T20; ಶಿವಂ ದುಬೆ ಅಮೋಘ ಬ್ಯಾಟಿಂಗ್: ಅಫ್ಘಾನ್ ವಿರುದ್ಧ ಭಾರತಕ್ಕೆ 6 ವಿಕೆಟ್‌ ಜಯ


Team Udayavani, Jan 11, 2024, 10:22 PM IST

1-adasdasd

ಮೊಹಾಲಿ: ಸರ್ವಾಂಗೀಣ ಆಟದ ಪ್ರದರ್ಶನ ನೀಡಿದ ಭಾರತ ತಂಡವು ಗುರುವಾರ ನಡೆದ ಅಫ್ಘಾನಿಸ್ಥಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರು ವಿಕೆಟ್‌ಗಳಿಂದ ಜಯಭೇರಿ ಬಾರಿಸಿದೆ.

ನಿಖರ ದಾಳಿಯ ನೆರವಿನಿಂದ ಅಫ್ಘಾನಿಸ್ಥಾನ ಮೊತ್ತವನ್ನು 158 ರನ್ನಿಗೆ ನಿಯಂತ್ರಿಸಿದ ಭಾರತ ತಂಡವು ಆಬಳಿಕ ರೋಹಿತ್‌ ಶರ್ಮ ಅವರನ್ನು ಬೇಗನೇ ಕಳೆದುಕೊಂಡರೂ ಶಿವಂ ದುಬೆ ಅವರ ಅರ್ಧಶತಕದಿಂದಾಗಿ 17.3 ಓವರ್‌ಗಳಲ್ಲಿ 4 ವಿಕೆಟಿಗೆ 159 ರನ್‌ ಗಳಿಸಿ ಜಯಭೇರಿ ಬಾರಿಸಿತು.

ಈ ಗೆಲುವಿನಿಂದ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಸರಣಿಯ ದ್ವಿತೀಯ ಪಂದ್ಯ ಜ. 14ರಂದು ಇಂದೋರ್‌ನಲ್ಲಿ ನಡೆಯಲಿದೆ.

ಗೆಲ್ಲಲು 159 ರನ್‌ ಗಳಿಸುವ ಸವಾಲು ಪಡೆದ ಭಾರತ ತಂಡವು ನಾಯಕ ರೋಹಿತ್‌ ಅವರನ್ನು ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲಿ ಕಳೆದುಕೊಂಡಿತು. ಆದರೆ ಇತರ ಆಟಗಾರರ ಸಮಯೋಚಿತ ಆಟ ದಿಂದಾಗಿ ಭಾರತ ಸುಲಭವಾಗಿ ಗೆಲುವು ಸಾಧಿಸುವಂತಾಯಿತು. ಶಿವಂ ದುಬೆ ಮತ್ತು ಜಿತೇಶ್‌ ಶರ್ಮ ನಾಲ್ಕನೇ ವಿಕೆಟಿಗೆ 45 ರನ್‌ ಪೇರಿಸಿ ತಂಡದ ಗೆಲುವನ್ನು ಖಚಿತಪಡಿಸಿದರು. ಜಿತೇಶ್‌ 20 ಎಸೆತಗಳಿಂದ 31 ರನ್‌ ಹೊಡೆದರೆ ಶಿವಂ ದುಬೆ 60 ರನ್‌ ಗಳಿಸಿ ಅಜೇಯರಾಗಿ ಉಳಿದರು. 5 ಬೌಂಡರಿ ಮತ್ತು 2 ಸಿಕ್ಸರ್‌ ಬಾರಿಸಿದ್ದರು.

