IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

107 ಮೀಟರ್ ಸಿಕ್ಸರ್ ಸಿಡಿಸಿ ಅಬ್ಬರ... ಒಮ್ಮೆ ಪಾರು ಮಾಡಿದ್ದ ಸರ್ಫರಾಜ್.. 7 ಬಾರಿ 90 ರನ್ ದಾಟಿ ಔಟಾದ ವಿಕೆಟ್ ಕೀಪರ್ !!

Team Udayavani, Oct 19, 2024, 4:04 PM IST

1-a-op

ಬೆಂಗಳೂರು: ಇಲ್ಲಿ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ದದ ಟೆಸ್ಟ್ ಸರಣಿಯ ಮೊದಲ ಪಂದ್ಯದ ನಾಲ್ಕನೇ ದಿನದಾಟವಾದ ಶನಿವಾರ(ಅ19 )ಅಮೋಘ ಆಟವಾಡಿದ ರಿಷಭ್ ಪಂತ್ ಶತಕದ ಹೊಸ್ತಿಲಲ್ಲಿ ಎಡವಿ ಭಾರೀ ನಿರಾಸೆಗೆ ಒಳಗಾದರು.

ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 46 ರನ್ ಗಳಿಗೆ ಆಲೌಟಾಗಿ ತೀವ್ರ ಸಂಕಷ್ಟ ಸ್ಥಿತಿಯಲ್ಲಿ ಆಡಲಿಳಿದ ಭಾರತ ನ್ಯೂಜಿಲ್ಯಾಂಡ್ ತಂಡವನ್ನು 402 ಕ್ಕೆ ನಿಯಂತ್ರಿಸಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಯಶಸ್ವಿ ಜೈಸ್ವಾಲ್ 35, ನಾಯಕ ರೋಹಿತ್ ಶರ್ಮ 52, ವಿರಾಟ್ ಕೊಹ್ಲಿ ಅವರ 70 ರನ್ ಕೊಡುಗೆಯ ಬಳಿಕ ತಂಡಕ್ಕೆ ಆಧಾರವಾದ ಸರ್ಫರಾಜ್ ಖಾನ್ 150 ರನ್ ಕೊಡುಗೆ ಸಲ್ಲಿಸಿ ಔಟಾದರು. 195 ಎಸೆತಗಳಿಂದ 150 ರನ್ ಕೊಡುಗೆ ತಂಡಕ್ಕೆ ದೊಡ್ಡ ಮಟ್ಟದ ಆಧಾರವಾಗಿ ಪರಿಣಮಿಸಿತು. ಸರ್ಫರಾಜ್ ಅವರಿಗೆ ಸಾಥ್ ನೀಡಿದ ರಿಷಭ್ ಪಂತ್ 99 ರನ್ ಗಳಿಸಿದ್ದ ವೇಳೆ ವಿಲಿಯಮ್ ಓ ರೂರ್ಕ್ ಎಸೆದ ಚೆಂಡು  ಬ್ಯಾಟ್ ಗೆ ತಗುಲಿ ಇನ್ ಸೈಡ್ ಎಡ್ಜ್ ಆಗಿ ವಿಕೆಟ್ ಗೆ ತಗುಲಿತು. ಈ ವೇಳೆ ಎಲ್ಲರೂ ಭಾರೀ ನಿರಾಶರಾದರು. ಅಮೋಘ ಆಟವಾಡಿದ ಪಂತ್ 105 ಎಸೆತಗಳಲ್ಲಿ 9 ಬೌಂಡರಿ ಮತ್ತು 5 ಅಮೋಘ ಸಿಕ್ಸರ್ ಸಿಡಿಸಿದರು.ಅದರಲ್ಲಿ ಒಂದು 107 ಮೀಟರ್ ಸಿಕ್ಸರ್ ಎಲ್ಲರ ಗಮನ ಸೆಳೆಯಿತು.

ಟೆಸ್ಟ್‌ನಲ್ಲಿ 90 ರನ್ ದಾಟಿದ ಬಳಿಕ ಅತಿ ಹೆಚ್ಚು ಔಟಾದ ಭಾರತದ ಆಟಗಾರರ ಪೈಕಿ ಸಚಿನ್ ತೆಂಡೂಲ್ಕರ್(10ಬಾರಿ) ಮೊದಲಿಗರಾಗಿದ್ದಾರೆ. ರಾಹುಲ್ ದ್ರಾವಿಡ್ 9 ಬಾರಿ, ರಿಷಭ್ ಪಂತ್ 7 ಬಾರಿ, ಸುನಿಲ್ ಗವಾಸ್ಕರ್ 5 ಬಾರಿ, ಎಂಎಸ್ ಧೋನಿ 5 ಬಾರಿ,ವೀರೇಂದ್ರ ಸೆಹ್ವಾಗ್ 5 ಬಾರಿ ಔಟಾಗಿ ನಿರಾಶರಾಗಿದ್ದರು. ಟೆಸ್ಟ್‌ನಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಔಟಾದ ಕೀಪರ್‌ಗಳು ಪಂತ್ ಮತ್ತು ಧೋನಿ ಅವರಾಗಿದ್ದಾರೆ.

ಪಂತ್ ಅವರು ಒಮ್ಮೆ ರನ್ ಔಟ್ ಆಗುವ ಸಾಧ್ಯತೆ ಇತ್ತು, ಈ ವೇಳೆ ಸರ್ಫಾರಾಜ್ ಅವರು ಕೂಗಿ ಮರಳುವಂತೆ ಹೇಳಿ ಪಾರು ಮಾಡಿದ್ದರು.

ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 462 ರನ್ ಗಳಿಗೆ ಆಲೌಟಾಯಿತು. ಕೆ.ಎಲ್. ರಾಹುಲ್ ಕೂಡ 12 ರನ್ ಗಳಿಸಲಷ್ಟೇ ಶಕ್ತರಾದರು. ಜಡೇಜ 5, ಅಶ್ವಿನ್ 15 ರನ್ ಗಳಿಸಿ ಔಟಾದರು. ನ್ಯೂಜಿಲ್ಯಾಂಡ್ ಗೆಲುವಿಗೆ 107 ರನ್‌ಗಳ ಸಣ್ಣ ಮೊತ್ತ ಅಗತ್ಯವಿದೆ. ಸದ್ಯ ಬೌಲರ್ ಗಳ ಮೇಲೆ ಭಾರಿ ಒತ್ತಡ ನಿರ್ಮಾಣವಾಗಿದೆ. ಪಂದ್ಯದ ಚಿತ್ರಣ ಬದಲಿಸಬೇಕಾದರೆ ಭಾರೀ ಸಾಹಸ ಮಾಡಬೇಕಾಗಿದೆ. ದಟ್ಟ ಮೋಡಗಳು ಕವಿದು ಮಳೆ ಸುರಿದ ಕಾರಣ ದಿನದಾಟವನ್ನು ಬೇಗನೆ ಮುಗಿಸಬೇಕಾಯಿತು. ನಾಳೆ ನಿರ್ಣಾಯಕ ದಿನವಾಗಿದ್ದು ಮಳೆ ಪಂದ್ಯದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-omar-nn

Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

S M KRISHNA

S.M.Krishna; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

1-a-pJ

Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-omar-nn

Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

Simple Suni introduces Keerthi Krishna and Divita Rai in Devaru Ruju Madidanu Movie

Devaru Ruju Madidanu Movie ಸುನಿ ಸಿನಿಮಾದ ನಾಯಕಿಯರಿವರು..

S M KRISHNA

S.M.Krishna; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.