IPL 2023: ಪ್ಲೇ ಆಫ್ ಪೈಪೋಟಿಯಲ್ಲಿ ಮುಂಬೈ, ಲಕ್ನೋ


Team Udayavani, May 16, 2023, 8:20 AM IST

IPL 2023: ಪ್ಲೇ ಆಫ್ ಪೈಪೋಟಿಯಲ್ಲಿ ಮುಂಬೈ, ಲಕ್ನೋ

ಲಕ್ನೋ: ಪ್ಲೇ ಆಫ್ ಹೊಸ್ತಿಲಲ್ಲಿ ನಿಂತಿರುವ ಮುಂಬೈ ಇಂಡಿಯನ್ಸ್‌ ಮತ್ತು ಲಕ್ನೋ ಸೂಪರ್‌ ಜೈಂಟ್ಸ್‌ ತಂಡಗಳು ಮಂಗಳವಾರ ರಾತ್ರಿ ನಿರ್ಣಾಯಕ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ಗೆದ್ದವರಿಗೆ ಮುಂದಿನ ಹಂತದ ಟಿಕೆಟ್‌ ಬಹು ತೇಕ ಖಾತ್ರಿಯಾಗಲಿರುವುದು ಈ ಪಂದ್ಯದ ವೈಶಿಷ್ಟé. ಸದ್ಯ 4 ಪ್ಲೇ ಆಫ್ ಸ್ಥಾನಗಳಿಗಾಗಿ 8 ತಂಡಗಳ ನಡುವೆ ಸ್ಪರ್ಧೆ ಇದೆ.

ಎರಡೂ ತಂಡಗಳು 12 ಪಂದ್ಯ ಗಳನ್ನು ಆಡಿ ಮುಗಿಸಿವೆ. ಮುಂಬೈ 14 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದರೆ, ಲಕ್ನೋ 13 ಅಂಕಗಳೊಂದಿಗೆ 4ನೇ ಸ್ಥಾನಿಯಾಗಿದೆ. ದಾಖಲೆ ವಿಚಾರಕ್ಕೆ ಬಂದರೆ ಲಕ್ನೋ ತಂಡದ್ದು ನಿಚ್ಚಳ ಮೇಲುಗೈ. ಅದು ಮುಂಬೈ ವಿರುದ್ಧ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿದೆ. ಇದು ಪ್ರಸಕ್ತ ಋತುವಿನಲ್ಲಿ ಇತ್ತಂಡಗಳ ಮೊದಲ ಮುಖಾಮುಖಿ.

ಲಕ್ನೋ ಸ್ಟೇಡಿಯಂ ಲೋ ಸ್ಕೋರಿಂಗ್‌ಗೆ ಸಾಕ್ಷಿಯಾಗುತ್ತ ಬಂದಿದೆ. ಸ್ಪಿನ್ನರ್‌ಗಳು ಮೇಲುಗೈ ಸಾಧಿಸುತ್ತಿ ದ್ದಾರೆ. ಹೀಗಾಗಿ ಪೀಯೂಷ್‌ ಚಾವ್ಲಾ, ರವಿ ಬಿಷ್ಣೋಯಿ, ಕೃಣಾಲ್‌ ಪಾಂಡ್ಯ, ಅಮಿತ್‌ ಮಿಶ್ರಾ ಮೊದಲಾದವರ ಪಾತ್ರ ನಿರ್ಣಾಯಕವಾಗಲಿದೆ.

