India vs Bangladesh; ಸಂಜು ಸ್ಯಾಮ್ಸನ್ ಅಬ್ಬರ: ಚೊಚ್ಚಲ T20 ಅಂತಾರಾಷ್ಟ್ರೀಯ ಶತಕ
ದಾಖಲೆಯ ಮೊತ್ತ ಕಲೆ ಹಾಕಿದ ಭಾರತ.... ನೇಪಾಳದ ದಾಖಲೆ ಮುರಿಯಲು ಸಾಧ್ಯವಾಗಲಿಲ್ಲ!
Team Udayavani, Oct 12, 2024, 9:02 PM IST
ಹೈದರಾಬಾದ್ : ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ(ಅ18) ನಡೆಯುತ್ತಿರುವ ಸರಣಿಯ 3 ನೇ ಮತ್ತು ಕೊನೆಯ ಟಿ 20 ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಸ್ಪೋಟಕ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಬ್ಯಾಟರ್ ಗಳ ಅಬ್ಬರಿದಿಂದ 6 ವಿಕೆಟ್ ನಷ್ಟಕ್ಕೆ 297 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು. ಇದು ಟಿ 20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಎರಡನೇ ಅತೀ ದೊಡ್ಡ ಮೊತ್ತವಾಗಿದೆ.
ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕ ಆಟಗಾರನಾಗಿ ಇಳಿದ ಸಂಜು ಸ್ಯಾಮ್ಸನ್ ಆರಂಭದಿಂದಲೇ ಅಬ್ಬರಿಸಿ 40 ಎಸೆತಗಳಲ್ಲಿ ಶತಕ ಪೂರೈಸಿದರು. 9 ಬೌಂಡರಿ ಮತ್ತು 8 ಸಿಕ್ಸರ್ ಗಳನ್ನು ಗ್ರೌಂಡ್ ನ ಮೂಲೆ ಮೂಲೆಗೆ ಚಚ್ಚಿ ಶತಕ ಪೂರೈಸಿದರು. ಇದು ಭಾರತೀಯ ಬ್ಯಾಟರ್ ಒಬ್ಬರ ಎರಡನೇ ಅತೀ ವೇಗದ ಶತಕವಾಗಿದೆ. 111 ರನ್ ಗಳಿಸಿ ಸ್ಯಾಮ್ಸನ್ ಔಟಾದರು. ರೋಹಿತ್ ಶರ್ಮ ಅವರು 35 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿರುವ ದಾಖಲೆಯನ್ನು ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ ಅವರೊಂದಿಗೆ ಹೊಂದಿದ್ದಾರೆ.
ಅಭಿಷೇಕ್ ಶರ್ಮ 4 ರನ್ ಗಳಿಸಿ ಔಟಾದರು. ಆ ಬಳಿಕ ಸ್ಯಾಮ್ಸನ್ ಅವರಿಗೆ ನಾಯಕ ಸೂರ್ಯ ಕುಮಾರ್ ಯಾದವ್ ಜತೆಯಾದರು. ಇಬ್ಬರು, ಬಾಂಗ್ಲಾ ಬೌಲರ್ ಗಳನ್ನು ಮನ ಬಂದಂತೆ ದಂಡಿಸಿದರು. ಸೂರ್ಯ ಕುಮಾರ್ 75 ರನ್ (35ಎಸೆತ) ಗಳಿಸಿ ಔಟಾದರು. 8 ಬೌಂಡರಿ ಮತ್ತು 5 ಸಿಕ್ಸರ್ ಸಿಡಿಸಿದರು. ರಿಯಾನ್ ಪರಾಗ್ 34 ರನ್ (13ಎಸೆತ) ಗಳಿಸಿ ಔಟಾದರು. ಹಾರ್ದಿಕ್ ಪಾಂಡ್ಯ ಅವರೂ ಸಿಡಿಲಬ್ಬರ ತೋರಿದರು.18 ಎಸೆತಗಳಲ್ಲಿ 47 ರನ್ ಗಳಿಸಿದ್ದ ವೇಳೆ ಕ್ಯಾಚಿತ್ತು ನಿರ್ಗಮಿಸಿದರು.
ನೇಪಾಳ ತಂಡ ಮಂಗೋಲಿಯಾ ವಿರುದ್ಧ ದಾಖಲಿಸಿದ 314 ರನ್ ಇದುವರೆಗಿನ ಅತ್ಯಧಿಕ ಮೊತ್ತವಾಗಿದೆ. ಭಾರತ ತಂಡಕ್ಕೆ ಆ ದಾಖಲೆ ಮುರಿಯಲು ಸಾಧ್ಯವಾಗಲಿಲ್ಲ!. ಆದರೆ ಟೆಸ್ಟ್ ಆಡುವ ರಾಷ್ಟ್ರಗಳಲ್ಲಿ ಭಾರತದ ದಾಖಲೆ ಮೊದಲನೆಯದಾಗಿದೆ.
ಭಾರತ ಸರಣಿಯ ಎರಡೂ ಪಂದ್ಯಗಳನ್ನು ಈಗಾಗಲೇ ಗೆದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 series; ಕ್ಲೀನ್ಸ್ವೀಪ್ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್ ಗೆಲುವು
Mohammed Siraj: ತೆಲಂಗಾಣ ಡಿಎಸ್ಪಿಯಾಗಿ ವೇಗಿ ಮೊಹಮ್ಮದ್ ಸಿರಾಜ್ ಆಯ್ಕೆ
Women’s T20 World Cup: ಶ್ರೀಲಂಕಾ ವಿರುದ್ಧ ಕಿವೀಸ್ಗೆ 8 ವಿಕೆಟ್ ಜಯಭೇರಿ
Women’s T20 World Cup: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಕ್ಕೆ 9 ವಿಕೆಟ್ ಸುಲಭ ಜಯ
Asia TT: ಭಾರತ ಮಹಿಳಾ ಡಬಲ್ಸ್ ಜೋಡಿ ಸೆಮೀಸ್ಗೆ, ಪದಕ ಖಚಿತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
T20 series; ಕ್ಲೀನ್ಸ್ವೀಪ್ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್ ಗೆಲುವು
Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್ ಸರಕಾರದ ಚಾಳಿ: ಪ್ರಹ್ಲಾದ್ ಜೋಶಿ
NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!
Uppinangady: ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್; ಚಾಲಕ ಸಾವು
Surathkal: ಕಾಮಗಾರಿ ಹೊಂಡಕ್ಕೆ ಬಿದ್ದ ಬೈಕ್ ಸವಾರ ಪಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.