ಉತ್ತಮ ನಿರ್ವಹಣೆಗೆ ಲೆವಿಸ್‌ ನೆರವು: ರೋಹಿತ್‌


Team Udayavani, Apr 19, 2018, 6:00 AM IST

20.jpg

ಮುಂಬಯಿ: ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಉತ್ತಮ ನಿರ್ವಹಣೆ ನೀಡಲು ವೆಸ್ಟ್‌ ಇಂಡೀಸ್‌ನ ಎವಿನ್‌ ಲೆವಿಸ್‌ ನೆರವಾದರು ಎಂದು ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್‌ ಶರ್ಮ ಹೇಳಿದ್ದಾರೆ. ಸತತ ಮೂರು ಸೋಲಿನ ಬಳಿಕ ಮುಂಬೈ ಮಂಗಳವಾರ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು 46 ರನ್ನುಗಳಿಂದ ಸೋಲಿಸುವ ಮೂಲಕ ತನ್ನ ಮೊದಲ ಗೆಲುವು ದಾಖಲಿಸಿತ್ತು. ರೋಹಿತ್‌ ಮತ್ತು ಲೆವಿಸ್‌ ಅವರ ಉತ್ತಮ ಆಟದಿಂದಾಗಿ ಮುಂಬೈ ಜಯಭೇರಿ ಬಾರಿಸುವಂತಾಯಿತು. ಮುಂಬೈ 6 ವಿಕೆಟಿಗೆ 213 ರನ್‌  ಪೇರಿಸಿದ್ದರೆ ಬೆಂಗಳೂರು 8 ವಿಕೆಟಿಗೆ 167 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಎವಿನ್‌ ಲೆವಿಸ್‌ ಬ್ಯಾಟಿಂಗ್‌ ಮಾಡುವ ವೇಳೆ ಏನು ಬೇಕಾದರೂ ಸಂಭವಿಸ ಬಹುದು. ಅವರೊಬ್ಬ ಚೆಂಡನ್ನು ಶಕ್ತಿಶಾಲಿ ಯಾಗಿ ಹೊಡೆಯಬಲ್ಲ ಶ್ರೇಷ್ಠ ಆಟಗಾರ. ಎಂತಹ ಎಸೆತವನ್ನು ಕೂಡ ಅವರು ಬಲವಾಗಿ ಹೊಡೆಯಬಲ್ಲರು. ಅವರ ಈ ಆಟದಿಂದ ಪ್ರೇರಣೆಗೊಂಡ ನಾನು ಹೊಡೆಯಲು ಆರಂಭಿಸಿದೆ ಮಾತ್ರವಲ್ಲದೇ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಲು ಸಾಧ್ಯವಾಯಿತು ಎಂದು ರೋಹಿತ್‌ ವಿವರಿಸಿದರು.

ಓರ್ವ ಆಟಗಾರ ದೀರ್ಘ‌ ಸಮಯದ ವರೆಗೆ ಬ್ಯಾಟಿಂಗ್‌ ಪ್ರದರ್ಶಿಸಿದರೆ ಪಂದ್ಯದ ಚಿತ್ರಣವನ್ನೇ ಬದಲಿಸಬಹುದು. ಲೆವಿಸ್‌ ಮತ್ತು ನನ್ನ ಸೊಗಸಾದ ಆಟದಿಂದಾಗಿ ನಾವು ಬೃಹತ್‌ ಮೊತ್ತ ಪೇರಿಸುವಂತಾಯಿತು ಎಂದರು ರೋಹಿತ್‌. ನಮ್ಮ ಆರಂಭ ಹೀನಾಯವಾಗಿತ್ತು. ರನ್‌ ಖಾತೆ ತೆರೆಯುವ ಮೊದಲೇ ನಾವು ಎರಡು ವಿಕೆಟನ್ನು ಕಳೆದುಕೊಂಡಿದ್ದೆವು. ಆದರೂ ನಾವು ಭಾರೀ ಅಂತರದಿಂದ ಗೆದ್ದಿದ್ದೇವೆ ಎಂದರು ರೋಹಿತ್‌ ತಿಳಿಸಿದರು.

ಕಳೆದ ಮೂರು ಪಂದ್ಯಗಳಲ್ಲಿ ನಾವು ಒಂದು ತಂಡವಾಗಿ ಮಾಡದ ಕೆಲಸವೆಂದರೆ ಚೆನ್ನಾಗಿ ಬ್ಯಾಟಿಂಗ್‌ ಮಾಡಿದ ವೇಳೆ ನಮ್ಮ ಬೌಲಿಂಗ್‌ ಚೆನ್ನಾಗಿಲ್ಲದಿರುವುದು ಆಗಿದೆ. ಉತ್ತಮ ಬೌಲಿಂಗ್‌ ವೇಳೆ ನಮ್ಮ ಬ್ಯಾಟಿಂಗ್‌ ವೈಫ‌ಲ್ಯ ಕಂಡಿರುವುದು ಆಗಿದೆ. ನಮ್ಮ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಉತ್ತಮವಾಗಿದ್ದರೆ ಮತ್ತು ಸ್ಥಿರ ನಿರ್ವಹಣೆ ನೀಡುತ್ತಿದ್ದರೆ ಗೆಲುವು ಸುಲಭವಾಗಿ ಒಲಿಯಬಹುದು ಎಂದು ರೋಹಿತ್‌ ಹೇಳಿದರು.

