INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್
Team Udayavani, Jul 6, 2024, 7:53 AM IST
ಹರಾರೆ: ಐಸಿಸಿ ಟಿ20 ವಿಶ್ವಕಪ್ ಗೆಲುವಿನ ಬಳಿಕ ಮೊದಲ ಅಂತಾರಾಷ್ಟ್ರೀಯ ಸರಣಿಗೆ ಭಾರತ ಸಜ್ಜಾಗಿದೆ. ಜಿಂಬಾಬ್ವೆ ವಿರುದ್ದದ ಐದು ಪಂದ್ಯಗಳ ಟಿ20 ಸರಣಿ ಶನಿವಾರ ಹರಾರೆಯಲ್ಲಿ ಆರಂಭವಾಗಲಿದೆ. ವಿಶೇಷವೆಂದರೆ ಟಿ20 ವಿಶ್ವಕಪ್ ನಲ್ಲಿ ಆಡಿದ ಒಬ್ಬನೇ ಒಬ್ಬ ಆಟಗಾರ ಜಿಂಬಾಬ್ವೆ ವಿರುದ್ದದ ಮೊದಲೆರಡು ಪಂದ್ಯಗಳಲ್ಲಿ ಆಡುವುದಿಲ್ಲ.
ಟಿ20 ವಿಶ್ವಕಪ್ ಸ್ಕ್ವಾಡ್ ನಲ್ಲಿದ್ದ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಶಿವಂ ದುಬೆ ಅವರು ಈ ಪ್ರವಾಸಕ್ಕೆ ಆಯ್ಕೆಯಾಗಿದ್ದರು. ಆದರೆ ಬಾರ್ಬಡಾಸ್ ನಲ್ಲಿ ಚಂಡಮಾರುತದ ಕಾರಣದಿಂದ ಭಾರತಕ್ಕೆ ಮರಳುವುದು ವಿಳಂಬವಾದ ಕಾರಣ ಮೊದಲೆರಡು ಪಂದ್ಯಗಳಿಂದ ತಪ್ಪಿಸಿಕೊಂಡಿದ್ದಾರೆ.
ಜಿಂಬಾಬ್ವೆ ಸರಣಿಗೆ ಯುವ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಶುಭ್ಮನ್ ಗಿಲ್ ತಂಡದ ನಾಯಕರಾಗಿದ್ದಾರೆ. ಈ ಸರಣಿಯಲ್ಲಿ ಯಾರು ತಂಡದ ಆರಂಭಿಕ ಬ್ಯಾಟರ್ ಗಳು ಎಂಬ ಕುತೂಹಲವೊಂದಿತ್ತು. ಅದು ಈಗ ತಣಿದಿದೆ. ನಾಯಕ ಗಿಲ್ ಅದಕ್ಕೆ ಉತ್ತರ ನೀಡಿದ್ದಾರೆ.
“ಅಭಿಷೇಕ್ ಶರ್ಮಾ ನನ್ನೊಂದಿಗೆ ಆರಂಭಿಕರಾಗಿ ಇರುತ್ತಾರೆ. ರುತುರಾಜ್ ಗಾಯಕ್ವಾಡ್ ಅವರು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ” ಎಂದು ಗಿಲ್ ಹೇಳಿದ್ದಾರೆ.
ಈ ಬಾರಿಯ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಆಡಿದ್ದ ಅಭಿಷೇಕ್ ಹೊಸ ಸಂಚಲನ ಮೂಡಿಸಿದ್ದರು. ಸ್ಪೋಟಕ ಬ್ಯಾಟಿಂಗ್ ನಡೆಸಿದ್ದ ಶರ್ಮಾ ಹೊಸ ಬಗೆಯ ಟಿ20 ಬ್ಯಾಟಿಂಗ್ ನ್ನು ಎಲ್ಲರೂ ಕೊಂಡಾಡಿದ್ದರು. ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ಪಂಜಾಬ್ ಬ್ಯಾಟರ್ ಇದೇ ಮೊದಲ ಬಾರಿಗೆ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ.
ಜಿಂಬಾಬ್ವೆಯ ಭಾರತ ಪ್ರವಾಸ 2024: ಪೂರ್ಣ ವೇಳಾಪಟ್ಟಿ
1ನೇ T20I ಜುಲೈ 6, ಶನಿವಾರ
2ನೇ T20I ಜುಲೈ 7, ಭಾನುವಾರ
3ನೇ T20I ಜುಲೈ 10, ಬುಧವಾರ
4ನೇ T20I ಜುಲೈ 13, ಶನಿವಾರ
5ನೇ T20I ಜುಲೈ 14, ಭಾನುವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.