ಮುಂದುವರಿದೀತೇ ಚೆನ್ನೈ ಓಟ? ದ್ವಿತೀಯ ಸುತ್ತಿನಲ್ಲಿ ಎದುರಾಗಲಿದೆ ಪಂಜಾಬ್ ಕಿಂಗ್ಸ್‌


Team Udayavani, Apr 25, 2022, 8:00 AM IST

thumb 2

ಮುಂಬಯಿ : ಎರಡನೇ ಗೆಲುವಿನ ರುಚಿ ಕಂಡಿರುವ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ತೀರಾ ಕಳಪೆ ಪ್ರದರ್ಶನ ನೀಡಿರುವ ಪಂಜಾಬ್‌ ಕಿಂಗ್ಸ್‌ ಸೋಮವಾರ ದ್ವಿತೀಯ ಸುತ್ತಿನಲ್ಲಿ ಎದುರಾಗಲಿವೆ.

ಚೆನ್ನೈ ಮುಂದಿನ ಸುತ್ತಿನ ರೇಸ್‌ನಲ್ಲಿ ಉಳಿಯಬೇಕಾದರೆ ಇನ್ನು ಮುಂದೆ ಪ್ರತೀ ಪಂದ್ಯವನ್ನೂ ದೊಡ್ಡ ಅಂತರದಲ್ಲಿ ಗೆಲ್ಲುತ್ತ ಹೋಗಬೇಕು. ಎರಡು ದಿನಗಳ ಹಿಂದೆ ಮುಂಬೈಯನ್ನು ಅಂತಿಮ ಎಸೆತದಲ್ಲಿ ಮಣಿಸಿದ್ದನ್ನು ಕಂಡಾಗ ಜಡೇಜ ಪಡೆಗೆ ಅದೃಷ್ಟ ಒಲಿದಿರುವ ಸೂಚನೆಯೊಂದು ಸಿಕ್ಕಿದೆ. ಇದೇ ಜೋಶ್‌ನಲ್ಲಿ ಮುಂದುವರಿದರೆ ಚೆನ್ನೈ ಮೇಲೆ ನಿರೀಕ್ಷೆ ಇರಿಸಿಕೊಳ್ಳಲಡ್ಡಿಯಿಲ್ಲ.

ಹಾಗೆಯೇ ಪಂಜಾಬ್‌ಗೂ ಇದು ಮಹತ್ವದ ಪಂದ್ಯ. ಅಂಕಪಟ್ಟಿಯಲ್ಲಿ ಅಗರ್ವಾಲ್‌ ಬಳಗ ಬಹಳ ಮೇಲ್ಮಟ್ಟದಲ್ಲಂತೂ ಇಲ್ಲ. ಮುಂಬೈ, ಚೆನ್ನೈ ಬಳಿಕ ಕೆಳಗಿನಿಂದ ತೃತೀಯ ಸ್ಥಾನಿಯಾಗಿದೆ. 7 ಪಂದ್ಯಗಳಲ್ಲಿ ಮೂರನ್ನಷ್ಟೇ ಜಯಿಸಿದೆ. ಇನ್ನು ಸೋಲುತ್ತ ಹೋದರೆ ಪಂಜಾಬ್‌ ಪ್ಲೇ-ಆಫ್‌ ದಾರಿ ಮುಚ್ಚಲ್ಪಡಬಹುದು.

4 ದಿನಗಳ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಶೋಚನೀಯ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಪಂಜಾಬ್‌ ಕೇವಲ 115ಕ್ಕೆ ಗಂಟುಮೂಟೆ ಕಟ್ಟಿತ್ತು. ಡೆಲ್ಲಿ ಈ ಮೊತ್ತವನ್ನು ಒಂದೇ ವಿಕೆಟ್‌ ಕಳೆದುಕೊಂಡು ಚೇಸ್‌ ಮಾಡಿತ್ತು. ಈ ಆಘಾತದಿಂದ ಪಂಜಾಬ್‌ ಹೊರಬರಬೇಕಿದೆ.

