Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ


Team Udayavani, Oct 4, 2024, 11:07 PM IST

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

ಲಕ್ನೋ: ಶೇಷಭಾರತ ವಿರುದ್ಧ ಒಟ್ಟು 274 ರನ್‌ ಮುನ್ನಡೆ ಸಾಧಿಸಿರುವ ಮುಂಬೈ, ಗೆಲುವಿನ ಬಲವಾದ ಭರವಸೆ ಹೊಂದಿದೆ. ಒಂದು ವೇಳೆ ಶನಿವಾರ ಮುಂಬೈ ಬೇಗನೇ ಆಲೌಟಾದರೆ, ಶೇಷಭಾರತಕ್ಕೂ ಗೆಲುವಿನ ಅವಕಾಶವಿದೆ. ಹೀಗಾಗಿ ಫ‌ಲಿತಾಂಶ ರೋಚಕ ಘಟ್ಟಕ್ಕೆ ತಲುಪಿದೆ. ಮುಂಬೈನ 537 ರನ್ನುಗಳಿಗೆ ದಿಟ್ಟ ರೀತಿಯಲ್ಲೇ ಜವಾಬು ನೀಡಿದ ಶೇಷ ಭಾರತ, 4ನೇ ದಿನದಾಟದಲ್ಲಿ 416ಕ್ಕೆ ಆಲೌಟ್‌ ಆಯಿತು. ನಾಯಕ ಅಭಿಮನ್ಯು ಈಶ್ವರನ್‌ 191 ರನ್‌, ಧ್ರುವ ಜುರೆಲ್‌ 93 ರನ್‌ ಬಾರಿಸಿದರು. 121 ರನ್‌ 1ನೇ ಇನಿಂಗ್ಸ್‌ ಮುನ್ನಡೆ ಸಾಧಿಸಿದ ಮುಂಬೈ ದ್ವಿತೀಯ ಇನಿಂಗ್ಸ್‌ನಲ್ಲಿ ಕುಸಿದು 6ಕ್ಕೆ 153 ರನ್‌ ಮಾಡಿದೆ.
ಸಂಕ್ಷಿಪ್ತ ಸ್ಕೋರ್‌: ಮುಂಬೈ 1ನೇ ಇನಿಂಗ್ಸ್‌ 537 ಮತ್ತು 2ನೇ ಇನಿಂಗ್ಸ್‌ 153/6 (ಪೃಥ್ವಿ ಶಾ 76, ಸಾರಾಂಶ್‌ 67ಕ್ಕೆ 4, ಮಾನವ್‌ 40ಕ್ಕೆ 2). ಶೇಷಭಾರತ 1ನೇ ಇನಿಂಗ್ಸ್‌ 416 (ಈಶ್ವರನ್‌ 191, ಜುರೆಲ್‌ 93, ತನುಷ್‌101ಕ್ಕೆ 3, ಮುಲಾನಿ 122ಕ್ಕೆ 3).

ನಾಯಕನ ಮ್ಯಾರಥಾನ್‌ ಇನ್ನಿಂಗ್ಸ್‌
ಆರಂಭಕಾರ ಅಭಿಮನ್ಯು ಮಿಥುನ್‌ 292 ಎಸೆತಗಳಿಂದ ನಾಯಕನ ಇನ್ನಿಂಗ್ಸ್‌ ಕಟ್ಟಿದರು. ಅವರ 191 ರನ್ನುಗಳ ಮ್ಯಾರಥಾನ್‌ ಇನ್ನಿಂಗ್ಸ್‌ ಒಂದು ಸಿಕ್ಸರ್‌ ಹಾಗೂ 16 ಬೌಂಡರಿಗಳನ್ನು ಒಳಗೊಂಡಿತ್ತು. ಜುರೆಲ್‌ 93 ರನ್ನಿಗೆ 121 ಎಸೆತಗಳನ್ನು ಎದುರಿಸಿದರು. ಸಿಡಿಸಿದ್ದು 13 ಬೌಂಡರಿ ಹಾಗೂ ಒಂದು ಸಿಕ್ಸರ್‌. ಇವರಿಬ್ಬರ ಜತೆಯಾಟದಲ್ಲಿ 5ನೇ ವಿಕೆಟಿಗೆ 165 ರನ್‌ ಒಟ್ಟುಗೂಡಿತು. ಆದರೆ ಇಬ್ಬರೂ 3 ರನ್‌ ಅಂತರದಲ್ಲಿ ಪೆವಿಲಿಯನ್‌ ಸೇರಿಕೊಂಡ ಬಳಿಕ ಶೇಷ ಭಾರತದ ಹೋರಾಟ ಕೊನೆಗೊಂಡಿತು.

ಒಂದು ಹಂತದಲ್ಲಿ 4ಕ್ಕೆ 393 ರನ್‌ ಮಾಡಿ ಮುನ್ನಡೆಯ ಸೂಚನೆ ನೀಡಿದ್ದ ಶೇಷ ಭಾರತ, ಕೇವಲ 23 ರನ್‌ ಅಂತರದಲ್ಲಿ 6 ವಿಕೆಟ್‌ ಉದುರಿಸಿಕೊಂಡಿತು.

ಟಾಪ್ ನ್ಯೂಸ್

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

9

Cricketer: ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ರಶೀದ್‌ ಖಾನ್

Team India; Morkel, the bowling coach, is upset with Hardik Pandya

Team India; ಹಾರ್ದಿಕ್ ಪಾಂಡ್ಯ ಬಗ್ಗೆ ಅಸಮಾಧಾನಗೊಂಡ ಬೌಲಿಂಗ್‌ ಕೋಚ್‌ ಮಾರ್ಕೆಲ್‌

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ಆಟಗಾರ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ನಾಯಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Exam 2

SSLC; ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ ಅ. 25 ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.