![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 5, 2024, 5:40 PM IST
ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಬೌಲರ್ ಸ್ನಾಯು ಸೆಳೆತಕ್ಕೆ ಒಳಗಾಗಿ ಟೂರ್ನಿಯ ಉಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಆ ಮೂಲಕ ಪ್ಲೇ ಆಫ್ ರೇಸ್ ನಲ್ಲಿರುವ ಗಾಯಕ್ವಾಡ್ ಬಳಗಕ್ಕೆ ಆಘಾತವಾಗಿದೆ.
ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸಿಎಸ್ ಕೆ ತಂಡದ ಡೆತ್ ಬೌಲರ್ ಮತೀಶ ಪತಿರಾಣ ಅವರಿಗೆ ಸ್ನಾಯು ಸೆಳೆತ ಉಂಟಾಗಿತ್ತು. ಇದೇ ಕಾರಣದಿಂದ ಭಾನುವಾರದ (ಮೇ. ರಂದು) ಪಂಜಾಬ್ ವಿರುದ್ಧ ಪಂದ್ಯದಲ್ಲಿ ಪತಿರಾಣ ಸ್ಥಾನ ಪಡೆದಿಲ್ಲ.
“ಮತೀಶ ಪತಿರಾಣ ಅವರು ಸ್ನಾಯು ಸೆಳೆತದಿಂದ ಬಳಲುತ್ತಿದ್ದಾರೆ. ಅವರು ಚೇತರಿಸಿಕೊಳ್ಳಲು ಶ್ರೀಲಂಕಾಕ್ಕೆ ಮರಳುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಪತಿರಾಣ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತದೆ” ಎಂದು ಸಿಎಸ್ ಕೆ ಹೇಳಿದೆ.
ಡೆತ್ ಬೌಲರ್ ಆಗಿ ತಂಡಕ್ಕೆ ಆಸರೆಯಾಗಿದ್ದ ಪತಿರಾಣ, ಈ ಸೀಸನ್ ನಲ್ಲಿ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದರು. ಆಡಿದ 6 ಪಂದ್ಯದಲ್ಲಿ 13 ವಿಕೆಟ್ ಪಡೆದಿದ್ದರು.
ಪತಿರಾಣ ಮುಂದಿನ ದಿನಗಳಲ್ಲಿ ತಂಡಕ್ಕೆ ಮರಳುತ್ತಾರಾ ಇಲ್ವೋ ಎನ್ನುವುದರ ಬಗ್ಗೆ ಸಿಎಸ್ ಕೆ ಇದುವರೆಗೆ ಮಾಹಿತಿ ನೀಡಿಲ್ಲ.
ಇತ್ತ ಬಾಂಗ್ಲಾದ ವೇಗಿ ಮುಸ್ತಾಫಿಜುರ್ ರೆಹಮಾನ್ ಕೂಡ ತವರಿಗೆ ಮರಳಿದ್ದು, ದೀಪಕ್ ಚಹಾರ್ ಕೂಡ ಸ್ನಾಯು ಸೆಳೆತದಿಂದ ತಂಡದಿಂದ ಹೊರಗೆ ಉಳಿದಿದ್ದಾರೆ. ಇದು ಪ್ಲೇ ಆಫ್ ನಲ್ಲಿರುವ ಚೆನ್ನೈಗೆ ಹೊಡೆತವಾಗಿ ಪರಿಣಾಮಿಸಿದೆ.
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
You seem to have an Ad Blocker on.
To continue reading, please turn it off or whitelist Udayavani.