![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 1, 2023, 7:31 AM IST
ಗ್ವಾಲಿಯರ್: ರಣಜಿ ಚಾಂಪಿಯನ್ ಮತ್ತು ಶೇಷ ಭಾರತ ತಂಡಗಳ ನಡುವಿನ 2021-22ನೇ ಸಾಲಿನ ಇರಾನಿ ಕಪ್ ಕ್ರಿಕೆಟ್ ಪಂದ್ಯ ಬುಧವಾರ ಗ್ವಾಲಿಯರ್ನಲ್ಲಿ ಆರಂಭವಾಗಲಿದೆ. ಇದು ಕಳೆದ ಸಲದ ರಣಜಿ ಚಾಂಪಿಯನ್ ಮಧ್ಯಪ್ರದೇಶ ವಿರುದ್ಧ ನಡೆಯುವ ಪಂದ್ಯ.
ಶೇಷ ಭಾರತ ತಂಡವನ್ನು ಕರ್ನಾಟಕದ ಆರಂಭಕಾರ ಮಾಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದಾರೆ.
ಟೀಮ್ ಇಂಡಿಯಾಕ್ಕೆ ಮರಳಲು ಅವರಿಗೆ ಇದೊಂದು ಮೆಟ್ಟಿಲಾ ದೀತೇ ಎಂಬುದೊಂದು ನಿರೀಕ್ಷೆ. ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅನುಭವಿಸಿದ ವೈಫಲ್ಯದ ಬಳಿಕ ಅಗರ್ವಾಲ್ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರು.
ಕರ್ನಾಟಕದವರೇ ಆದ ಕೆ.ಎಲ್. ರಾಹುಲ್ ತೀವ್ರ ರನ್ ಬರಗಾಲದಲ್ಲಿರುವಾಗ ಇತ್ತ ಮಾಯಾಂಕ್ ಅಗರ್ವಾಲ್ ಪ್ರಸಕ್ತ ರಣಜಿ ಋತುವಿನಲ್ಲಿ 990 ರನ್ ಪೇರಿಸುವ ಮೂಲಕ ಗಮನ ಸೆಳೆದಿದ್ದರು. ಆದರೆ ಈಗಾಗಲೇ ಆಸ್ಟ್ರೇಲಿಯ ವಿರುದ್ಧದ ಉಳಿದೆರಡು ಟೆಸ್ಟ್ ಪಂದ್ಯಗಳಿಗಾಗಿ ತಂಡ ಅಂತಿಮಗೊಂಡಿದೆ. ಇದರಲ್ಲಿ ಅಗರ್ವಾಲ್ ಸ್ಥಾನ ಪಡೆದಿಲ್ಲ. ಇರಾನಿ ಕಪ್ನಲ್ಲಿ ಕ್ಲಿಕ್ ಆದರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಅವಕಾಶ ಲಭಿಸಲೂಬಹುದು.
ಮಧ್ಯಪ್ರದೇಶವನ್ನು ಹಿಮಾಂಶು ಮಂತ್ರಿ ಮುನ್ನಡೆ ಸಲಿದ್ದಾರೆ. ಬಲಾಬಲದ ಲೆಕ್ಕಾಚಾರದಲ್ಲಿ ಶೇಷ ಭಾರತವೇ ಮೇಲುಗೈ ಹೊಂದಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.