Irani Trophy: ರಹಾನೆ ಮುಂಬಯಿ ನಾಯಕ
Team Udayavani, Sep 24, 2024, 6:25 AM IST
ಮುಂಬಯಿ: ಶೇಷ ಭಾರತ (ರೆಸ್ಟ್ ಆಫ್ ಇಂಡಿಯಾ) ವಿರುದ್ಧದ ಇರಾನಿ ಟ್ರೋಫಿ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಮುಂಬಯಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಮುಂಬಯಿ ಕ್ರಿಕೆಟ್ ಮಂಡಳಿ (ಎಂಸಿಎ) ತಿಳಿಸಿದೆ. ರಹಾನೆ ನಾಯಕತ್ವದಲ್ಲೇ ಮುಂಬಯಿ ಕಳೆದ ಸೀಸನ್ನಲ್ಲಿ ರಣಜಿ ಚಾಂಪಿಯನ್ ಆಗಿ ಮೂಡಿಬಂದಿತ್ತು.
ಶ್ರೇಯಸ್ ಅಯ್ಯರ್ ಮತ್ತು ಶಾರ್ದೂಲ್ ಠಾಕೂರ್ ಕೂಡ ಮುಂಬಯಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಂಗಳವಾರ ಮುಂಬಯಿ ತಂಡ ಪ್ರಕಟಗೊಳ್ಳಲಿದೆ.
ಜೂನ್ನಲ್ಲಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಾರ್ದೂಲ್ ಠಾಕೂರ್, ಅನಂತರ ವಿಶ್ರಾಂತಿಯಲ್ಲಿದ್ದರು. ತಾನೀಗ ಲಭ್ಯನಿದ್ದೇನೆಂದು ಸ್ವತಃ ಶಾರ್ದೂಲ್ ಠಾಕೂರ್ ಎಂಸಿಎಗೆ ತಿಳಿಸಿದ್ದರಿಂದ ಅವರನ್ನು ಇರಾನಿ ಟ್ರೋಫಿಯಲ್ಲಿ ಆಡಿಸುವ ನಿರ್ಧಾರಕ್ಕೆ ಬರಲಾಗಿದೆ. ಇರಾನಿ ಟ್ರೋಫಿ ಪಂದ್ಯ ಅ. ಒಂದರಿಂದ 5ರ ತನಕ ಲಕ್ನೋದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.