![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 18, 2023, 3:13 PM IST
ಹೊಸದಿಲ್ಲಿ: ಬಾರ್ಡರ್ – ಗಾವಸ್ಕರ್ ಟ್ರೋಫಿಯ ಎರಡನೇ ಪಂದ್ಯದ ಎರಡನೇ ದಿನದಾಟ ನಡೆಯುತ್ತಿದ್ದು, ಭಾರತೀಯ ಅಗ್ರಕ್ರಮಾಂಕದ ಬ್ಯಾಟರ್ ಗಳು ಪರದಾಡಿದರು. ಆದರೆ ಈ ವೇಳೆ ವಿರಾಟ್ ಕೊಹ್ಲಿ ಅವರ ಔಟಾದ ಬಗ್ಗೆ ಭಾರೀ ಅಪಸ್ವರ ಕೇಳಿಬಂದಿದೆ.
ಒಂದೆಡೆ ಭಾರತೀಯ ಬ್ಯಾಟರ್ ಗಳು ವಿಕೆಟ್ ಉಳಿಸಿಕೊಳ್ಳಲು ಪರದಾಡುತ್ತಿದ್ದರೆ ಮತ್ತೊಂದೆಡೆ ಮಾಜಿ ನಾಯಕ ವಿರಾಟ್ ಕೊಹ್ಲಿ ಕ್ರೀಸ್ ಕಚ್ಚಿನಿಂತು ಬ್ಯಾಟಿಂಗ್ ಮಾಡುತ್ತಿದ್ದರು. ರವೀಂದ್ರ ಜಡೇಜಾ ಜೊತೆ ಜೊತೆಯಾಟ ನಡೆಸಿದ ವಿರಾಟ್ ತಂಡಕ್ಕೆ ತಕ್ಕಮಟ್ಟಿನ ರಿಲೀಫ್ ನೀಡಿದ್ದರು.
ಆದರೆ 44 ರನ್ ಗಳಿಸಿದ್ದ ವೇಳೆ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆದ ಚೆಂಡು ಕೊಹ್ಲಿ ಕಾಲಿಗೆ ಬಡಿಯುತು. ಅಂಪೈರ್ ನಿತಿನ್ ಮೆನನ್ ಔಟ್ ತೀರ್ಮಾನ ನೀಡಿದರು. ಕೂಡಲೇ ವಿರಾಟ್ ರಿವೀವ್ ಪಡೆದುಕೊಂಡರು. ರಿವೀವ್ ವೇಳೆ ಚೆಂಡು ಬ್ಯಾಟ್ ಮತ್ತು ಪ್ಯಾಡ್ ಎರಡಕ್ಕೂ ಬಡಿದಿದೆ ಎಂದು ಅಲ್ಟ್ರಾಎಡ್ಜ್ ಸ್ಪಷ್ಟವಾಗಿ ತೋರಿಸಿದೆ.
ಇದನ್ನೂ ಓದಿ:ಏಪ್ರಿಲ್ 25 ರಂದು ತೆರೆಯಲಿರುವ ಕೇದಾರನಾಥ ದೇಗುಲದ ಬಾಗಿಲು
ಆದರೆ, ಚೆಂಡು ಮೊದಲು ಬ್ಯಾಟ್ ಗೆ ತಾಗಿತ್ತೋ ಅಥವಾ ಪ್ಯಾಡ್ ಗೆ ತಗುಲಿತೋ ಎಂಬುದು ಸ್ಪಷ್ಟವಾಗಿಲ್ಲ. ಚೆಂಡು ಮೊದಲು ಬ್ಯಾಟ್ ಗೆ ಬಡಿದರೆ, ಅದನ್ನು ಲೆಗ್ ಬಿಫೋರ್ ವಿಕೆಟ್ಗೆ ನೀಡಲಾಗುವುದಿಲ್ಲ. ಯಾವುದೇ ಸ್ಪಷ್ಟ ಪುರಾವೆಗಳು ಇಲ್ಲದಿದ್ದರೂ, ಮೂರನೇ ಅಂಪೈರ್ ರಿಚರ್ಡ್ ಇಲಿಂಗ್ವರ್ತ್ ಅವರು ಆ ಚೆಂಡು ಮೊದಲು ಪ್ಯಾಡ್ ಗೆ ಹೊಡೆಯುತ್ತಿರುವಂತೆ ತೋರಿತು ಎಂದು ಹೇಳಿ ಔಟ್ ನೀಡಿದರು.
ಈ ಅಂಪೈರಿಂಗ್ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗದೆ. ವಿರಾಟ್ ಕೊಹ್ಲಿ ವಿಚಾರದಲ್ಲಿ ಪ್ರತಿಬಾರಿಯೂ ಅಂಪೈರ್ ಗಳು ಕುಟಿಲ ಆಟವಾಡುತ್ತಾರೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ದೂರುತ್ತಿದ್ದಾರೆ.
Ok now its up to you janta
U decide Virat Kohli was out or not out
Retweet if u think Not Out#INDvsAUS#AUSvsIND pic.twitter.com/4XsmKrKmz4— Vaibhav (@vabby_16) February 18, 2023
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.