![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 8, 2020, 3:35 PM IST
ಆಕ್ಲಂಡ್: ರವೀಂದ್ರ ಜಡೇಜಾ ಮ್ತತು ನವದೀಪ್ ಸೈನಿ ಬ್ಯಾಟಿಂಗ್ ಸಾಹಸದ ಹೊರತಾಗಿಯೂ ಕಿವೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ಸೋಲನುಭವಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆಯೇ ಸೋತಿದೆ.
ನ್ಯೂಜಿಲ್ಯಾಂಡ್ ನೀಡಿದ 274 ರನ್ ಗುರಿ ಬೆನ್ನಟ್ಟಿದ ಭಾರತ ಪ್ರಮುಖ ಆಟಗಾರರ ಕಳಪೆ ಆಟದ ಕಾರಣ 251 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲನುಭವಿಸಿದೆ.
ಭಾರತದ ಪರ ಶ್ರೇಯಸ್ ಅಯ್ಯರ್ ಮತ್ತು ಜಡೇಜಾ ಅರ್ಧ ಶತಕ ಬಾರಿಸಿದರೆ, ಸೈನಿ 45 ರನ್ ಗಳಿಸಿದರು. ಉಳಿದವರ್ಯಾರು ಹೆಚ್ಚಿನ ಮೊತ್ತ ಕಲೆಹಾಕಲು ಶಕ್ತರಾಗಲಿಲ್ಲ.
ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ಗೆ ಮಾರ್ಟಿನ್ ಗಪ್ಟಿಲ್ (79 ರನ್), ಹೆನ್ರಿ ನಿಕೋಲ್ಸ್ (41), ರಾಸ್ ಟೇಲರ್ (ಅಜೇಯ 73) ನೆರವಾದರು. ಅದರಲ್ಲೂ ಎಂಟನೇ ವಿಕೆಟ್ ಗೆ ಟೇಲರ್ ಮತ್ತು ಜಾಮಿಸನ್ 76 ರನ್ ಜೊತೆಯಾಟ ಆಡಿದರು.
ಭಾರತದ ನೂತನ ಆರಂಭಿಕರಿಬ್ಬರು ಮತ್ತೆ ವಿಫಲರಾದರು. ಕೊಹ್ಲಿ, ರಾಹುಲ್ ಬ್ಯಾಟ್ ಕೂಡಾ ಇಂದು ನಡೆಯಲಿಲ್ಲ. 96 ರನ್ ವೇಳೆಗೆ ಭಾರತ ೈದು ವಿಕೆಟ್ ಕಳೆದುಕೊಂಡಿತ್ತು. ಅಯ್ಯರ್ 52 ರನ್ ಗಳಿಸಿದರು.
ಎಂಟನೇ ವಿಕೆಟ್ ಗೆ ಜಡೇಜಾ ಮತ್ತು ಸೈನಿ ಜೊತೆಯಾಟ ಭಾರತಕ್ಕೆ ಗೆಲುವಿನ ಭರವಸೆ ನೀಡಿತ್ತು. ಉತ್ತಮ ಹೊಡೆತಗಳಿಂದ ಮಿಂಚಿದ ಸೈನಿ 45 ರನ್ ಬಾರಿಸಿದರು. ಜಡೇಜಾ 55 ರನ್ ಗಳಿಸಿದರು. ಅಂತಿಮವಾಗಿ ಭಾರತ 22 ರನ್ ಗಳ ಅಂತರದ ಸೋಲನುಭವಿಸಿತು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.