ಪ್ಲೇ ಆಫ್‌ ಸನಿಹ ಕೆಕೆಆರ್‌


Team Udayavani, Oct 7, 2021, 11:16 PM IST

ಪ್ಲೇ ಆಫ್‌ ಸನಿಹ ಕೆಕೆಆರ್‌

ಶಾರ್ಜಾ: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ತನ್ನ ಅಂತಿಮ ಲೀಗ್‌ ಪಂದ್ಯದಲ್ಲಿ 86 ರನ್ನುಗಳ ಭರ್ಜರಿ ಗೆಲುವು ಸಾಧಿಸಿದ ಕೆಕೆಆರ್‌ ಐಪಿಎಲ್‌ ಪ್ಲೇ ಆಫ್‌ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಈ ಫಲಿತಾಂಶದೊಂದಿಗೆ ರಾಜಸ್ಥಾನ್‌ ಮತ್ತು ದಿನದ ಮೊದಲ ಪಂದ್ಯವನ್ನು ಜಯಿಸಿದ್ದ ಪಂಜಾಬ್‌ ತಂಡಗಳೆರಡೂ ಕೂಟದಿಂದ ಹೊರಬಿದ್ದವು. ಇನ್ನೊಂದು ತಂಡವಾದ ಮುಂಬೈ ಹಾದಿ ಇನ್ನಷ್ಟು ದುರ್ಗಮಗೊಂಡಿದೆ.

ಕೆಕೆಆರ್‌ 4 ವಿಕೆಟಿಗೆ 171 ರನ್‌ ಪೇರಿಸಿ ಸವಾಲೊಡ್ಡಿದರೆ, ರಾಜಸ್ಥಾನ್‌ 16.1 ಓವರ್‌ಗಳಲ್ಲಿ 85 ರನ್ನಿಗೆ ಆಲೌಟ್‌ ಆಯಿತು.

ಆರಂಭಕಾರ ಶುಭಮನ್‌ ಗಿಲ್‌ ಅವರ ಅರ್ಧ ಶತಕ ಕೆಕೆಆರ್‌ ಸರದಿಯ ಆಕರ್ಷಣೆ ಎನಿಸಿತು. ಬೌಲಿಂಗ್‌ನಲ್ಲಿ ಶಿವಂ ಮಾವಿ 21ಕ್ಕೆ 4, ಲಾಕಿ ಫರ್ಗ್ಯುಸನ್‌ 18ಕ್ಕೆ 3 ವಿಕೆಟ್‌ ಕಿತ್ತು ಸ್ಯಾಮ್ಸನ್‌ ಬಳಗಕ್ಕೆ ಬಲವಾದ ಪ್ರಹಾರವಿಕ್ಕಿದರು.

ಬಿಗ್‌ ಹಿಟ್ಟರ್‌ಗಳಾದ ಅಯ್ಯರ್‌-ಗಿಲ್‌ ಕ್ರೀಸಿನಲ್ಲಿದ್ದರೂ ಪವರ್‌ ಪ್ಲೇಯಲ್ಲಿ ಕೆಕೆಆರ್‌ಗೆ ಗಳಿಸಲು ಸಾಧ್ಯವಾದದ್ದು 34 ರನ್‌ ಮಾತ್ರ. 10 ಓವರ್‌ ತನಕವೂ ಇವರಿಬ್ಬರೇ ಜತೆಗೂಡಿ ಸಾಗಿದರು. ಅರ್ಧ ಹಾದಿ ಕ್ರಮಿಸುವಾಗ ಸ್ಕೋರ್‌ 69ಕ್ಕೆ ಏರಿತು. 11ನೇ ಓವರ್‌ನಲ್ಲಿ ದಾಳಿಗಿಳಿದ ತೇವಟಿಯಾ 5ನೇ ಎಸೆತದಲ್ಲೇ ಅಯ್ಯರ್‌ ಅವರನ್ನು ಬೌಲ್ಡ್‌ ಮಾಡಿ ರಾಜಸ್ಥಾನಕ್ಕೆ ಮೊದಲ ಯಶಸ್ಸು ತಂದಿತ್ತರು. ಅಯ್ಯರ್‌ ಗಳಿಕೆ 35 ಎಸೆತಗಳಿಂದ 38 ರನ್‌. ಇದರಲ್ಲಿ 3 ಫೋರ್‌, 2 ಸಿಕ್ಸರ್‌ ಒಳಗೊಂಡಿತ್ತು.

ಅನಂತರದ ಕ್ರೀಸ್‌ ಇಳಿದ ರಾಣಾ ಆರಂಭದಿಂದಲೇ ಪ್ರತಾಪ ತೋರಿ ಫಿಲಿಪ್ಸ್‌ ಓವರ್‌ನಲ್ಲಿ ಬೌಂಡರಿ, ಸಿಕ್ಸರ್‌ ಬಾರಿಸಿದರು. ಆದರೆ ಫಿಲಿಪ್ಸ್‌ ಅದೇ ಓವರ್‌ನಲ್ಲಿ ಸೇಡು ತೀರಿಸಿಕೊಂಡರು. ಕೇವಲ 5 ಎಸೆತ ಎದುರಿಸಿದ ರಾಣಾ ಆಟ 12 ರನ್ನಿಗೆ ಮುಗಿಯಿತು.

ಇನ್ನೊಂದು ಬದಿಯಲ್ಲಿ ಕ್ರೀಸ್‌ ಆಕ್ರಮಿಸಿಕೊಂಡಿದ್ದ ಗಿಲ್‌ ನಿಧಾನವಾಗಿ ಬ್ಯಾಟಿಂಗಿಗೆ ಕುದುರಿಕೊಳ್ಳುತ್ತ ಹೋದರು. 40 ಎಸೆತಗಳಲ್ಲಿ ಫಿಫ್ಟಿ ಪೂರ್ತಿಗೊಂಡಿತು. ಡೆತ್‌ ಓವರ್‌ ಆರಂಭದಲ್ಲೇ ಮಾರಿಸ್‌ ದೊಡ್ಡ ಬೇಟೆಯಾಡಿದರು. ಗಿಲ್‌ ಆಟ 56ಕ್ಕೆ ಕೊನೆಗೊಂಡಿತು (44 ಎಸೆತ, 4 ಫೋರ್‌, 2 ಸಿಕ್ಸರ್‌). ತ್ರಿಪಾಠಿ 21 ರನ್‌ ಮಾಡಿದರು. ಮಾರ್ಗನ್‌ ಕೊನೆಯ 3 ಎಸೆತಗಳಲ್ಲಿ 11 ರನ್‌ ಬಾರಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.