ಮೊಹಮ್ಮದ್‌ ನಬಿ ಆಸರೆ
ಟಾಸ್‌ ಸೋತು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಅಫ್ಘಾನಿಸ್ಥಾನ ತಂಡವು ಅಗ್ರ ಕ್ರಮಾಂಕದ ಆಟಗಾರರ ಮತ್ತು ಅನುಭವಿ ಮೊಹಮ್ಮದ್‌ ನಬಿ ಅವರ ಉಪಯುಕ್ತ ಆಟದಿಂದಾಗಿ ಸಾಧಾರಣ ಮೊತ್ತ ತಲುಪಲು ಸಾಧ್ಯವಾಯಿತು.
ಆರಂಭಿಕರಾದ ರಹಮಾನುಲ್ಲ ಗುರ್ಬಜ್‌ ಮತ್ತು ಇಬ್ರಾಹಿಂ ಜದ್ರಾನ್‌ ಮೊದಲ ವಿಕೆಟಿಗೆ 50 ರನ್‌ ಪೇರಿಸಿ ತಂಡವನ್ನು ಆಧರಿಸಿದ್ದರು. ಆದರೆ ಅವರಿಬ್ಬರು ಅದೇ ಮೊತ್ತಕ್ಕೆ ಪೆವಿಲಿಯನ್‌ ಸೇರಿಕೊಂಡಿದ್ದರಿಂದ ಅಘಾ^ನಿಸ್ಥಾನ ಆಘಾತ ಅನುಭವಿಸು ವಂತಾಯಿತು. ಆಬಳಿಕ ಯುವ ಆಟಗಾರ ಅಜ್ಮತುಲ್ಲ ಒಮರ್‌ಜಾಯ್‌ ಮತ್ತು ಅನುಭವಿ ಮೊಹಮ್ಮದ್‌ ನಬಿ ಅವರ ತಾಳ್ಮೆಯ ಆಟದಿಂದಾಗಿ ತಂಡ ಚೇತರಿಸಿಕೊಂಡಿತು. ಅವರಿಬ್ಬರು ನಾಲ್ಕನೇ ವಿಕೆಟಿಗೆ 68 ರನ್ನುಗಳ ಜತೆಯಾಟ ನಡೆಸಿ ಕುಸಿದ ತಂಡವನ್ನು ಪಾರು ಮಾಡಿದರು.
22 ಎಸೆತಗಳಿಂದ 29 ರನ್‌ ಮಾಡಿದ ಒಮರ್‌ಜಾಯ್‌ ಔಟಾದ ಬಳಿಕ ತಂಡದ ರನ್‌ ವೇಗಕ್ಕೆ ಕಡಿವಾಣ ಬಿತ್ತು. ಮತ್ತೆ 5 ರನ್‌ ಸೇರಿಸುವಷ್ಟರಲ್ಲಿ 27 ಎಸೆತಗಳಿಂದ 42 ರನ್‌ ಗಳಿಸಿದ ನಬಿ ಔಟಾದರು. ಅವರು 2 ಬೌಂಡರಿ ಮತ್ತು 3 ಸಿಕ್ಸರ್‌ ಬಾರಿಸಿದ್ದರು.

ಅಫ್ಘಾನಿಸ್ಥಾನ ಪರ 106 ಏಕದಿನ ಪಂದ್ಯಗಳಲ್ಲಿ ಆಡಿದ್ದ ರಹಮತ್‌ ಶಾ ಅವರು ಟಿ20 ಕ್ರಿಕೆಟಿಗೆ ಪದಾರ್ಪಣೆಗೈದರೂ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಲು ವಿಫ‌ಲರಾದರು. ಅವರು ಮೂರು ರನ್‌ ಗಳಿಸಿ ಅಕ್ಷರ್‌ ಪಟೇಲ್‌ ಎಸೆತದಲ್ಲಿ ಕ್ಲೀನ್‌ಬೌಲ್ಡ್‌ ಆದರು.

ಬಿಗು ದಾಳಿ ಸಂಘಟಿಸಿದ ಅಕ್ಷರ್‌ ಪಟೇಲ್‌ ಕೇವಲ 23 ರನ್‌ ನೀಡಿ ಎರಡು ವಿಕೆಟ್‌ ಪಡೆದರು. ಮುಕೇಶ್‌ ಕುಮಾರ್‌ 33 ರನ್ನಿಗೆ 2 ವಿಕೆಟ್‌ ಕಿತ್ತರೆ ಇನ್ನೊಂದು ವಿಕೆಟನ್ನು ಶಿವಂ ದುಬೆ ಉರುಳಿಸಿದರು.

ಸಂಕ್ಷಿಪ್ತ ಸ್ಕೋರು:
ಅಫ್ಘಾನಿಸ್ಥಾನ 20 ಓವರ್‌ಗಳಲ್ಲಿ 5 ವಿಕೆಟಿಗೆ 158 (ರಹಮಾನುಲ್ಲ ಗುರ್ಬಜ್‌ 23, ಇಬ್ರಾಹಿಂ ಜದ್ರಾನ್‌ 25, ಅಜ್ಮತುಲ್ಲ ಒಮರ್‌ಜಾಯ್‌ 29, ಮೊಹಮ್ಮದ್‌ ನಬಿ 42, ಅಕ್ಷರ್‌ ಪಟೇಲ್‌ 23ಕ್ಕೆ 2, ಮುಕೇಶ್‌ ಕುಮಾರ್‌ 33ಕ್ಕೆ 3); ಭಾರತ 17.3 ಓವರ್‌ಗಳಲ್ಲಿ 4 ವಿಕೆಟಿಗೆ 159 (ಶುಭ್‌ಮನ್‌ ಗಿಲ್‌ 23, ತಿಲಕ್‌ ವರ್ಮ 26, ಶಿವಂ ದುಬೆ 60 ಔಟಾಗದೆ, ಜಿತೇಶ್‌ ಶರ್ಮ 31, ಮುಜೀಬ್‌ ಉರ್‌ ರೆಹಮಾನ್‌ 21ಕ್ಕೆ 2).

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.