ಸಂಘಟಿತ ಪ್ರಯತ್ನದಿಂದ ಗೆಲುವು: ರೋಹಿತ್‌


Team Udayavani, May 4, 2019, 6:00 AM IST

PTI5_2_2019_000197B

ಮುಂಬಯಿ: ಒಂದಿಬ್ಬರು ಆಟಗಾರರನ್ನು ಅವಲಂಬಿತವಾಗದೆ ಮತ್ತು ಆತ್ಮವಿಶ್ವಾಸದಿಂದ ಒತ್ತಡದ ಸನ್ನಿವೇಶಗಳನ್ನು ನಿಭಾಯಿಸಿರುವುದು ತಂಡ ಪ್ಲೇ ಆಫ್ ಪ್ರವೇಶಿಸಲು ಪ್ರಮುಖ ಕಾರಣವಾಗಿದೆ ಎಂದು ಮುಂಬೈ ಇಂಡಿಯನ್ಸ್‌ ತಂಡದ ಕಪ್ತಾನ ರೋಹಿತ್‌ ಶರ್ಮ ಹೇಳಿದ್ದಾರೆ.

ಮುಂಬೈ ತಂಡವು ಸನ್‌ರೈಸರ್ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಸೂಪರ್‌ ಓವರ್‌ನಲ್ಲಿ ಗೆದ್ದು ಪ್ಲೇ ಆಫ್ಗೆ ಪ್ರವೇಶಿಸಿದ 3ನೇ ತಂಡ ಎಂದೆನಿಸಿಕೊಂಡಿತಲ್ಲದೇ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಹಿಂದಿಕ್ಕಿ 2ನೇ ಸ್ಥಾನ ಅಲಂಕರಿಸಿತು.

“ಹಲವು ಆಟಗಾರರು ಜವಾಬ್ದಾರಿಯನ್ನು ಕೈಗೆತ್ತಿ ಕೊಂಡರು. ಇದು ಕೇವಲ ಒಂದಿಬ್ಬರ ಆಟವಲ್ಲ. ಈ ಕೂಟ ದಲ್ಲಿ ಜಯಿಸಬೇಕಾದರೇ ಎಲ್ಲರೂ ಉತ್ತಮ ರೀತಿಯಲ್ಲಿ ಆಡಬೇಕು. ಇದು ತಂಡದ ಗೆಲುವಿನ ರಹಸ್ಯವಾಗಿದೆ. ರಾಹುಲ್‌ ಚಹರ್‌ ಆಗಿರಲಿ ಅಥವಾ ಕ್ವಿಂಟನ್‌ ಆಗಿರಲಿ. ಒಬ್ಬರ ಆಟದಿಂದ ತಂಡ‌ ಜಯಿಸುವುದರ ಬಗ್ಗೆ ನಮಗೆ ನಂಬಿಕೆ ಇಲ್ಲ. ತಂಡವನ್ನು ಮೇಲಕ್ಕೆತ್ತಲು ಎಲ್ಲರ ಆಟವೂ ಅಗತ್ಯ’ ಎಂದು ರೋಹಿತ್‌ ಶರ್ಮ ಹೇಳಿದ್ದಾರೆ.

ಗುರುವಾರ ರಾತ್ರಿ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ-ಹೈದರಾಬಾದ್‌ ನಡುವಿನ ಪಂದ್ಯ ಟೈ ಆಗಿ, ಸೂಪರ್‌ ಓವರ್‌ ಮೂಲಕ ಫ‌ಲಿತಾಂಶ ದೊರಕಿತ್ತು. ಸೂಪರ್‌ ಓವರ್‌ನಲ್ಲಿ ಮುಂಬೈ ಜಯಭೇರಿ ಬಾರಿಸಿತು.

ಗೆಲುವಿಗೆ 17 ರನ್‌
ಹೈದರಾಬಾದ್‌ ಇನ್ನಿಂಗ್ಸ್‌ನ ಕೊನೆಯಲ್ಲಿ ಮನೀಷ್‌ ಪಾಂಡೆ ಮತ್ತು ಮೊಹಮ್ಮದ್‌ ನಬಿ ತಂಡಕ್ಕೆ ಗೆಲುವು ತಂದುಕೊಡುವ ಉತ್ಸಾಹದಲ್ಲಿದ್ದರು. ಕೊನೆಯ ಓವರ್‌ನಲ್ಲಿ ಹೈದರಾಬಾದ್‌ನ ಗೆಲುವಿಗೆ 17 ರನ್‌ ಬೇಕಾಗಿತ್ತು. ಹಾರ್ದಿಕ್‌ ಪಾಂಡ್ಯ ಎಸೆದ ಆ ಓವರ್‌ನಲ್ಲಿ ಮನೀಷ್‌ ಪಾಂಡೆ, ನಬಿ ಬಿರುಸಿನ ಆಟ ವಾಡಿದರು.

