![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 12, 2019, 5:55 AM IST
ಕರಾಚಿ: ಭಾರತ ವಿರುದ್ಧ ನಡೆಯಲಿರುವ ಡೇವಿಸ್ ಕಪ್ ಏಶ್ಯ/ಒಶಿಯಾನಿಯ ಬಣ ಒಂದರ ಹೋರಾಟವನ್ನು ತಟಸ್ಥ ತಾಣಕ್ಕೆ ಸ್ಥಳಾಂತರಿಸುವ ಸಾಧ್ಯತೆಯನ್ನು ಪಾಕಿಸ್ಥಾನ ಟೆನಿಸ್ ಫೆಡರೇಶನ್ (ಪಿಟಿಎಫ್) ತಳ್ಳಿ ಹಾಕಿದೆ.
ಇಸ್ಲಾಮಾಬಾದ್ನ ಕ್ರೀಡಾ ಸಂಕೀರ್ಣದಲ್ಲಿ ಸೆ. 14 ಮತ್ತು 15ರಂದು ಡೇವಿಸ್ ಕಪ್ ಕೂಟವನ್ನು ಆಯೋಜಿಸಲು ಎಲ್ಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಪಿಟಿಎಫ್ ಮುಖ್ಯಸ್ಥ ಸಲೀಂ ಸೈಫುಲ್ಲ ಹೇಳಿದ್ದಾರೆ.
‘ಈ ಹಿಂದಿನ ವೇಳಾಪಟ್ಟಿಯಂತೆ ಪಂದ್ಯಾಟವನ್ನು ಆಯೋಜಿಸಲು ನಾವು ಬದ್ಧರಾಗಿದ್ದೇವೆ. ಇಸ್ಲಾಮಾಬಾದ್ನಲ್ಲಿ ಭಾರತೀಯ ತಂಡಕ್ಕೆ ಯಾವುದೇ ಸಮಸ್ಯೆ ಎದುರಾಗುವ ಸಾಧ್ಯತೆಯಿಲ್ಲ. ಈ ತಾಣ ಸುರಕ್ಷಿತವಲ್ಲವೆಂದು ಭಾರತೀಯ ತಂಡ ಭಾವಿಸಲು ಯಾವುದೇ ಕಾರಣಗಳಿಲ್ಲ’ ಎಂದು ಸೈಫುಲ್ಲ ತಿಳಿಸಿದ್ದಾರೆ.
ಪ್ರೇಕ್ಷಕರಿಲ್ಲದೆಯೂ ಪಂದ್ಯಾವಳಿ
‘ಭಾರತೀಯ ತಂಡ ಪಾಕಿಸ್ಥಾನದಲ್ಲಿ ಸುರಕ್ಷಿತವಾಗಿರುತ್ತದೆ ಎಂದು ಸೈಫುಲ್ಲ ಭರವಸೆ ನೀಡಿದ್ದಾರೆ. ತಂಡ 4 ದಿನ ಸುರಕ್ಷಿತ ತಾಣವಾದ ಇಸ್ಲಾಮಾಬಾದ್ನಲ್ಲಿ ಇರಲಿದೆ. ನಾವು ಭಾರತೀಯ ತಂಡ ಉಳಿದುಕೊಳ್ಳುವ ಹೊಟೇಲ್ ಮತ್ತು ಟೆನಿಸ್ ಕೋರ್ಟ್ಗೆ ಉನ್ನತ ಮಟ್ಟದ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದ್ದೇವೆ. ಒಂದು ವೇಳೆ ಅವರು ಬಯಸಿದರೆ ಪ್ರೇಕ್ಷಕರಿಲ್ಲದೇ ಪಂದ್ಯಾಟ ನಡೆಸಲು ಸಿದ್ಧರಿದ್ದೇವೆ’ ಎಂದು ಸೈಫುಲ್ಲಾ ವಿವರಿಸಿದ್ದಾರೆ.
ತಟಸ್ಥ ತಾಣ: ಐಟಿಎಫ್ಗೆ ಭಾರತ ಮನವಿ
ಉಭಯ ರಾಷ್ಟ್ರಗಳ ನಡುವೆ ರಾಜಕೀಯ ಉದ್ವಿಗ್ನ ಸ್ಥಿತಿ ಮುಂದುವರಿದ ಹಿನ್ನೆಲೆಯಲ್ಲಿ ಮುಂಬರುವ ಡೇವಿಸ್ ಕಪ್ ಹೋರಾಟವನ್ನು ಪಾಕಿಸ್ಥಾನದಿಂದ ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸುವಂತೆ ಭಾರತವು ಅಂತಾರಾಷ್ಟ್ರೀಯ ಟೆನಿಸ್ ಫೆಡರೇಶನ್ಗೆ (ಐಟಿಎಫ್) ಮನವಿ ಮಾಡಿದೆ. ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಭಾರತ ರದ್ದುಮಾಡಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಸ್ಥಿತಿ ಏರ್ಪಟ್ಟಿದೆ. ಹೀಗಾಗಿ ಡೇವಿಸ್ ಕಪ್ ಹೋರಾಟವನ್ನು ತಟಸ್ಥ ತಾಣದಲ್ಲಿ ಆಯೋಜಿಸಲು ನಾವು ಐಟಿಎಫ್ ಅನ್ನು ಕೇಳಿಕೊಂಡಿದ್ದೇವೆ ಎಂದು ಆಲ್ ಇಂಡಿಯಾ ಟೆನಿಸ್ ಅಸೋಸಿಯೇಶನ್ (ಎಐಟಿಎ) ಅಧ್ಯಕ್ಷ ಪ್ರವೀಣ್ ಮಹಾಜನ್ ಹೇಳಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.