ಮುಂಬೈ ಬ್ಯಾಟಿಂಗ್‌ ಸರ ದಿಯ ಹೆಚ್ಚುಗಾರಿಕೆಯೆಂದರೆ ಸೂರ್ಯ ಕುಮಾರ್‌ ಯಾದವ್‌ ಸರಿಯಾದ ಹೊತ್ತಿಗೆ ಫಾರ್ಮ್ ಕಂಡುಕೊಂಡದ್ದು. ಗುಜರಾತ್‌ ವಿರುದ್ಧ ಶತಕ ಬಾರಿಸಿ ಅಪಾಯಕಾರಿಯಾಗಿ ಗೋಚರಿಸಿ ದ್ದಾರೆ. ಇಶಾನ್‌ ಕಿಶನ್‌, ತಿಲಕ್‌ ವರ್ಮ ಸ್ಥಾನವನ್ನು ಯಶಸ್ವಿಯಾಗಿ ತುಂಬಿದ ನೇಹಲ್‌ ವಧೇರ, ಟಿಮ್‌ ಡೇವಿಡ್‌, ಕ್ಯಾಮರಾನ್‌ ಗ್ರೀನ್‌, ವಿಷ್ಣು ವಿನೋದ್‌ ಅವರಿಂದ ಮುಂಬೈ ಬ್ಯಾಟಿಂಗ್‌ ಸರದಿ ಬಲಾಡ್ಯವಾಗಿ ಗೋಚರಿಸುತ್ತಿದೆ. ಆದರೆ ನಾಯಕ ರೋಹಿತ್‌ ಶರ್ಮ ಫಾರ್ಮ್ ನದೇ ಚಿಂತೆಯ ಸಂಗತಿ. ಗುಜರಾತ್‌ ಎದುರಿನ ಕಳೆದ ಪಂದ್ಯದಲ್ಲಿ ಸಿಡಿದು ನಿಂತರೂ ಇನ್ನಿಂಗ್ಸ್‌ ಬೆಳೆಸುವಲ್ಲಿ ವಿಫ‌ಲರಾಗಿದ್ದರು. ಮುಂಬೈ ಡೆತ್‌ ಓವರ್‌ ಬೌಲಿಂಗ್‌ ಸಮಸ್ಯೆ ಎದುರಿಸುತ್ತಿದೆ. ಆರ್ಚರ್‌ ಬದಲಿಗೆ ಬಂದ ವೇಗಿ ಕ್ರಿಸ್‌ ಜೋರ್ಡನ್‌ ಕೂಡ ಸಾಕಷ್ಟು ರನ್‌ ಬಿಟ್ಟುಕೊಟ್ಟಿದ್ದಾರೆ.

ಡಿ ಕಾಕ್‌ ಆಸರೆ
ನಾಯಕ ಕೆ.ಎಲ್‌. ರಾಹುಲ್‌ ಅನುಪಸ್ಥಿತಿಯಲ್ಲಿ ಆಡುತ್ತಿರುವ ಲಕ್ನೋ ಈಗ ಕ್ವಿಂಟನ್‌ ಡಿ ಕಾಕ್‌ ಅವರನ್ನು ನೆಚ್ಚಿಕೊಂಡಿದೆ. ವನ್‌ಡೌನ್‌ನಲ್ಲಿ ಆಡಲಿಳಿದ ಸೌರಾಷ್ಟ್ರದ ಪ್ರೇರಕ್‌ ಮಂಕಡ್‌ ಕಳೆದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಕೈಲ್‌ ಮೇಯರ್, ನಿಕೋಲಸ್‌ ಪೂರಣ್‌ ಅವರನ್ನು ಪೂರ್ತಿ ನಂಬಿ ಕೊಳ್ಳುವ ಹಾಗಿಲ್ಲ. ಸಿಡಿದರೆ ಪಂದ್ಯದ ಗತಿಯನ್ನೇ ಬದಲಿಸಬಲ್ಲರು. ಇಲ್ಲ ವಾದರೆ ಬೇಗನೇ ಪೆವಿಲಿಯನ್‌ ಸೇರಿಕೊಂಡು ಉಳಿದವರ ಮೇಲೆ ಒತ್ತಡ ಹೇರುತ್ತಾರೆ. ಮಾರ್ಕಸ್‌ ಸ್ಟೋಯಿನಿಸ್‌ ಕೂಡ ಇದೇ ಸಾಲಿಗೆ ಸೇರುವ ಆಟಗಾರ. ಈ ನಿರ್ಣಾಯಕ ಮುಖಾಮುಖಿ ಲಕ್ನೋದಲ್ಲಿ ನಡೆಯುತ್ತಿರುವುದ ರಿಂದ ಕೃಣಾಲ್‌ ಪಾಂಡ್ಯ ಬಳಗಕ್ಕೆ ಲಾಭವಾದೀತು ಎಂಬ ನಿರೀಕ್ಷೆ ಇರಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.