![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 24, 2020, 3:50 PM IST
ಆಕ್ಲಂಡ್: ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ತಮ್ಮ ನ್ಯೂಝಿಲ್ಯಾಂಡ್ ಪ್ರವಾಸವನ್ನು ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೊಳಿಸಿದೆ. ಆಕ್ಲಂಡ್ ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದಿದೆ.
ನ್ಯೂಝಿಲ್ಯಾಂಡ್ ನೀಡಿದ 203 ರನ್ ಗಳ ಭರ್ಜರಿ ಸವಾಲನ್ನು ಬೆನ್ನತ್ತಿದ್ದ ಭಾರತ ಕೆ.ಎಲ್. ರಾಹುಲ್ (56), ಶ್ರೇಯಸ್ ಅಯ್ಯರ್ (ಅಜೇಯ 58) ಅವರ ಭರ್ಜರಿ ಅರ್ಧಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ (45) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ 06 ವಿಕೆಟ್ ಗಳ ಗೆಲುವನ್ನು ತನ್ನದಾಗಿಸಿಕೊಂಡಿತು. 19 ಓವರ್ ಗಳಲ್ಲಿ ಭಾರತ ಗೆಲುವಿನ ಗುರಿ ಮುಟ್ಟಿತು.
ಇದಕ್ಕೂ ಮೊದಲು ಟಾಸ್ ಗೆದ್ದ ವಿರಾಟ್ ಕೊಹ್ಲಿ ನ್ಯೂಝಿಲ್ಯಾಂಡನ್ನು ಬ್ಯಾಟಿಂಗ್ ಗೆ ಇಳಿಸಿದರು. ಕಾಲಿನ್ ಮನ್ರೋ (59), ನಾಯಕ ಕೇನ್ ವಿಲಿಯಮ್ಸನ್ (26 ಎಸೆತೆಗಳಲ್ಲಿ 51) ಮತ್ತು ಇನ್ನಿಂಗ್ಸ್ ನ ಕೊನೆಯಲ್ಲಿ ಅನುಭವಿ ರಾಸ್ ಟಯ್ಲರ್ (27 ಎಸೆತಗಳಲ್ಲಿ ಅಜೇಯ 54) ಅವರ ಸ್ಪೋಟಕ ಆಟದ ನೆರವಿನಿಂದ ನ್ಯೂಝಿಲ್ಯಾಂಡ್ ನಿಗದಿತ 20 ಓವರುಗಳಲ್ಲಿ 05 ವಿಕೆಟ್ ಗಳನ್ನು ಕಳೆದುಕೊಂಡು 203 ರನ್ ಗಳನ್ನು ಕಲೆ ಹಾಕಿತು.
ಈ ಗುರಿಯನ್ನು ಬೆನ್ನತ್ತಲಾರಂಭಿಸಿದ ಭಾರತಕ್ಕೆ ಉತ್ತಮ ಆರಂಭವೇನೂ ಲಭಿಸಲಿಲ್ಲ. ತಂಡದ ಮೊತ್ತ 16 ಆಗುವಷ್ಟರಲ್ಲಿ ರೋಹಿತ್ ಶರ್ಮಾ 07 ರನ್ ಗಳಿಸಿ ಔಟಾದರು. ಈ ಸಂದರ್ಭದಲ್ಲಿ ರಾಹುಲ್ ಜೊತೆಯಾದ ವಿರಾಟ್ ಕೊಹ್ಲಿ ಕಿವೀಸ್ ಬೌಲರ್ ಗಳನ್ನು ದಂಡಿಸುತ್ತಾ ತಂಡದ ಮೊತ್ತವನ್ನು ಏರಿಸುವ ಜೊತೆಯಾಟವನ್ನು ಕಟ್ಟಿದರು. ಎರಡನೇ ವಿಕೆಟಿಗೆ ಈ ಜೋಡಿ 99 ರನ್ ಗಳನ್ನು ಕಲೆಹಾಕುವ ಮೂಲಕ ಗೆಲುವಿನ ಬುನಾದಿಯನ್ನು ಕಟ್ಟಿಕೊಟ್ಟರು.
ಈ ಸಂದರ್ಭದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸುತ್ತಿದ್ದ ಕೆ.ಎಲ್. ರಾಹುಲ್ ಅವರು 56 ರನ್ ಗಳಿಸಿ ಔಟಾದರು. ಇವರು ಕೇವಲ 27 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿ ನೆರವಿನಿಂದ 56 ರನ್ ಸಿಡಿಸಿದ್ದು ವಿಶೇಷವಾಗಿತ್ತು.
ರಾಹುಲ್ ಬೆನ್ನಲ್ಲೇ ವಿರಾಟ್ ಕೊಹ್ಲಿ 45 ರನ್ ಗಳಿಸಿ ಔಟಾದರು. ಈ ಸಂದರ್ಭದಲ್ಲಿ ತಂಡದ ಗೆಲುವಿಗೆ 80ಕ್ಕೂ ಹೆಚ್ಚು ರನ್ ಗಳ ಅಗತ್ಯವಿತ್ತು ಬಾಕಿ ಇದ್ದಿದ್ದು 9 ಓವರ್ ಗಳು ಮಾತ್ರ. ಈ ಹಂತದಲ್ಲಿ ಶ್ರೇಯಸ್ ಅಯ್ಯರ್ ಅವರು ಏಕಾಂಗಿ ಹೋರಾಟ ನಡೆಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇವರಿಗೆ ಶಿವಂ ದುಬೆ (13) ಮತ್ತು ಮನೀಶ್ ಪಾಂಡೆ (ಅಜೇಯ 14) ಅವರಿಂದ ಉತ್ತಮ ಬೆಂಬಲ ಲಭಿಸಿತು.
ಭಾರತವನ್ನು ಗೆಲುವಿನ ದಡ ಮುಟ್ಟಿಸಿದ ಶ್ರೇಯಸ್ ಅಯ್ಯರ್ ಅವರು ಕೇವಲ 29 ಎಸೆತಗಳಲ್ಲಿ 58 ರನ್ ಬಾರಿಸಿ ಅಜೇಯರಾಗಿ ಉಳಿದರು. ಈ ಸ್ಪೋಟಕ ಇನ್ನಿಂಗ್ಸ್ ನಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ಸಹ ಒಳಗೊಂಡಿತ್ತು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.