ಮೂರನೇ ಕ್ರಮಾಂಕ
ಬ್ಯಾಟಿಂಗ್‌ ಕ್ರಮಾಂಕದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರೋಹಿತ್‌ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮುಂದುವರಿಸುವೆ ಈ ಮೂಲಕ ಹೊಸ ಆಟಗಾರರಿಗೆ ಕ್ರೀಸ್‌ನಲ್ಲಿ ನಿಲ್ಲಲು ಅವಕಾಶ ನೀಡುವೆ ಎಂದರು. ಬ್ಯಾಟಿಂಗ್‌ ಕ್ರಮಾಂಕದಲ್ಲಿ ಬದಲಾವಣೆ ಮಾಡುವ ಯಾವುದೇ ಆಲೋಚನೆಯಿಲ್ಲ. ಆಟಗಾರರಿಗೆ ಆರಾಮವಾಗಿ ಆಡುವ ಅವಕಾಶ ಕಲ್ಪಿಸುವುದು ಅತೀಮುಖ್ಯ. ಮುಂದಿನ ಪಂದ್ಯಗಳಲ್ಲಿ ಯಾವ ಕ್ರಮಾಂಕದಲ್ಲಿ ಆಡಬೇಕೆಂದು ಅವರಿಗೆ ತಿಳಿದಿದೆ. ಅದರಂತೆ ಯೋಜನೆ ರೂಪಿಸಿಕೊಂಡು ಆಡಲಿದ್ದೇವೆ. ಆಗಾಗ್ಗೆ ಬದಲಾವಣೆ ಮಾಡುತ್ತಿದ್ದರೆ ಯಾವುದೇ ಪ್ರಯೋಜನ ಸಿಗುವುದಿಲ್ಲ ಎಂದು ರೋಹಿತ್‌ ವಿವರಿಸಿದರು.

ರೋಹಿತ್‌ 50ನೇ ಟಿ20 ಅರ್ಧಶತಕ
ಮುಂಬಯಿ: ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್‌ ಶರ್ಮ ಟಿ20 ಕ್ರಿಕೆಟ್‌ನಲ್ಲಿ 50ನೇ ಅರ್ಧಶತಕ ಬಾರಿಸಿದ್ದಾರೆ. ಇದು  ಎರಡನೇ ಶ್ರೇಷ್ಠ ಸಾಧನೆ. ವಿರಾಟ್‌ ಕೊಹ್ಲಿ, ಗೌತಮ್‌ ಗಂಭೀರ್‌ ತಲಾ 53 ಅರ್ಧಶತಕ ಬಾರಿಸಿರುವುದು ಶ್ರೇಷ್ಠ ಸಾಧನೆಯಾಗಿದೆ. ಇದೇ ವೇಳೆ ಐಪಿಎಲ್‌ನಲ್ಲಿ ಎರಡನೇ ಗರಿಷ್ಠ ಸಿಕ್ಸರ್‌ ಬಾರಿಸಿದ ದಾಖಲೆಯನ್ನು ರೋಹಿತ್‌ ಶರ್ಮ ಸಾಧಿಸಿದರು. 175 ಸಿಕ್ಸರ್‌ ಬಾರಿಸಿರುವ ರೋಹಿತ್‌ ಶರ್ಮ, ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಬ್ಯಾಟ್ಸ್‌ಮನ್‌ ಕ್ರಿಸ್‌ ಗೇಲ್‌ ಅನಂತರದ ಸ್ಥಾನ ಪಡೆದರು. ಗೇಲ್‌ ಒಟ್ಟು 269 ಸಿಕ್ಸರ್‌ ಬಾರಿಸಿದ್ದಾರೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

Paris Paralympics; Another gold for India; Praveen Kumar won gold in high jump

Paralympics; ಭಾರತಕ್ಕೆ ಮತ್ತೊಂದು ಬಂಗಾರ; ಹೈಜಂಪ್‌ ನಲ್ಲಿ ಚಿನ್ನ ಗೆದ್ದ ಪ್ರವೀಣ್‌ ಕುಮಾರ್

Vikram Rathore; Former coach of Team India joined New Zealand team

Vikram Rathour; ನ್ಯೂಜಿಲ್ಯಾಂಡ್‌ ತಂಡ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.