭಾರತ ವನಿತಾ ತಂಡವು ಹೀನಾಯ ಸೋಲು ಕಂಡಿದೆ. ನ್ಯೂಜಿಲ್ಯಾಂಡ್ ವಿರುದ್ದದ ದುಬೈನಲ್ಲಿ ನಡೆದ ಪಂದ್ಯದಲ್ಲಿ ಹರ್ಮನ್ ಬಳಗವು 58 ರನ್ ಅಂತರದ ಸೋಲು ಕಂಡಿದೆ.
ಶುಕ್ರವಾರ (ಆ.04) ದುಬೈನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲ್ಯಾಂಡ್ ವಿರುದ್ದ 58 ರನ್ ಗಳ ಸೋಲು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 160 ರನ್ ಮಾಡಿದರೆ, ಭಾರತವು 19 ಓವರ್ ಗಳಲ್ಲಿ ಕೇವಲ 102 ರನ್ ಗಳಿಗೆ ಆಲೌಟಾಯಿತು.
ಬಲಿಷ್ಠ ತಂಡಗಳಿರುವ ಗ್ರೂಪ್ ಎ ನಲ್ಲಿರುವ ಭಾರತಕ್ಕೆ ಇದೀಗ ಸೆಮಿ ಫೈನಲ್ ಪ್ರವೇಶ ಕಷ್ಟಕರವಾಗಿದೆ. ಕಿವೀಸ್ ವಿರುದ್ದದ ಸೋಲು ಭಾರತದ ಸೆಮಿಫೈನಲ್ ನಿರೀಕ್ಷೆಗೆ ಕಡಿವಾಣ ಹಾಕಿದೆ. ನ್ಯೂಜಿಲ್ಯಾಂಡ್, ಪಾಕಿಸ್ತಾನ, ಏಷ್ಯನ್ ಚಾಂಪಿಯನ್ ಶ್ರೀಲಂಕಾ ಮತ್ತು ಹಾಲಿ ಟಿ20 ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯ ತಂಡಗಳು ಭಾರತವಿರುವ ಎ ಗುಂಪಿನಲ್ಲಿದೆ. ಪ್ರತಿ ಗುಂಪಿನಿಂದ ಮೊದಲ ಎರಡು ತಂಡಗಳು ಮಾತ್ರ ಸೆಮಿ ಫೈನಲ್ ಹಂತವನ್ನು ಪ್ರವೇಶಿಸುತ್ತವೆ. ನ್ಯೂಜಿಲ್ಯಾಂಡ್ ವಿರುದ್ಧದ ಭಾರಿ ಸೋಲಿನೊಂದಿಗೆ ಭಾರತದ ರನ್-ರೇಟ್ ಕೂಡಾ -2.900 ಆಗಿ ಹೀನಾಯ ಪರಿಸ್ಥಿತಿಗೆ ತಳ್ಳಿದೆ.
ಭಾರತವು ಸೆಮಿ-ಫೈನಲ್ಗೆ ಪ್ರವೇಶಿಸಲು ಪಾಕಿಸ್ತಾನ (ಭಾನುವಾರ) ಮತ್ತು ಶ್ರೀಲಂಕಾ (ಅಕ್ಟೋಬರ್ 9) ತಂಡಗಳನ್ನು ಉತ್ತಮ ಅಂತರದಿಂದ ಸೋಲಿಸಬೇಕಾಗಿದೆ. ಇದರಿಂದ ಅವರು ನಾಲ್ಕು ಅಂಕಗಳನ್ನು ಪಡೆಯುವುದು ಮಾತ್ರವಲ್ಲದೆ ತಮ್ಮ ರನ್-ರೇಟ್ ಕೂಡಾ ಸುಧಾರಿಸಬೇಕಿದೆ. ಭಾರತದ ಕೊನೆಯ ಗ್ರೂಪ್ ಹಂತದ ಪಂದ್ಯವು ಆರು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ. ಭಾರತವು ಆಸ್ಟ್ರೇಲಿಯಾ ವಿರುದ್ಧ ಗೆದ್ದರೆ ಉತ್ತಮ, ಒಂದು ವೇಳೆ ಸೋತರೆ, ಮತ್ತೊಂದೆಡೆ ನ್ಯೂಜಿಲ್ಯಾಂಡ್ ತನ್ನ ಉಳಿದಿರುವ ಎರಡು ಪಂದ್ಯಗಳಲ್ಲಿ ಸೋತರೆ ನಂತರ ಉತ್ತಮ ರನ್-ರೇಟ್ ಆಧಾರದಲ್ಲಿ ಮುಂದಿನ ಹಂತಕ್ಕೆ ತಲುಪಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
2500 Cops: ಗ್ವಾಲಿಯರ್ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ
Women’s T20 World Cup 2024: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಆಘಾತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.