![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 26, 2024, 7:25 AM IST
ಹೊಸದಿಲ್ಲಿ: ಮುಂಬರುವ ಟಿ20 ವಿಶ್ವಕಪ್ಗೆ ಸಂಬಂಧಿಸಿದಂತೆ ಈ ತಿಂಗಳ ಅಂತ್ಯಕ್ಕೆ ಭಾರತ ತಂಡವನ್ನು ಆಯ್ಕೆ ಮಾಡಲು ಸಭೆ ನಡೆಯಲಿದೆ. ಕೆ.ಎಲ್. ರಾಹುಲ್ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇದ್ದು, ಹಾರ್ದಿಕ್ ಪಾಂಡ್ಯ ಆಯ್ಕೆ ಬಹುತೇಕ ಅನುಮಾನವಾಗಿದೆ ಎಂದು ವರದಿಗಳು ತಿಳಿಸಿವೆ.
ವಿಶ್ವಕಪ್ಗೆ ತಂಡ ಪ್ರಕಟಿಸಲು ಮೇ 1 ಕೊನೆ ದಿನವಾಗಿದೆ. ಹೀಗಾಗಿ ಈ ತಿಂಗಳ ಅಂತ್ಯಕ್ಕೆ ಬಿಸಿಸಿಐ 15 ಜನರ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಗಾಯದಿಂದ ಹೊರಬಂದು ಈಗ ಐಪಿಎಲ್ ಆಡುತ್ತಿರುವ ಹಾರ್ದಿಕ್ ಪಾಂಡ್ಯ ಕೇವಲ 17 ಓವರ್ ಬೌಲಿಂಗ್ ಮಾಡಿದ್ದಾರೆ. ಅದರಲ್ಲಿ ಉತ್ತಮ ಪ್ರದರ್ಶನವೇನೂ ಕಂಡುಬಂದಿಲ್ಲ. ಅಲ್ಲದೇ ಬ್ಯಾಟಿಂಗ್ನಲ್ಲೂ ಸಹ ಉತ್ತಮ ಪ್ರದರ್ಶನ ಮೂಡಿಬಂದಿಲ್ಲ. ಹೀಗಾಗಿ ಅವರ ಆಯ್ಕೆ ಅನುಮಾನ ಎಂದು ವರದಿಗಳು ತಿಳಿಸಿವೆ.
ಎರಡನೇ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಬದಲು ಕನ್ನಡಿಗ ರಾಹುಲ್ ಆಯ್ಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ. ರಾಹುಲ್ ಹಾಗೂ ಸ್ಯಾಮ್ಸನ್ ಇಬ್ಬರೂ ಸಹ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರೂ ಸಹ ರಾಹುಲ್ಗೆ ಮಣೆ ಹಾಕುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗಿದೆ. ಈ ಬಾರಿ ಭಾರತ ತಂಡ ಹೆಚ್ಚುವರಿ ಬೌಲರ್ನೊಂದಿಗೆ ಪ್ರವಾಸ ಕೈಗೊಳ್ಳಲಿದೆ ಎಂದು ಸಹ ವರದಿ ತಿಳಿಸಿದೆ.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.