ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌; ವಿದಿತ್ಸರ್ನ್, ಆ್ಯನ್‌ ಸೆಯಂಗ್‌ ಚಾಂಪಿಯನ್‌

ಯಮಾಗುಚಿ ಪರಾಭವ; ಕೊರಿಯಾಕ್ಕೆ ಒಲಿದ ಮೊದಲ ಪ್ರಶಸ್ತಿ

Team Udayavani, Jan 22, 2023, 11:27 PM IST

1-wqwqewqe

ನವದೆಹಲಿ: “ಇಂಡಿಯನ್‌ ಓಪನ್‌ ಬ್ಯಾಡ್ಮಿಂಟನ್‌’ ಪ್ರಶಸ್ತಿ ಮೊದಲ ಬಾರಿಗೆ ಕೊರಿಯಾ ಪಾಲಾಗಿದೆ. ಭಾನುವಾರ ನಡೆದ ವನಿತಾ ಸಿಂಗಲ್ಸ್‌ನಲ್ಲಿ 20 ವರ್ಷದ ಯಂಗ್‌ ಆ್ಯನ್‌ ಸೆಯಂಗ್‌ ಚಾಂಪಿಯನ್‌ ಆಗಿ ಮೂಡಿಬಂದರು. ವಿಶ್ವದ ನಂ. 1 ಆಟಗಾರ್ತಿ, ಜಪಾನ್‌ನ ಅಕಾನೆ ಯಮಾಗುಚಿ ವಿರುದ್ಧ ಅವರು 15-21, 21-16, 21-12 ಅಂತರದ ಗೆಲುವು ಸಾಧಿಸಿದರು.

ಪುರುಷರ ಸಿಂಗಲ್ಸ್‌ ಪ್ರಶಸ್ತಿಯನ್ನು ಥಾಯ್ಲೆಂಡ್‌ನ‌ ಕುನ್ಲಾವುತ್‌ ವಿದಿತ್ಸರ್ನ್ ಗೆದ್ದರು. ಅವರು ಒಲಿಂಪಿಕ್‌ ಚಾಂಪಿಯನ್‌, ಡೆನ್ಮಾರ್ಕ್‌ನ ವಿಕ್ಟರ್‌ ಅಕ್ಸೆಲ್ಸನ್‌ ವಿರುದ್ಧ 22-20, 10-21, 21-12 ಅಂತರದ ಗೆಲುವು ಸಾಧಿಸಿದರು. ಇವರಿಬ್ಬರ ಹೋರಾಟ 64 ನಿಮಿಷಗಳ ತನಕ ಸಾಗಿತು. ಇದು ವಿದಿತ್ಸರ್ನ್ ಗೆದ್ದ ಮೊದಲ “ಸೂಪರ್‌ 750′ ಬ್ಯಾಡ್ಮಿಂಟನ್‌ ಪ್ರಶಸ್ತಿ

ಸೇಡು ತೀರಿಸಿದ ಸೆಯಂಗ್‌
ಕಳೆದ ವಾರವಷ್ಟೇ “ಮಲೇಷ್ಯಾ ಓಪನ್‌’ ಫೈನಲ್‌ನಲ್ಲಿ ಇವರಿಬ್ಬರು ಮುಖಾಮುಖೀಯಾಗಿದ್ದರು. ಅಲ್ಲಿ ಇದೇ ರೀತಿ, 3 ಗೇಮ್‌ಗಳ ಹೋರಾಟದಲ್ಲಿ ಅಕಾನೆ ಯಮಾಗುಚಿ ಗೆದ್ದು ಬಂದಿದ್ದರು. ಮೊದಲ ಗೇಮ್‌ ಕಳೆದುಕೊಂಡ ಬಳಿಕ ಯಮಾಗುಚಿ ತಿರುಗಿ ಬೀಳುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ “ಇಂಡಿಯನ್‌ ಓಪನ್‌’ ಫೈನಲ್‌ನಲ್ಲಿ ಇವರಿಬ್ಬರ ಮುಖಾಮುಖೀ ತೀವ್ರ ಕುತೂಹಲ ಮೂಡಿಸಿತ್ತು. ಇಲ್ಲಿ ಯಂಗ್‌ ಆ್ಯನ್‌ ಸೆಯಂಗ್‌ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾದರು.

“ಇದು ಮತ್ತೂಂದು ದೊಡ್ಡ ಕದನವಾಗಲಿದೆ ಎಂಬುದು ತಿಳಿದಿತ್ತು. ಇದಕ್ಕೆ ಮಾನಸಿಕವಾಗಿ ನಾನು ಸಜ್ಜುಗೊಂಡಿದ್ದೆ’ ಎಂಬುದಾಗಿ 72 ನಿಮಿಷಗಳ ಹೋರಾಟದಲ್ಲಿ ಜಯ ಸಾಧಿಸಿದ ಆ್ಯನ್‌ ಸೆಯಂಗ್‌ ಪ್ರತಿಕ್ರಿಯಿಸಿದರು. ಇದರೊಂದಿಗೆ ಯಮಾಗುಚಿ ವಿರುದ್ಧ ಆಡಿದ 16 ಪಂದ್ಯಗಳಲ್ಲಿ ಆ್ಯನ್‌ ಸೆಯಂಗ್‌ 6ನೇ ಗೆಲುವು ಕಂಡಂತಾಯಿತು. ವನಿತಾ ಡಬಲ್ಸ್‌ ಪ್ರಶಸ್ತಿ ಜಪಾನ್‌ನ ನಾಮಿ ಮತ್ಸುಯಾಮ-ಚಿಹರು ಶಿಡಾ ಪಾಲಾಯಿತು.

ಪುರುಷರ ಡಬಲ್ಸ್‌
ವಿಶ್ವದ 11ನೇ ರ್‍ಯಾಂಕಿಂಗ್‌ ಆಟಗಾರರಾದ ಚೀನಾದ ಲಿಯಾಂಗ್‌ ವೀ ಕೆಂಗ್‌ ಮತ್ತು ವಾಂಗ್‌ ಚಾಂಗ್‌ ಪುರುಷರ ಡಬಲ್ಸ್‌ ಪ್ರಶಸ್ತಿ ಗೆದ್ದರು. ಫೈನಲ್‌ನಲ್ಲಿ ಇವರು ಮಲೇಷ್ಯಾದ ಆರನ್‌ ಚಿಯ-ಸೋಹ್‌ ವೂಯಿ ಯಿಕ್‌ ಜೋಡಿಗೆ 14-21, 21-19, 21-18 ಅಂತರದ ಸೋಲುಣಿಸಿದರು. ಜಪಾನ್‌ನ ಯುಟ ವಟಾನಬೆ-ಅರಿಸಾ ಹಿಗಶಿನೊ ಮಿಶ್ರ ಡಬಲ್ಸ್‌ ಚಾಂಪಿಯನ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಎದುರಾಳಿಗಳಾದ ಚೀನೀ ಆಟಗಾರರು ಗಾಯಾಳದ ಕಾರಣ ವನಿತಾ ಡಬಲ್ಸ್‌ ಮತ್ತು ಮಿಶ್ರ ಡಬಲ್ಸ್‌ ಫೈನಲ್‌ ಸ್ಪರ್ಧೆ ನಡೆಯಲಿಲ್ಲ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.