ಚೆನ್ನೈಗೆ ಸೇಡಿನ ಪಂದ್ಯ
ಪಂಜಾಬ್‌ ತಂಡವನ್ನು ಎದುರಿಸುವ ವೇಳೆ ಚೆನ್ನೈ ಗಮನದಲ್ಲಿರುವುದು ಸೇಡು. ಎ. 3ರಂದು “ಬ್ರೆಬೋರ್ನ್ ಸ್ಟೇಡಿಯಂ’ನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್‌ 54 ರನ್ನುಗಳಿಂದ ಚೆನ್ನೈಯನ್ನು ಕೆಡವಿತ್ತು. ಪಂಜಾಬ್‌ 8 ವಿಕೆಟಿಗೆ 180 ರನ್‌ ಬಾರಿಸಿದರೆ, ಚೆನ್ನೈ 18 ಓವರ್‌ಗಳಲ್ಲಿ 126ಕ್ಕೆ ಕುಸಿದಿತ್ತು. ಶಿವಂ ದುಬೆ ಹೊರತುಪಡಿಸಿ ಚೇಸಿಂಗ್‌ ವೇಳೆ ಯಾರೂ ಕ್ಲಿಕ್‌ ಆಗಿರಲಿಲ್ಲ. ಪಂಜಾಬ್‌ ಸಾಂಘಿಕ ಬೌಲಿಂಗ್‌ ಮೂಲಕ ಯಶಸ್ಸು ಸಾಧಿಸಿತ್ತು. ದಾಳಿಗಿಳಿದ ಆರೂ ಮಂದಿ ವಿಕೆಟ್‌ ಹಂಚಿಕೊಂಡಿದ್ದರು. ಇವರಲ್ಲಿ ರಾಹುಲ್‌ ಚಹರ್‌ (25ಕ್ಕೆ 3) ಹೆಚ್ಚಿನ ಯಶಸ್ಸು ಸಾಧಿಸಿದ್ದರು. ಲಿಯಮ್‌ ಲಿವಿಂಗ್‌ಸ್ಟೋನ್‌ ಆಲ್‌ರೌಂಡ್‌ ಪ್ರದರ್ಶನದ ಮೂಲಕ ಗಮನ ಸೆಳೆದಿ ದ್ದರು. 60 ರನ್‌ ಬಾರಿಸುವ ಜತೆಗೆ 2 ವಿಕೆಟ್‌ ಕೂಡ ಉರುಳಿಸಿದ್ದರು.

ಗಾಯಕ್ವಾಡ್‌, ಉತ್ತಪ್ಪ, ರಾಯುಡು, ಮೊಯಿನ್‌ ಅಲಿ, ದುಬೆ ಅವರನ್ನೊಳಗೊಂಡ ಚೆನ್ನೈ ಬ್ಯಾಟಿಂಗ್‌ ಲೈನ್‌ಅಪ್‌ ಮೇಲ್ನೋಟಕ್ಕೆ ಬಲಿಷ್ಠವಾಗಿಯೇ ಇದೆ. ಆದರೆ ಯಾರೂ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡು ತ್ತಿಲ್ಲ, ಸ್ಥಿರವಾದ ಆಟವನ್ನೂ ಆಡು ತ್ತಿಲ್ಲ. ಮುಂಬೈ ವಿರುದ್ಧದ ಪಂದ್ಯವನ್ನು ಫಿನಿಶ್‌ ಮಾಡಲು ಸೀನಿಯರ್‌ ಮೋಸ್ಟ್‌ ಕ್ರಿಕೆಟಿರ್‌ ಧೋನಿಯೇ ಬರಬೇಕಾದುದು ವಿಪರ್ಯಾಸ!

