![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 31, 2024, 6:27 PM IST
ಮಹಾರಾಷ್ಟ್ರ: ಐಪಿಎಲ್ ನೋಡುವ ಸಂದರ್ಭದಲ್ಲಿ ಅಭಿಮಾನಿಗಳ ನಡುವೆ ಮಾರಾಮಾರಿ ಉಂಟಾಗಿ ಓರ್ವ ವ್ಯಕ್ತಿ ಜೀವ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದ ಹನ್ಮಂತವಾಡಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.
ಬುಧವಾರ (ಮಾ.27 ರಂದು) ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಾಟದ ವೇಳೆ ಈ ಘಟನೆ ನಡೆದಿದೆ.
ಬಂಡುಪಂತ್ ತಿಬಿಲೆ, ಬಲವಂತ್ ಝಂಜಗೆ ಮತ್ತು ಸಾಗರ್ ಝಂಜಗೆ ಅವರು ಹೈದರಾಬಾದ್ ಹಾಗೂ ಮುಂಬೈ ನಡುವಿನ ಪಂದ್ಯವನ್ನು ವೀಕ್ಷಿಸುತ್ತಿದ್ದರು. ಬಂಡುಪಂತ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಯಾಗಿದ್ದು, ಬಲವಂತ್ ಝಂಜಗೆ ಮತ್ತು ಸಾಗರ್ ಝಂಜಗೆ ಅವರು ಮುಂಬೈ ಅಭಿಮಾನಿಯಾಗಿದ್ದಾರೆ.
ಪಂದ್ಯ ನಡೆಯುತ್ತಿದ್ದಂತೆ ಮುಂಬೈ ಆಟಗಾರ ರೋಹಿತ್ ಶರ್ಮಾ ಔಟಾಗಿದ್ದಾರೆ. ಈ ವೇಳೆ ಚೆನ್ನೈ ತಂಡದ ಅಭಿಮಾನಿ ಬಂಡುಪಂತ್ ಇದನ್ನು ಸಂಭ್ರಮಿಸಿದ್ದಾನೆ. ಆದರೆ ಇದನ್ನು ನೋಡಿದ ಬಲವಂತ್ ಹಾಗೂ ಸಾಗರ್ ಆಕ್ರೋಶಗೊಂಡು ಬಂಡುಪಂತ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಎರಡು ಗುಂಪುಗಳ ನಡುವೆ ಜಗಳ ಶುರುವಾಗಿದೆ.
ಬಂಡುಪಂತ್ ಮೇಲೆ ಸಾಗರ್ ಹಾಗೂ ಬಲವಂತ್ ಹಲಗೆ ಮತ್ತು ಕೋಲಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಬಂಡುಪಂತ್ ಗೆ ಮಾರಣಾಂತಿಕ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಬಂಡುಪಂತ್ ಮೃತಪಟ್ಟಿದ್ದಾರೆ.
ಆರೋಪಿಗಳಾದ ಸಾಗರ್ ಬಲವಂತ್ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ನ್ಯಾಯಾಲಯವು ಅವರ ಬಂಧನಕ್ಕೆ ಆದೇಶಿಸಿದೆ.
ಮುಂಬೈ ವಿರುದ್ಧ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ 3 ವಿಕೆಟ್ ಕಳೆದುಕೊಂಡು 277 ರನ್ ಪೇರಿಸಿತ್ತು. ಉತ್ತರವಾಗಿ ಮುಂಬೈ 5 ವಿಕೆಟ್ ನಷ್ಟದಲ್ಲಿ 246 ರನ್ ಪೇರಿಸಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.