INDvsPAK: ಪಂದ್ಯ ಸೋತ ಬಳಿಕ ಅಳುತ್ತಿದ್ದ ಪಾಕ್ ಆಟಗಾರನಿಗೆ ಸಂತೈಸಿದ ರೋಹಿತ್ ಶರ್ಮಾ
Team Udayavani, Jun 10, 2024, 12:58 PM IST
ನ್ಯೂಯಾರ್ಕ್: ಐಸಿಸಿ ಟಿ20 ವಿಶ್ವಕಪ್ ನ ಬಹುನಿರೀಕ್ಷಿತ ಪಂದ್ಯಕ್ಕೆ ರವಿವಾರ ನ್ಯೂಯಾರ್ಕ್ ಸಾಕ್ಷಿಯಾಗಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ನ್ಯೂಯಾರ್ಕ್ ನ ನಸ್ಸೌ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿದೆ. ಲೋ ಸ್ಕೋರಿಂಗ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆಯುವ ಆರು ರನ್ ಅಂತರದ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 19 ಓವರ್ ಗಳಲ್ಲಿ 119 ರನ್ ಗೆ ಆಲೌಟಾದರು. ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡವು 113 ರನ್ ಮಾತ್ರ ಗಳಿಸಲು ಶಕ್ತವಾಯಿತು. ಕೊನೆಯ ಓವರ್ ನಲ್ಲಿ ನಸೀಂ ಶಾ ಪ್ರಯತ್ನಪಟ್ಟರಾದರೂ ಪಾಕ್ ತಂಡವನ್ನು ಗೆಲುವಿನ ಗುರಿ ತಲುಪಿಸಲು ಸಾಧ್ಯವಾಗಲಿಲ್ಲ.
ನಸೀಂ ಶಾ ನಾಲ್ಕು ಎಸೆತಗಳಲ್ಲಿ ಹತ್ತು ರನ್ ಗಳಿಸಿ ಅಜೇಯರಾಗಿ ಉಳಿದರು. ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡ ಬಳಿಕ ಡಗೌಟ್ ಕಡೆ ಬರುತ್ತಿದ್ದ ನಸೀಂ ಶಾ ಬೇಸರ ತಡೆಯಲಾರದೆ ಬಿಕ್ಕಿ ಅತ್ತರು. ಸಹ ಆಟಗಾರ ಶಾಹೀನ್ ಅಫ್ರಿದಿ ಅವರು ನಸೀಂ ಅವರಿಗೆ ಸಂತೈಸಿದರು.
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಕೂಡಾ ಅಳುತ್ತಿದ್ದ ನಸೀಂ ಶಾ ಅವರನ್ನು ಸಂತೈಸುವುದು ಕಂಡು ಬಂತು.
Rohit Sharma appreciating the efforts of Naseem Shah after the match. He asked him to not cry. What a moment ❤️❤️❤️#T20WorldCup #PAKvsIND #INDvsPAK #tapmad #HojaoADFree pic.twitter.com/YNnLEbra8h
— Farid Khan (@_FaridKhan) June 9, 2024
ಪಂದ್ಯದ ಬಳಿಕ ಮಾತನಾಡಿದ ಪಾಕ್ ನಾಯಕ ಬಾಬರ್ ಅಜಂ ಅವರು ತಂಡದ ಬ್ಯಾಟರ್ ಗಳನ್ನು ಸೋಲಿಗೆ ಹೊಣೆ ಮಾಡಿದರು. “ನಾವು ಉತ್ತಮವಾಗಿ ಬೌಲಿಂಗ್ ಮಾಡಿದೆವು. ಆದರೆ ಬ್ಯಾಟಿಂಗ್ ವೇಳೆ ಸತತ ವಿಕೆಟ್ ಕಳೆದುಕೊಂಡೆವು. ಸರಳವಾಗಿ ಆಡಬೇಕಿತ್ತು. ತಪ್ಪುಗಳ ಬಗ್ಗೆ ಕುಳಿತು ಮಾತನಾಡುತ್ತೇವೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.