ಒಂದು ಎಸೆತ 7 ರನ್‌
ಅಂತಿಮ ಎಸೆತದಲ್ಲಿ 7 ರನ್‌ಗಳ ಅಗತ್ಯವಿತ್ತು. ಪಾಂಡೆ ಸಿಕ್ಸರ್‌ ಸಿಡಿಸುವ ಮೂಲಕ ಪಂದ್ಯವನ್ನು ಸೂಪರ್‌ ಓವರ್‌ಗೆ ಸಾಗಿಸಿದರು. ಆದರೆ ಸೂಪರ್‌ ಓವರ್‌ನಲ್ಲಿ ಹೈದರಾಬಾದ್‌ 2 ವಿಕೆಟ್‌ ಕಳೆದುಕೊಂಡು 8 ರನ್‌ ಬಾರಿಸಿತು. ಮುಂಬೈ ಪರ ಆಟಕ್ಕಿಳಿದ ಬಿಗ್‌ ಹಿಟ್ಟರ್‌ಗಳಾದ ಹಾರ್ದಿಕ್‌ ಪಾಂಡ್ಯ-ಕೈರನ್‌ ಪೊಲಾರ್ಡ್‌ ಮೂರೇ ಎಸೆತಗಳಲ್ಲಿ 9 ರನ್‌ ಮಾಡಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಸ್ಪಿನ್ನರ್‌ಗಳ ಅದ್ಭುತ ಆಟ
ಹೈದರಾಬಾದ್‌ ವಿರುದ್ಧ ಸೂಪರ್‌ ಓವರ್‌ ಗೆಲುವನ್ನು ತಂಡದ ನಾಯಕ ರೋಹಿತ್‌ ಶರ್ಮ ಸ್ಪಿನ್ನರ್‌ಗಳಾದ ರಾಹುಲ್‌ ಚಹರ್‌ ಮತ್ತು ಕೃಣಾಲ್‌ ಪಾಂಡ್ಯ ಅವರಿಗೆ ಅರ್ಪಿಸಿದ್ದಾರೆ.
“ಎಂಟು ಓವರ್‌ಗಳ ಸ್ಪಿನ್‌ನಲ್ಲಿ ಪಂದ್ಯದ ಗತಿ ಬದಲಾಯಿತು. ಅವರು ಚೆನ್ನಾಗಿ ಬೌಲಿಂಗ್‌ ಮಾಡಿದರು ಮತ್ತು ಆ ಹಂತದಲ್ಲಿ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವುದು ಅತೀ ಮುಖ್ಯವಾಗಿತ್ತು. ಸ್ಪಿನ್ನರ್‌ಗಳು ಸನ್ನಿವೇಶವನ್ನು ಸರಿಯಾಗಿ ಅರ್ಥ ಮಾಡಿಕೊಂಡರು ಎಂದರು.

