![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Mar 19, 2024, 6:10 AM IST
ಬೆಂಗಳೂರು: ಬ್ಯಾಟಿಂಗ್ ಹೀರೋ ವಿರಾಟ್ ಕೊಹ್ಲಿ ಸೋಮವಾರ ಬೆಂಗಳೂರಿನಲ್ಲಿ ಆರ್ಸಿಬಿ ತಂಡವನ್ನು ಸೇರಿಕೊಂಡರು. ಜತೆಗೆ ಮೊದಲ ಸುತ್ತಿನ ಅಭ್ಯಾಸವನ್ನೂ ನಡೆಸಿದರು. ನಾಯಕ ಫಾ ಡು ಪ್ಲೆಸಿಸ್ ಕೂಡ ಇದ್ದರು.
ಆರ್ಸಿಬಿಯ ಮಾಜಿ ನಾಯಕರಾಗಿರುವ ವಿರಾಟ್ ಕೊಹ್ಲಿ ಕಳೆದ ಕೆಲವು ವಾರಗಳಿಂದ ಲಂಡನ್ನಲ್ಲಿದ್ದರು. ಮಗ “ಅಕಾಯ್’ನ ಜನನವಾದ ಬಳಿಕ ರವಿವಾರವಷ್ಟೇ ಭಾರತಕ್ಕೆ ಮರಳಿದ್ದರು. ಆದರೆ ಮಾಧ್ಯಮದವರಿಗೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ವಿರಾಟ್ ಕೊಹ್ಲಿ 2022ರ ವಿಶ್ವಕಪ್ ಬಳಿಕ ಕಳೆದ ಜನವರಿಯಲ್ಲಷ್ಟೇ ಅಫ್ಘಾನಿಸ್ಥಾನ ವಿರುದ್ಧ ಮೊದಲ ಟಿ20 ಪಂದ್ಯ ಆಡಿದ್ದರು. ಇದೇ ಸರಣಿಯಲ್ಲಿ ರೋಹಿತ್ ಶರ್ಮ ಕೂಡ ಟಿ20 ನಾಯಕರಾಗಿ ಮರಳಿದ್ದರು.
ಪ್ರವಾಸಿ ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಯಿಂದ ಬೇರ್ಪಟ್ಟಿದ್ದ ವಿರಾಟ್ ಕೊಹ್ಲಿ ಪಾಲಿಗೆ ಈ ಬಾರಿಯ ಐಪಿಎಲ್ ಅತ್ಯಂತ ಮಹತ್ವದ್ದಾಗಿದೆ. ಜೂನ್ನಲ್ಲಿ ನಡೆಯುವ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವ ಳಿಯಿಂದ ಇವರನ್ನು ದೂರ ಇರಿಸುವ ಬಗ್ಗೆ ನಾನಾ ಊಹಾಪೋಹಗಳು ಹರಿದಾಡುತ್ತಿದ್ದು, ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಬೇಕಿದೆ.
ವಿರಾಟ್ ಕೊಹ್ಲಿ ಕಳೆದ ಐಪಿಎಲ್ನಲ್ಲಿ 2 ಶತಕ ಸೇರಿದಂತೆ 639 ರನ್ ಪೇರಿಸಿ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದರು. ಈ ಬಾರಿ ಆರ್ಸಿಬಿ ಉದ್ಘಾಟನ ಪಂದ್ಯದಲ್ಲಿ ಆಡಲಿದ್ದು, ಶುಕ್ರವಾರ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.