
ಅವಕಾಶಕ್ಕಿಂತ ತಂಡದ ಗೆಲುವು ಮುಖ್ಯ: ತಾಹಿರ್
Team Udayavani, Oct 15, 2020, 7:05 PM IST

ಶಾರ್ಜಾ: ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಳೆದ ಆವೃತ್ತಿಯಲ್ಲಿ ಯಶಸ್ವಿಯಾಗಿದ್ದ ಇಮ್ರಾನ್ ತಾಹಿರ್ ಪ್ರಸಕ್ತ ಆವೃತ್ತಿಯಲ್ಲಿ ಇನ್ನೂ ಆಡುವ ಬಳಗದಲ್ಲಿ ಕಾಣಿಸಿಕೊಂಡಿಲ್ಲ. ಆದರೆ ಪಂದ್ಯದ ವೇಳೆ ನೀರಿನ ಬಾಟಲ್ಗಳೊಂದಿಗೆ ಅಂಗಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ದ. ಆಫ್ರಿಕಾದ ಹಿರಿಯ ಲೆಗ್ ಸ್ಪಿನ್ನರ್ 2019ರ ಐಪಿಎಲ್ ಕೂಟದಲ್ಲಿ 26 ವಿಕೆಟ್ ಕಬಳಿಸಿ ಪರ್ಪಲ್ ಕ್ಯಾಪ್ ಗೆದ್ದಿದ್ದರು. ಆದರೆ ಈ ಬಾರಿಯ ಟೂರ್ನಿಯಲ್ಲಿ ಅವರು ಇನ್ನೂ ಒಂದೂ ಪಂದ್ಯವಾಡಿಲ್ಲ. ಬದಲಿಗೆ ಸಹ ಆಟಗಾರರಿಗೆ ನೀರನ್ನು ನೀಡುವ ಕಾಯಕದಲ್ಲಿ ತೊಡಗಿದ್ದಾರೆ. ಇದರಿಂದ ನನಗೆ ಯಾವುದೇ ಮುಜುಗರ ಅಥವಾ ಅವಮಾನವಿಲ್ಲ ಎಂಬುದನ್ನು ತಾಹಿರ್ ಹೇಳಿಕೊಂಡಿದ್ದಾರೆ.
ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಕುರಿತು ಬರೆದಿರುವ ಅವರು “ಈ ಹಿಂದೆ ನಾನು ಅಂಗಳದಲ್ಲಿ ಆಡುವಾಗ ನನಗೆ ಅದೆಷ್ಟೋ ಆಟಗಾರರು ನೀರನ್ನು ತಂದುಕೊಟ್ಟಿದ್ದಾರೆ. ಇದೀಗ ಅರ್ಹ ಆಟಗಾರರು ಅಂಗಳದಲ್ಲಿದ್ದಾರೆ. ಅವರಿಗೆ ನೀರು ನೀಡಿ ಬೆಂಬಲಿಸುವುದು ನನ್ನ ಕರ್ತವ್ಯ. ನಾನು ಆಡುವುದು ಅಥವಾ ಆಡದೇ ಇರುವುದು ಮುಖ್ಯವಲ್ಲ, ಪಂದ್ಯ ಗೆಲ್ಲುವುದು ಮುಖ್ಯ. ಆಡುವ ಅವಕಾಶ ಪಡೆದರೆ ಖಂಡಿತಾ ನನ್ನ ಕಡೆಯಿಂದ ಉತ್ತಮ ಪ್ರದರ್ಶನ ತಂಡಕ್ಕೆ ನೀಡುತ್ತೇನೆ ನನಗೆ ತಂಡ ಮುಖ್ಯ’ ಎಂದು ತಾಹಿರ್ ಹೇಳಿದ್ದಾರೆ.
ತಾಹಿರ್ ಅವರ ಈ ಟ್ವೀಟ್ಗೆ ಪ್ರತಿಕ್ರಿಯಿಸಿದ ಕ್ರಿಕೆಟ್ ಅಭಿಮಾನಿಗಳು ಸಿಎಸ್ಕೆ ಹಿರಿಯ ಸ್ಪಿನ್ನರ್ ನಿಜವಾದ ಕ್ರೀಡಾಪಟು ಎಂದು ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!

WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.