ಎಕ್ಸ್‌ಟ್ರಾ ಇನ್ನಿಂಗ್ಸ್‌
– ಮುಂಬೈ ಇಂಡಿಯನ್ಸ್‌-ಸನ್‌ರೈಸರ್ ಹೈದರಾಬಾದ್‌ ನಡುವಿನ ಪಂದ್ಯ ವಾಂಖೇಡೆ ಸ್ಟೇಡಿಯಂನಲ್ಲಿ ದಾಖಲಾದ ಮೊದಲ ಟೈ ಪಂದ್ಯವಾಗಿದೆ. ಇಲ್ಲಿಯವರೆಗೆ 72 ಪಂದ್ಯಗಳ ಅತಿಥ್ಯವಹಿಸಿರುವ ವಾಂಖೇಡೆಯಲ್ಲಿ ಇಲ್ಲಿಯವರೆಗೆ ಒಂದೇ ಒಂದು ಪಂದ್ಯ ಟೈ ಆಗಿರಲಿಲ್ಲ. 72 ಪಂದ್ಯಗಳಲ್ಲಿ ತವರಿನ ತಂಡ ಮುಂಬೈ ಇಂಡಿಯನ್ಸ್‌ 66 ಪಂದ್ಯಗಳನ್ನಾಡಿದೆ.
– ವಾಂಖೇಡೆಯಲ್ಲಿ 7 ಪಂದ್ಯಗಳನ್ನಾಡಿರುವ ಹೈದರಾಬಾದ್‌ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಮುಂಬೈ ವಿರುದ್ಧ 2013, 2016 ಮತ್ತು 2017ರ ಆವೃತ್ತಿಯಲ್ಲಿ ಸತತವಾಗಿ ಸೋಲನುಭವಿಸಿತ್ತು. 2018ರ ಆವೃತ್ತಿಯಲ್ಲಿ ಮುಂಬೈಗೆ ಹೈದರಾಬಾದ್‌ ಸೋಲುಣಿಸಿತ್ತು. ಪ್ಲೇ ಆಫ್ ಹಂತದಲ್ಲಿ ಚೆನ್ನೈ ವಿರುದ್ಧ 2 ಬಾರಿ ಸೋತಿದೆ.
– 58 ಎಸೆತಗಳಲ್ಲಿ ಅಜೇಯ 69 ರನ್‌ ಹೊಡೆದ ಕ್ವಿಂಟನ್‌ ಡಿ ಕಾಕ್‌ ಅವರ ಸ್ಟ್ರೈಕ್‌ ರೇಟ್‌ 118.97. ಇದು ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಪರ 60 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳ ಇನ್ನಿಂಗ್ಸ್‌ನಲ್ಲಿ 4ನೇ ಅತೀ ಕಡಿಮೆ ಸ್ಟ್ರೈಕ್‌ ರೇಟ್‌ ಆಗಿದೆ. 2012ರಲ್ಲಿ ಕೋಲ್ಕತಾದಲ್ಲಿ ನಡೆದ ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಹರ್ಷಲ್‌ ಗಿಬ್ಸ್ 58 ಎಸೆತಗಳಲ್ಲಿ ಅಜೇಯ 66 ರನ್‌ ಗಳಿಸಿದಾಗ ಅವರ ಸ್ಟ್ರೈಕ್‌ ರೇಟ್‌ 113.79 ಆಗಿತ್ತು.
– ಖಲೀಲ್‌ ಅಹ್ಮದ್‌ ಅವರ 42ಕ್ಕೆ 3 ವಿಕೆಟ್‌ ಐಪಿಎಲ್‌ನಲ್ಲಿ ಸನ್‌ರೈಸರ್ ಪರ 3ನೇ ಅತ್ಯಂತ ದುಬಾರಿ ಬೌಲಿಂಗ್‌ ಆಗಿದೆ. ತಿಸರ ಪೆರೇರ 2013ರಲ್ಲಿ ಚೆನ್ನೈ ವಿರುದ್ಧ 45 ರನ್‌ ನೀಡಿ 3 ವಿಕೆಟ್‌ ಪಡೆದಿದ್ದರು. 2015ರಲ್ಲಿ ಭುವನೇಶ್ವರ್‌ ಕುಮಾರ್‌ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 44 ರನ್‌ ನೀಡಿ 3 ವಿಕೆಟ್‌ ಹಾಗೂ 2017ರಲ್ಲಿ ಆಶೀಶ್‌ ನೆಹ್ರಾ 42 ರನ್‌ ನೀಡಿ ಪಂಜಾಬ್‌ನ 3 ವಿಕೆಟ್‌ ಕಿತ್ತಿದ್ದರು.
– ಮೊಹಮ್ಮದ್‌ ನಬಿ ಪಂದ್ಯವೊಂದರಲ್ಲಿ 30 ಪ್ಲಸ್‌ ರನ್‌, ಒಂದು ವಿಕೆಟ್‌ ಮತ್ತು 2 ಕ್ಯಾಚ್‌ ಹಿಡಿದ ಹೈದರಾಬಾದ್‌ ತಂಡದ 2ನೇ ಮತ್ತು ಐಪಿಎಲ್‌ನಲ್ಲಿ 12ನೇ ಆಟಗಾರ. ರಶೀದ್‌ ಖಾನ್‌ 2018ರಲ್ಲಿ ಕೆಕೆಆರ್‌ ವಿರುದ್ಧದ ಕ್ವಾಲಿಫ‌ಯರ್‌ ಪಂದ್ಯದಲ್ಲಿ ಹೈದರಾಬಾದ್‌ ಪರ ಈ ಸಾಧನೆ ಮಾಡಿದ್ದರು.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.