ಐಪಿಎಲ್ ಲೀಗ್ ಹಂತಕ್ಕೆ ಹೊಸ ನಿಯಮ: 10 ತಂಡಗಳನ್ನು ಎರಡು ಗುಂಪು ಮಾಡಿದ ಬಿಸಿಸಿಐ


Team Udayavani, Feb 25, 2022, 4:23 PM IST

ಐಪಿಎಲ್ ಲೀಗ್ ಹಂತಕ್ಕೆ ಹೊಸ ನಿಯಮ: 10 ತಂಡಗಳನ್ನು ಎರಡು ಗುಂಪು ಮಾಡಿದ ಬಿಸಿಸಿಐ

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಸೀಸನ್ ಮಾರ್ಚ್ 26 ರಂದು ನಡೆಯಲಿದೆ ಮತ್ತು ಮೇ 29 ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಘೋಷಿಸಿದೆ.

2022ರ ಐಪಿಎಲ್ 10 ತಂಡಗಳ ಸೀಸನ್ ಆಗಿರಲಿದ್ದು, 74 ಪಂದ್ಯಗಳು ನಡೆಯಲಿದೆ. ಮುಂಬೈ ಮತ್ತು ಪುಣೆಯ ನಾಲ್ಕು ಸ್ಥಳಗಳಲ್ಲಿ 70 ಲೀಗ್ ಹಂತದ ಪಂದ್ಯಗಳು ನಡೆಯಲಿದೆ.

ಗುರುವಾರ ವರ್ಚುವಲ್ ಆಗಿ ನಡೆದ ಐಪಿಎಲ್ ಆಡಳಿತ ಮಂಡಳಿ ಸಭೆಯ ನಂತರ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಐಪಿಎಲ್ 2022 ರ ವೇಳಾಪಟ್ಟಿಯನ್ನು ದೃಢಪಡಿಸಿದ್ದಾರೆ.

“ಐಪಿಎಲ್ 2022 ಅನ್ನು ಜೈವಿಕ-ಸುರಕ್ಷಿತ ವಾತಾವರಣದಲ್ಲಿ ಆಡಲಾಗುವುದು. ಹೀಗಾಗಿ ಕೇವಲ ಎರಡು ಆತಿಥೇಯ ನಗರಗಳನ್ನು ಆಯ್ಕೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. “ಕೋವಿಡ್ -19 ಸೋಂಕಿನ ಹರಡದಂತೆ ತಡೆಯಲು ವಿಮಾನ ಪ್ರಯಾಣವನ್ನು ತಪ್ಪಿಸಲು ಮುಂಬೈ ಮತ್ತು ಪುಣೆಯಲ್ಲಿ ಕೂಟ ನಡೆಸಲಾಗುವುದು” ಎಂದು ಬಿಸಿಸಿಐ ಹೇಳಿದೆ.

10 ತಂಡಗಳು ಒಟ್ಟು 14 ಲೀಗ್ ಪಂದ್ಯಗಳನ್ನು (7 ತವರಿನ ಪಂದ್ಯಗಳು ಮತ್ತು 7 ಹೊರಗಿನ ಪಂದ್ಯಗಳು) ಒಟ್ಟು 70 ಲೀಗ್ ಪಂದ್ಯಗಳನ್ನು ಆಡುತ್ತವೆ. ನಂತರ 4 ಪ್ಲೇಆಫ್ ಪಂದ್ಯಗಳು ನಡೆಯಲಿದೆ. ಪ್ರತಿ ತಂಡವು ಐದು ತಂಡಗಳನ್ನು ಎರಡು ಬಾರಿ ಮತ್ತು ಉಳಿದ ನಾಲ್ಕು ತಂಡಗಳನ್ನು ಒಮ್ಮೆ ಮಾತ್ರ ಎದುರಿಸಲಿದೆ.

ಇದನ್ನೂ ಓದಿ:ಯುದ್ಧದ ನಡುವೆಯೂ ರಷ್ಯಾಗೆ ಸಿಹಿ ಸುದ್ದಿ ನೀಡಿದ ಡೇನಿಯಲ್ ಮೆಡ್ವೆಡೇವ್

ಪ್ಲೇ-ಆಫ್ ಮತ್ತು ಫೈನಲ್‌ನ ಸ್ಥಳಗಳನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಬಿಸಿಸಿಐ ಸೇರಿಸಲಾಗಿದೆ.

10 ತಂಡಗಳನ್ನು ತಲಾ 5ರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಗ್ರೂಪ್ ಎ ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗ್ರೂಪ್ ಬಿ ಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅಗ್ರಸ್ಥಾನದಲ್ಲಿದೆ. ಇದನ್ನು ಐಪಿಎಲ್ ಚಾಂಪಿಯನ್‌ ಶಿಪ್‌ ಗಳನ್ನು ಗೆದ್ದ ಸಂಖ್ಯೆ ಮತ್ತು ತಂಡಗಳು ಫೈನಲ್ ಪ್ರವೇಶಿಸಿದ ಕೊನೆಯ ದಿನಾಂಕವನ್ನು ಪರಿಗಣಿಸಿ ಎರಡು ಗುಂಪು ಮಾಡಲಾಗಿದೆ.

ಪ್ರತಿ ತಂಡಗಳು ವಾಂಖೆಡೆ ಸ್ಟೇಡಿಯಂ ಮತ್ತು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ತಲಾ 4 ಪಂದ್ಯಗಳು ಮತ್ತು ಬ್ರೆಬೋರ್ನ್ ಸ್ಟೇಡಿಯಂ ಮತ್ತು ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ತಲಾ 3 ಪಂದ್ಯಗಳನ್ನು ಆಡಲಿದೆ.

ಪ್ರತಿ ತಂಡವು ತಮ್ಮ ಗುಂಪಿನಲ್ಲಿರುವ ತಂಡಗಳೊಂದಿಗೆ ಮತ್ತು ಎರಡನೇ ಗುಂಪಿನಲ್ಲಿ ಅದೇ ಸಾಲಿನ ತಂಡದೊಂದಿಗೆ ಎರಡು ಬಾರಿ ಆಡುತ್ತದೆ. ಎರಡನೇ ಗುಂಪಿನಲ್ಲಿರುವ ಉಳಿದ ತಂಡಗಳೊಂದಿಗೆ, ಅವರು ಋತುವಿನ ಲೀಗ್ ಹಂತದಲ್ಲಿ ಒಮ್ಮೆ ಮಾತ್ರ ಆಡುತ್ತಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.