INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್


Team Udayavani, Oct 18, 2024, 4:38 PM IST

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

ಮುಂಬೈ: ವೃತ್ತಿಪರ ಕ್ರಿಕೆಟಿಗರಾಗಬೇಕು ಎಂಬ ಕಾರಣದಿಂದ ಅದೆಷ್ಟೋ ಆಟಗಾರರು ತಮ್ಮ ಶೈಕ್ಷಣಿಕ ಜೀವನವನ್ನು ಅರ್ಧಕ್ಕೆ ತೊರೆಯುತ್ತಾರೆ. ಅದೆಷ್ಟೋ ಕ್ರಿಕೆಟಿಗರು ತಮ್ಮ 12ನೇ ತರಗತಿ ಶಿಕ್ಷಣವನ್ನೂ ಪೂರ್ಣಗೊಳಿಸುವುದಿಲ್ಲ. ಆದರೆ ಇಲ್ಲೊಬ್ಬರು 12ನೇ ತರಗತಿಯ ಪರೀಕ್ಷೆಗಾಗಿ ಅಂತಾರಾಷ್ಟ್ರೀಯ ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ.

ಹೌದು, ಭಾರತೀಯ ವನಿತಾ ತಂಡದ ವಿಕೆಟ್‌ ಕೀಪರ್‌ ಬ್ಯಾಟರ್‌ ರಿಚಾ ಘೋಷ್‌ (Richa Ghosh) ತನ್ನ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು ನ್ಯೂಜಿಲ್ಯಾಂಡ್ ವಿರುದ್ಧದ ಮುಂಬರುವ ಏಕದಿನ ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ. 21 ವರ್ಷಕ್ಕೆ ಕಾಲಿಟ್ಟಿರುವ ಘೋಷ್ ಅವರು 16 ವರ್ಷ ವಯಸ್ಸಿನಿಂದ ಅಂದರೆ 2020 ರಿಂದ ಭಾರತದ ಅಂತಾರಾಷ್ಟ್ರೀಯ ತಂಡದ ಭಾಗವಾಗಿದ್ದಾರೆ.

ಕಿವೀಸ್‌ ವನಿತೆಯರ ವಿರುದ್ದದ ಸರಣಿಗೆ ವಿಕೆಟ್‌ ಕೀಪರ್‌ ಗಳಾಗಿ ಯಾಸ್ತಿಕಾ ಭಾಟಿಯಾ ಮತ್ತು ಉಮಾ ಚೆತ್ರಿ ಆಯ್ಕೆಯಾಗಿದ್ದಾರೆ.

ಟಿ20 ವಿಶ್ವಕಪ್‌ ಬಳಿಕ ನ್ಯೂಜಿಲ್ಯಾಂಡ್‌ ವನಿತಾ ತಂಡವು ಭಾರತ ಪ್ರವಾಸ ಕೈಗೊಳ್ಳಲಿದೆ. ಅ.24,27 ಮತ್ತು 29ರಂದು ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಮೂರು ಪಂದ್ಯಗಳು ಅಹಮದಾಬಾದ್‌ ನಲ್ಲಿ ನಡೆಯಲಿದೆ.

ವೇಗದ ಬೌಲಿಂಗ್ ಆಲ್‌ರೌಂಡರ್‌ ಗಳಾದ ಸಯಾಲಿ ಸತ್‌ಘರೆ ಮತ್ತು ಸೈಮಾ ಠಾಕೋರ್, ಲೆಗ್‌ಸ್ಪಿನ್ನರ್ ಪ್ರಿಯಾ ಮಿಶ್ರಾ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ ತೇಜಲ್ ಹಸಬ್ನಿಸ್‌ ಮೊದಲ ಬಾರಿ ಏಕದಿನ ತಂಡದ ಕರೆ ಪಡೆದಿದ್ದಾರೆ.

ಗಾಯದ ಕಾರಣ ಲೆಗ್‌ಸ್ಪಿನ್ನರ್ ಆಶಾ ಶೋಭನಾ ಆಯ್ಕೆಗೆ ಅಲಭ್ಯರಾಗಿದ್ದರೆ, ಆಲ್‌ ರೌಂಡರ್ ಪೂಜಾ ವಸ್ತ್ರಾಕರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಹೇಳಿದೆ.

ಭಾರತೀಯ ತಂಡ

ಹರ್ಮನ್‌ಪ್ರೀತ್ ಕೌರ್ (ನಾ), ಸ್ಮೃತಿ ಮಂಧಾನ (ಉ.ನಾ), ಶಫಾಲಿ ವರ್ಮಾ, ಡಿ ಹೇಮಲತಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ಯಾಸ್ತಿಕಾ ಭಾಟಿಯಾ (ವಿ.ಕೀ), ಉಮಾ ಚೆಟ್ರಿ (ವಿ.ಕೀ), ಸಯಾಲಿ ಸತ್‌ಘರೆ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ತೇಜಲ್ ಹಸಬ್ನಿಸ್ ಠಾಕೂರ್, ಪ್ರಿಯಾ ಮಿಶ್ರಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್.

ಟಾಪ್ ನ್ಯೂಸ್

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.