ಇರಾನಿ ಕಪ್‌ ಕ್ರಿಕೆಟ್‌: ಯಶಸ್ವಿ ಜೈಸ್ವಾಲ್‌ ದ್ವಿಶತಕದ ದಾಖಲೆ


Team Udayavani, Mar 2, 2023, 6:14 AM IST

ಇರಾನಿ ಕಪ್‌ ಕ್ರಿಕೆಟ್‌: ಯಶಸ್ವಿ ಜೈಸ್ವಾಲ್‌ ದ್ವಿಶತಕದ ದಾಖಲೆ

ಗ್ವಾಲಿಯರ್‌: ಯಶಸ್ವಿ ಜೈಸ್ವಾಲ್‌ ಅವರ ದಾಖಲೆಯ ದ್ವಿಶತಕ, ಆರಂಭಕಾರ ಅಭಿಮನ್ಯು ಈಶ್ವರನ್‌ ಅವರ ಅಮೋಘ ಶತಕ ಹಾಗೂ ಇವರಿಬ್ಬರ ನಡುವಿನ ತ್ರಿಶತಕದ ಜತೆಯಾಟದಿಂದ ಮಧ್ಯಪ್ರದೇಶ ವಿರುದ್ಧದ “ಇರಾನಿ ಕಪ್‌’ ಕ್ರಿಕೆಟ್‌ ಪಂದ್ಯದ ಮೊದಲ ದಿನವೇ ಶೇಷ ಭಾರತ ತಂಡ ಬೃಹತ್‌ ಮೊತ್ತ ಪೇರಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಶೇಷ ಭಾರತ 3 ವಿಕೆಟ್‌ ನಷ್ಟಕ್ಕೆ 381 ರನ್‌ ರಾಶಿ ಹಾಕಿದೆ. ಇದರಲ್ಲಿ ಯಶಸ್ವಿ ಜೈಸ್ವಾಲ್‌ ಕೊಡುಗೆ 213 ರನ್‌. ಅವರು ಇರಾನಿ ಕಪ್‌ನಲ್ಲಿ ದ್ವಿಶತಕ ಬಾರಿಸಿದ ಅತೀ ಕಿರಿಯ ಕ್ರಿಕೆಟಿಗನೆಂಬ ಹೆಗ್ಗಳಿಕೆಗೆ ಪಾತ್ರರಾದರು (21 ವರ್ಷ, 63 ದಿನ). ಇದು ಜೈಸ್ವಾಲ್‌ ಅವರ ಇರಾನಿ ಕಪ್‌ ಪದಾರ್ಪಣ ಪಂದ್ಯವೆಂಬುದು ವಿಶೇಷ.

ಜೈಸ್ವಾಲ್‌ ಅವರ ದ್ವಿಶತಕ 230 ಎಸೆತಗಳಲ್ಲಿ ದಾಖ ಲಾಯಿತು. ಅಂತಿಮವಾಗಿ 259 ಎಸೆತ ಎದುರಿಸಿ ಸೊಗ ಸಾದ ಇನ್ನಿಂಗ್ಸ್‌ ಕಟ್ಟಿದರು. ಸಿಡಿಸಿದ್ದು ಬರೋಬ್ಬರಿ 30 ಬೌಂಡರಿ ಹಾಗೂ 3 ಸಿಕ್ಸರ್‌. ಅವರು ಇರಾನಿ ಕಪ್‌ನಲ್ಲಿ ಡಬಲ್‌ ಸೆಂಚುರಿ ಹೊಡೆದ 10ನೇ ಆಟಗಾರ.

ಅಭಿಮನ್ಯು ಈಶ್ವರನ್‌ 240 ಎಸೆತಗಳಿಂದ 154 ರನ್‌ ಬಾರಿಸಿದರು (17 ಬೌಂಡರಿ, 2 ಸಿಕ್ಸರ್‌). ನಾಯಕ ಮಾಯಾಂಕ್‌ ಅಗರ್ವಾಲ್‌ ಕೇವಲ 2 ರನ್‌ ಮಾಡಿ ನಿರ್ಗಮಿಸಿದ ಬಳಿಕ ಅಭಿಮನ್ಯು-ಜೈಸ್ವಾಲ್‌ ಕ್ರೀಸ್‌ ಆಕ್ರಮಿಸಿಕೊಂಡರು. ದಿನದಾಟದ ಕೊನೆಯ ಹಂತದಲ್ಲಿ ಶೇಷ ಭಾರತ ಇವರಿಬ್ಬರನ್ನೂ ಕಳೆದುಕೊಂಡಿತು. ಅಭಿಮನ್ಯು ರನೌಟಾದರು. ಆವೇಶ್‌ ಖಾನ್‌ 2 ವಿಕೆಟ್‌ ಉರುಳಿಸಿದರು.

ಈ ಬಾರಿಯ ರಣಜಿ ಋತುವಿನಲ್ಲಿ ಕೇವಲ 315 ರನ್‌ ಗಳಿಸಿ, ಟಾಪ್‌-50ರಲ್ಲೂ ಕಾಣಿಸಿಕೊಳ್ಳದ ಯಶಸ್ವಿ ಜೈಸ್ವಾಲ್‌ “ಇರಾನಿ ಕಪ್‌’ಗೆ ಆಯ್ಕೆಯಾಗಲು ಮುಖ್ಯ ಕಾರಣ, ಇವರ ಮೇಲೆ ಆಯ್ಕೆಗಾರರು ಹಾಗೂ ಕೋಚ್‌ ರಾಹುಲ್‌ ದ್ರಾವಿಡ್‌ ಇರಿಸಿದ ನಂಬಿಕೆ. ಇದನ್ನು ಜೈಸ್ವಾಲ್‌ ಹುಸಿಗೊಳಿಸಲಿಲ್ಲ.

ಸಂಕ್ಷಿಪ್ತ ಸ್ಕೋರ್‌: ಶೇಷ ಭಾರತ-3 ವಿಕೆಟಿಗೆ 381 (ಯಶಸ್ವಿ ಜೈಸ್ವಾಲ್‌ 213, ಅಭಿಮನ್ಯು ಈಶ್ವರನ್‌ 154, ಆವೇಶ್‌ ಖಾನ್‌ 51ಕ್ಕೆ 2).

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.