ಹಳೆ ಹುಲಿ ಡ್ವೇನ್‌ ಬ್ರಾವೊ ಚಾರ್ಮ್ ಕಳೆದುಕೊಂಡಿರುವುದು, ಪ್ರಧಾನ ವೇಗಿ ದೀಪಕ್‌ ಚಹರ್‌ ಹೊರಬಿದ್ದಿರುವುದು ಜಡೇಜ ಬಳಗಕ್ಕೆ ಎದುರಾಗಿರುವ ದೊಡ್ಡ ಹೊಡೆತ. ಆದರೆ ಕಳೆದ ಪಂದ್ಯದಲ್ಲಿ ಮುಕೇಶ್‌ ಚೌಧರಿ ಬೌಲಿಂಗ್‌ ಜಾದೂ ಮಾಡಿರುವುದನ್ನು ಮರೆಯುವಂತಿಲ್ಲ. ಅವರು ಒಂದೇ ಓವರ್‌ನಲ್ಲಿ ಮುಂಬೈ ಆರಂಭಿಕರಾದ ರೋಹಿತ್‌ ಶರ್ಮ ಮತ್ತು ಇಶಾನ್‌ ಕಿಶನ್‌ ಅವರಿಗೆ ಪೆವಿಲಿಯನ್‌ ಹಾದಿ ತೋರಿಸಿದ್ದರು. ಹೀಗಾಗಿ ಚೌಧರಿ ಮೇಲೆ ಚೆನ್ನೈ ಭಾರೀ ನಂಬಿಕೆ ಇರಿಸಿದೆ.

ಪಂಜಾಬ್‌ ಅಸ್ಥಿರ ಪ್ರದರ್ಶನ
ಪಂಜಾಬ್‌ ಕಿಂಗ್ಸ್‌ ಬಿಗ್‌ ಹಿಟ್ಟರ್‌ಗಳನ್ನು ಹೊಂದಿರುವ ತಂಡ. ಧವನ್‌, ಅಗರ್ವಾಲ್‌, ಲಿವಿಂಗ್‌ಸ್ಟೋನ್‌, ಶಾರೂಖ್‌ ಖಾನ್‌ ಇಲ್ಲಿನ ಪ್ರಮುಖರು. ಇವರಲ್ಲಿ ಲಿವಿಂಗ್‌ಸ್ಟೋನ್‌ ಹೊರತು ಪಡಿಸಿ ಉಳಿದವರಿನ್ನೂ ನೈಜ ಆಟಕ್ಕೆ ಕುದುರಿಕೊಂಡಿಲ್ಲ. ಜಾನಿ ಬೇರ್‌ಸ್ಟೊ ಸತತ 4 ಪಂದ್ಯಗಳಲ್ಲಿ ಫೇಲ್‌ ಆಗಿರುವುದು ತಂಡದ ಪಾಲಿನ ಚಿಂತೆಯ ಸಂಗತಿ. ಇವರ ಬದಲು ಶ್ರೀಲಂಕಾದ ಭನುಕ ರಾಜಪಕ್ಸ ಆಡುವ ಸಾಧ್ಯತೆ ಇದೆ. ಹಾಗೆಯೇ ರಿಷಿ ಧವನ್‌, ಸಂದೀಪ್‌ ಶರ್ಮ ಮೊದಲಾದವರು ಕೂಡ ಕಾಯಿತ್ತಿದ್ದಾರೆ. ಪೇಸ್‌ ಬೌಲಿಂಗ್‌ ಆಲ್‌ರೌಂಡರ್‌ ಒಡೀನ್‌ ಸ್ಮಿತ್‌, ಪ್ರಧಾನ ವೇಗಿ ಕಾಗಿಸೊ ರಬಾಡ, ಆರ್ಷದೀಪ್‌ ಸಿಂಗ್‌, ವೈಭವ್‌ ಅರೋರ ಅವರೆಲ್ಲ ಸಿಡಿದು ನಿಂತರೆ ಪಂಜಾಬ್‌ ಮತ್ತೆ ಗೆಲುವಿನ ಹಳಿ ಏರೀತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.