ಏ. 7-ಮೇ 27: ಐಪಿಎಲ್ ಹಬ್ಬ
Team Udayavani, Jan 23, 2018, 6:35 AM IST
ಹೊಸದಿಲ್ಲಿ: ಹನ್ನೊಂದನೇ ಆವೃತ್ತಿಯ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದೆ. ಏ. 6ಕ್ಕೆ ಉದ್ಘಾಟನೆ ನಡೆಯಲಿದ್ದು ಏ. 7ರಿಂದ ಮೇ 27ರ ವರೆಗೆ ಕೂಟ ನಡೆಯಲಿದೆ.
ಮುಂಬಯಿಯಲ್ಲಿ ಕೂಟದ ಆರಂಭಿಕ ಹಾಗೂ ಫೈನಲ್ ಪಂದ್ಯ ನಡೆಯಲಿದೆ. ಉದ್ಘಾಟನಾ ಸಮಾರಂಭ ಕೂಡ ಮುಂಬಯಿಯಲ್ಲೇ ನಡೆಯಲಿದೆ.
ಸಮಯದಲ್ಲಿ ಬದಲಾವಣೆ
ಈ ಸಲ ಪಂದ್ಯಗಳ ಆರಂಭದ ಸಮಯದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಸೋಮವಾರ ಐಪಿಎಲ್ ಆಡಳಿತ ಮಂಡಳಿ ಮುಖ್ಯಸ್ಥ ರಾಜೀವ್ ಶುಕ್ಲಾ, “ಪಂದ್ಯದ ನೇರ ಪ್ರಸಾರಕರು ಪಂದ್ಯ ಆರಂಭವಾಗುವ ಸಮಯವನ್ನು ಬದಲಾಯಿಸುವಂತೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ನಾವು ಪುರಸ್ಕರಿಸಿದ್ದೇವೆ. ಹೀಗಾಗಿ ರಾತ್ರಿ 8 ಗಂಟೆಗೆ ಆರಂಭವಾಗುತ್ತಿದ್ದ ಪಂದ್ಯವನ್ನು ಒಂದು ಗಂಟೆ ಮುಂಚಿತವಾಗಿ ಅಂದರೆ ರಾತ್ರಿ 7ರಿಂದ ಆರಂಭಿಸುತ್ತೇವೆ. ಸಂಜೆ 4 ಗಂಟೆಗೆ ನಡೆಯುತ್ತಿದ್ದ ಪಂದ್ಯವನ್ನು ಸಂಜೆ 5.30ಕ್ಕೆ ಆರಂಭಿಸುತ್ತೇವೆ’ ಎಂದು ತಿಳಿಸಿದರು. ಎರಡೂ ಪಂದ್ಯಗಳ ಬಹುತೇಕ ಅವಧಿ ಒಂದೇ ಆದರೂ ಇದರ ನೇರ ಪ್ರಸಾರಕ್ಕೆ ಸಾಕಷ್ಟು ಚಾನೆಲ್ಗಳು ಇರುವುದರಿಂದ ಸಮಸ್ಯೆ ಆಗದು ಎಂಬುದೊಂದು ಸಮಜಾಯಿಶಿ. ಆದರೆ ಇದರಿಂದ ವೀಕ್ಷಕರಿಗೆ ಸಮಸ್ಯೆ ಆಗುವುದರಲ್ಲಿ ಅನುಮಾನವಿಲ್ಲ. ಇದಕ್ಕೆ ಹೇಗೆ ಹೊಂದಿಕೊಳ್ಳಬೇಕೆಂಬುದು ಕ್ರಿಕೆಟ್ ಅಭಿಮಾನಿಗಳನ್ನು ಕಾಡುವ ಪ್ರಶ್ನೆ.
ಈ ಸಲ ಕಿಂಗ್ಸ್ ಇಲೆವೆನ್ ಪಂಜಾಬ್ 4 ಪಂದ್ಯವನ್ನು ತವರು ನೆಲವಾದ ಮೊಹಾಲಿಯಲ್ಲಿ ಆಡಲಿದೆ. ಉಳಿದ 3 ಪಂದ್ಯಗಳನ್ನು ಇಂದೋರ್ನಲ್ಲಿ ಆಡಲಿದೆ. 2 ವರ್ಷ ಅಮಾನತಿಗೊಳಗಾಗಿದ್ದ ರಾಜಸ್ಥಾನ್ ರಾಯಲ್ಸ್ ಈ ಬಾರಿ ಮರಳಿ ಕೂಟಕ್ಕೆ ಮರಳುತ್ತಿದೆ. ಆದರೆ ತನ್ನ ತವರು ನೆಲ ಜೈಪುರದಲ್ಲಿ ಪಂದ್ಯ ಆಡುವುದು ಇನ್ನೂ ಖಚಿತಗೊಂಡಿಲ್ಲ. ಇದಕ್ಕೆ ಕಾರಣ, ರಾಜಸ್ಥಾನ್ ಕ್ರಿಕೆಟ್ ಸಂಸ್ಥೆ ಬಿಸಿಸಿಐನಿಂದ ಅಮಾನತಿಗೆ ಒಳಗಾಗಿರುವುದು. ಪ್ರಕರಣ ಸದ್ಯ ಹೈಕೋರ್ಟ್ನಲ್ಲಿದೆ. ಜ. 24ಕ್ಕೆ ವಿಚಾರಣೆ ಇದ್ದು, ನ್ಯಾಯಾಲಯದ ಆದೇಶ ಬಂದ ಬಳಿಕವಷ್ಟೇ ಮುಂದಿನ ನಿರ್ಧಾರ ಹೊರಬೀಳಲಿದೆ. ಜ. 27 ಹಾಗೂ 28ರಂದು ಬೆಂಗಳೂರಿನಲ್ಲಿ ಐಪಿಎಲ್ ಆಟಗಾರರ ಹರಾಜು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.