ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!


Team Udayavani, Sep 24, 2020, 11:02 PM IST

ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!

ದುಬಾಯಿ: ಇಂದಿನ IPL ಲೀಗ್ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ RCB ತಂಡವನ್ನು ಧೂಳೀಪಠ ಮಾಡಿದ್ದಾರೆ.

ಅಜೇಯ ಶತಕದಾಟದ ಮೂಲಕ ಮಿಂಚಿದ್ದ ರಾಹುಲ್ ತಮ್ಮ ತಂಡ 206 ರನ್ ಗಳ ಬೃಹತ್ ಮೊತ್ತ ಕಲೆಹಾಕುವಲ್ಲಿ ಪ್ರಧಾನ ಪಾತ್ರ ವಹಿಸಿದ್ದರು.

ಆದರೆ ಈ ಬೃಹತ್ ಮೊತ್ತವನ್ನು ಬೆನ್ನಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾದ RCB ದಾಂಢಿಗರು ಯಾವುದೇ ಹಂತದಲ್ಲಿ ಪ್ರತಿರೋಧ ತೋರದೆ ಕಿಂಗ್ಸ್ ಪಂಜಾಬ್ ಎದುರು 97 ರನ್ ಗಳ ಘೋರ ಪರಾಜಯ ಅನುಭವಿಸಿದರು.

ಪಂಜಾಬ್ ಬೌಲರ್ ಗಳ ಶಿಸ್ತಿನ ಬೌಲಿಂಗ್ ಗೆ ಮಕಾಡೆ ಮಲಗಿದ RCB ಬ್ಯಾಟಿಂಗ್ ಪಡೆ 17 ಓವರ್ ಗಳಲ್ಲಿ 109 ರನ್ ಗಳಿಗೆ ಆಲೌಟ್ ಆಗುವ ಮೂಲಕ 97 ರನ್ ಗಳ ಸೋಲು ಅನುಭವಿಸಿತು.

ಇದನ್ನೂ ಓದಿ: ಕನ್ನಡಿಗ ರಾಹುಲ್ ಅಜೇಯ ಸ್ಪೋಟಕ ಸೆಂಚುರಿ ; RCB ಗೆಲುವಿಗೆ 207 ಟಾರ್ಗೆಟ್

ರಾಹುಲ್ ಒಬ್ಬರೇ ಬಾರಿಸಿದಷ್ಟು ರನ್ RCB ತಂಡ ಬಾರಿಸಲಾಗದ್ದು ಚಾಲೆಂಜರ್ಸ್ ಬ್ಯಾಟಿಂಗ್ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿತ್ತು.

ಬೃಹತ್ ಮೊತ್ತವನ್ನು ಬೆನ್ನಟ್ಟಲಾರಂಭಿಸಿದ RCB ಬ್ಯಾಟ್ಸ್ ಮನ್ ಗಳು ಯಾವುದೇ ಹಂತದಲ್ಲೂ ಪ್ರತಿರೋಧವನ್ನು ತೋರಲೇ ಇಲ್ಲ. ಕಳೆದ ಪಂದ್ಯದ ಹೀರೋ ದೇವದತ್ತ ಪಡಿಕ್ಕಲ್ ಇಂದು ಎರಡೇ ಎಸೆತ ಎದುರಿಸಿ ಔಟಾದರು. ಅವರ ಕೊಡುಗೆ 01 ರನ್. ಬಳಿಕ ಜೋಸ್ ಫಿಲಿಪ್ (0), ವಿರಾಟ್ ಕೊಹ್ಲಿ (01) ಬೆನ್ನು ಬೆನ್ನಿಗೇ ಔಟಾದಾಗ RCB ಮೊತ್ತ 4 ರನ್!

ಈ ಹಂತದಲ್ಲಿ ಜೊತೆಯಾದ ಅರೋನ್ ಫಿಂಚ್ (20) ಹಾಗೂ ಸ್ಪೆಷಲಿಸ್ಟ್ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ (28) ತಂಡಕ್ಕೆ ಬಲ ತುಂಬುವ ಪ್ರಯತ್ನ ಮಾಡಿದರು. ಇವರಿಬ್ಬರ ಜೊತೆಯಾಟದಲ್ಲಿ 50 ರನ್ ಹರಿದು ಬಂತು.


ಆದರೆ, 8ನೇ ಓವರ್ ನಲ್ಲಿ ಫಿಂಚ್ ಔಟಾಗುವುದರೊಂದಿಗೆ RCB ರನ್ ಚೇಸಿಂಗ್ ಗೆ ಮತ್ತೆ ಗ್ರಹಣ ಹಿಡಿಯಿತು. ನಾಲ್ಕು ರನ್ ಗಳ ಅಂತರದಲ್ಲಿ ಎಬಿಡಿ ಸಹ ಔಟಾದರು. ಬಳಿಕ ಮಧ್ಯಮ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್ (30) ಹಾಗೂ ಶಿವಂ ದುಬೆ (12) ಸ್ವಲ್ಪ ಪ್ರತಿರೋ‍ಧ ತೋರಿದರಾದರೂ ಬೆಟ್ಟದಷ್ಟಿದ್ದ ಗುರಿಯ ಮುಂದೆ ಇದು ಸಾಲದಾಯಿತು.

ಅಂತಿಮವಾಗಿ RCB 17 ಓವರ್ ಗಳಲ್ಲಿ 109 ರನ್ ಗಳನ್ನು ಗಳಿಸಲಷ್ಟೇ ಶಕ್ತವಾಗಿ 97 ರನ್ ಗಳಿಂದ ಸೋಲೊಪ್ಪಿಕೊಂಡಿತು.

ಕಿಂಗ್ಸ್ ಪಂಜಾಬ್ ಪರ ರವಿ ಬಿಷ್ಣೊಯ್ ಮತ್ತು ಮುರುಗನ್ ಅಶ್ವಿನ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಸೆಲ್ಯೂಟ್ ಬೌಲರ್ ಶೆಲ್ಡನ್ ಕಾಟ್ರೆಲ್ 2 ವಿಕೆಟ್ ಪಡೆದರು. ಮಹಮ್ಮದ್ ಶಮಿ ಮತ್ತು ಮ್ಯಾಕ್ಸ್ ವೆಲ್ ತಲಾ 1 ವಿಕೆಟ್ ಉರುಳಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.