INDvsAUS; ರೋಹಿತ್-ರಾಹುಲ್ ಅಲ್ಲ; ಸರಣಿ ವಿಜೇತ ಟ್ರೋಫಿ ಎತ್ತಿ ಹಿಡಿದ ಆಟಗಾರರು ಯಾರು?


Team Udayavani, Sep 28, 2023, 1:14 PM IST

INDvsAUS; ರೋಹಿತ್-ರಾಹುಲ್ ಅಲ್ಲ; ಸರಣಿ ವಿಜೇತ ಟ್ರೋಫಿ ಎತ್ತಿ ಹಿಡಿದ ಆಟಗಾರರು ಯಾರು?

ರಾಜಕೋಟ್: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯು ಬುಧವಾರ ರಾಜಕೋಟ್ ನಲ್ಲಿ ಅಂತ್ಯವಾಗಿದೆ. ಮೂರನೇ ಪಂದ್ಯದಲ್ಲಿ ಭಾರತ ತಂಡವು ಸೋಲನುಭವಿಸಿದರೂ ಮೊದಲೆರಡು ಪಂದ್ಯ ಗೆದ್ದ ಕಾರಣ ಸರಣಿ ಜಯ ಸಾಧಿಸಿತು. ಆದರೆ ಪಂದ್ಯದ ಬಳಿಕ ನಡೆದ ಟ್ರೋಫಿ ಫೋಟೊ ಸೆಶನ್ ವೇಳೆ ಟ್ರೋಫಿ ಹಿಡಿದ ಆಟಗಾರ ಯಾರು ಎಂಬ ಕುತೂಹಲ ಎಲ್ಲರಿಗೂ ಕಾಡುತ್ತಿದೆ.

ಸಾಮಾನ್ಯವಾಗಿ ಟೀಂ ಇಂಡಿಯಾ ಯಾವುದೇ ಟ್ರೋಫಿ ಗೆದ್ದರೆ ಆ ಸರಣಿಯಲ್ಲಿ ಆಡಿದ ಹೊಸ ಆಟಗಾರ ಅಥವಾ ಕಿರಿಯ ಆಟಗಾರನಿಗೆ ನೀಡುವುದು ಸಂಪ್ರದಾಯ. ಆದರೆ ಆಸೀಸ್ ವಿರುದ್ಧ ರಾಜಕೋಟ್ ನಲ್ಲಿ ಸರಣಿ ಗೆದ್ದ ಬಳಿಕ ನಾಯಕ ರೋಹಿತ್ ಶರ್ಮಾ ಅಥವಾ ಮೊದಲೆರಡು ಪಂದ್ಯಗಳಲ್ಲಿ ತಂಡ ಮುನ್ನಡೆಸಿದ್ದ ಕೆಎಲ್ ರಾಹುಲ್ ಆಗಲಿ ಅಥವಾ ಯಾವುದೇ ತಂಡದ ಕಿರಿಯ ಆಟಗಾರ ಟ್ರೋಫಿ ಎತ್ತಿಕೊಂಡು ಫೋಟೊಸೆಶನ್ ನಲ್ಲಿ ಭಾಗಿಯಾಗಲಿಲ್ಲ. ಅದರ ಬದಲಿಗೆ ಟ್ರೋಫಿ ಎತ್ತಿಕೊಂಡಿದ್ದು ಸೌರಾಷ್ಟ್ರದ ಧರ್ಮೇಂದ್ರ ಸಿಂಗ್ ಜಡೇಜಾ.

ಮೂರನೇ ಏಕದಿನ ಪಂದ್ಯದಲ್ಲಿ ಇಂಡಿಯಾ ಸ್ಕ್ವಾಡ್ ನಲ್ಲಿ ಕೇವಲ 13 ಆಟಗಾರರಿದ್ದ ಕಾರಣ ಸೌರಾಷ್ಟ್ರದ ನಾಲ್ವರು ಆಟಗಾರರನ್ನು ಹೆಚ್ಚುವರಿ ಆಟಗಾರರನ್ನಾಗಿ ನೇಮಿಸಲಾಗಿತ್ತು. ಧರ್ಮೇಂದ್ರ ಸಿಂಗ್ ಜಡೇಜಾ, ಪ್ರೇರಕ್ ಮಂಕಡ್, ವಿಶ್ವರಾಜ್ ಜಡೇಜಾ ಮತ್ತು ಹಾರ್ವಿಕ್ ದೇಸಾಯಿ ಅವರು ರಾಜಕೋಟ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಡ್ರಿಂಕ್ಸ್ ಸಾಗಾಟ ಮತ್ತು ಬದಲಿ ಫೀಲ್ಡರ್ ಗಳಾಗಿದ್ದರು. ಹೀಗಾಗಿ ಫೋಟೋ ಸೆಶನ್ ನಲ್ಲಿ ಈ ಆಟಗಾರರನ್ನು ಮಧ್ಯದಲ್ಲಿ ನಿಲ್ಲಿಸಿ ಟ್ರೋಫಿ ನೀಡಲಾಯಿತು.

ತಂಡದ ಕೆಲವು ಆಟಗಾರರು ವಿಶ್ವಕಪ್ ಗೆ ಮುನ್ನ ಮನೆಗೆ ತೆರಳಿರುವ ಕಾರಣ ಮತ್ತು ಕೆಲವರು ಜ್ವರದಿಂದ ಬಳಲುತ್ತಿರುವ ಕಾರಣ ರಾಜಕೋಟ್ ಪಂದ್ಯಕ್ಕೆ ಕೇವಲ 13 ಆಟಗಾರರು ತಂಡದಲ್ಲಿದ್ದಾರೆ ಎಂದು ಮೂರನೇ ಏಕದಿನ ಪಂದ್ಯಕ್ಕೆ ಮುನ್ನ ರೋಹಿತ್ ಶರ್ಮಾ ಅವರು ಸ್ಪಷ್ಟಪಡಿಸಿದ್ದರು.

ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರು ಜ್ವರದಿಂದ ಬಳಲುತ್ತಿದ್ದ ಕಾರಣ ರಾಜಕೋಟ್ ಪಂದ್ಯಕ್ಕೆ ಅಲಭ್ಯರಾಗಿರಲಿಲ್ಲ. ಹೀಗಾಗಿ ಆರಂಭಿಕರಾಗಿ ರೋಹಿತ್ ಶರ್ಮಾ ಜತೆಗೆ ವಾಷಿಂಗ್ಟನ್ ಸುಂದರ್ ಆಡಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

Paris Paralympics; Another gold for India; Praveen Kumar won gold in high jump

Paralympics; ಭಾರತಕ್ಕೆ ಮತ್ತೊಂದು ಬಂಗಾರ; ಹೈಜಂಪ್‌ ನಲ್ಲಿ ಚಿನ್ನ ಗೆದ್ದ ಪ್ರವೀಣ್‌ ಕುಮಾರ್

Vikram Rathore; Former coach of Team India joined New Zealand team

Vikram Rathour; ನ್ಯೂಜಿಲ್ಯಾಂಡ್‌ ತಂಡ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.