![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 8, 2021, 3:53 PM IST
ದುಬೈ: ಐಸಿಸಿ ಟಿ20 ವಿಶ್ವಕಪ್ ನಲ್ಲಿ ಭಾರತ ತಂಡದ ಅಭಿಯಾನ ನಿರಾಶದಾಯಕವಾಗಿ ಅಂತ್ಯವಾಗಿದೆ. ಸೆಮಿ ಫೈನಲ್ ಪ್ರವೇಶಿಸಲು ವಿಫಲವಾದ ಟೀಂ ಇಂಡಿಯಾ ಇಂದು ನಮೀಬಿಯಾ ವಿರುದ್ಧ ತನ್ನ ಅಂತಿಮ ಸೂಪರ್ 12 ಪಂದ್ಯವಾಡಲಿದೆ.
ತಂಡದ ಈ ಪ್ರದರ್ಶನದ ಬಗ್ಗೆ ಹಲವು ಮಾಜಿ ಆಟಗಾರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಅವರು ಕೂಡಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಭಾರತ ತಂಡದಲ್ಲಿ ಬೌಲಿಂಗ್ ಮಾಡಬಲ್ಲ ಬ್ಯಾಟ್ಸಮನ್ ಗಳ ಅಗತ್ಯವಿದೆ ಎಂದಿದ್ದಾರೆ.
ಮುಂದಿನ ಟಿ20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಕಾರಣ, ಅಲ್ಲಿನ ಪರಿಸ್ಥಿತಿಗೆ ವೇಗದ ಬೌಲಿಂಗ್ ಮಾಡಬಲ್ಲ ಬ್ಯಾಟ್ಸಮನ್ ಗಳ ಅಗತ್ಯವಿದೆ. ಒಂದೆರಡು ಬ್ಯಾಟ್ಸಮನ್ ಗಳು ಬೌಲಿಂಗ್ ಮಾಡಬಲ್ಲವರಾಗಿದ್ದರೆ, ಫ್ರಂಟ್ ಲೈನ್ ಬೌಲರ್ ಗಳಿಗೆ ನೆರವಾಗುತ್ತದೆ ಎಂದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಇದನ್ನೂ ಓದಿ:ಕೆಲವರಿಗೆ ದೇಶಕ್ಕಿಂತ ಐಪಿಎಲ್ ಆಟವೇ ಮುಖ್ಯ: ವಿಶ್ವಕಪ್ ಸೋಲಿಗೆ ಕಾರಣ ಬಿಚ್ಚಿಟ್ಟ ಕಪಿಲ್ ದೇವ್
ಇನ್ನೊಂದು ಪ್ರಮುಖ ಅಂಶವೆಂದರೆ ಬೌಲಿಂಗ್ ಮಾಡುವ ಬ್ಯಾಟ್ಸ್ಮನ್ಗಳನ್ನು ಗುರುತಿಸುವುದು, ಯಾಕೆಂದರೆ ನೀವು ಆರನೇ ಅಥವಾ ಏಳನೇ ಬೌಲಿಂಗ್ ಆಯ್ಕೆಯನ್ನು ಹೊಂದಿದ್ದರೆ, ನಾಯಕನು ಖಂಡಿತವಾಗಿಯೂ ಒತ್ತಡಕ್ಕೆ ಒಳಗಾಗುವುದಿಲ್ಲ. ಆದ್ದರಿಂದ, ಎರಡು ಓವರ್ ಗಳನ್ನು ಹಾಕಬಲ್ಲ ಒಂದೆರಡು ಬ್ಯಾಟ್ಸ್ಮನ್ ಗಳು ತಂಡದಲ್ಲಿರಬೇಕು, ಅದು ಆಸ್ಟ್ರೇಲಿಯಾದಲ್ಲಿ ನಡೆಯುವ ವಿಶ್ವಕಪ್ಗೆ ಬಹಳ ನಿರ್ಣಾಯಕವಾಗಿರುತ್ತದೆ ಎಂದು ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡುತ್ತಾ ಲಕ್ಷ್ಮಣ್ ಹೇಳಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.