Kanpur Test: ಪಂದ್ಯ ಬಿಟ್ಟು ಹೋಟೆಲ್ ಗೆ ತೆರಳಿದ ಭಾರತೀಯ ಆಟಗಾರರು
Team Udayavani, Sep 28, 2024, 2:09 PM IST
ಕಾನ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ (Green Park Stadium) ನಡೆಯುತ್ತಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಿದೆ. ಮೊದಲ ದಿನದಾಟದಲ್ಲಿ ಕೇವಲ 35 ಓವರ್ ಮಾತ್ರ ನಡೆದಿದ್ದು, ಎರಡನೇ ದಿನವಾದ ಶನಿವಾರ (ಸೆ.28) ಮೊದಲ ಸೆಶನ್ ಮಳೆಗೆ ಕೊಚ್ಚಿ ಹೋಗಿದೆ.
ಮಳೆಯ ಕಾರಣದಿಂದ ಎರಡನೇ ದಿನದ ಆಟ ಆರಂಭವಾಗಲೇ ಇಲ್ಲ. ಹೀಗಾಗಿ ಭಾರತೀಯ ತಂಡವು ಬಸ್ ಮೂಲಕ ತಂಡದ ಹೋಟೆಲ್ ಗೆ ಹಿಂತಿರುಗಿದೆ ಎಂದು ವರದಿಯಾಗಿದೆ. ಗ್ರೀನ್ ಪಾರ್ಕ್ನಲ್ಲಿ ಎರಡನೇ ದಿನದ ಮೊದಲ ಸೆಶನ್ ರದ್ದಾಗಿದ್ದು, ಎರಡನೇ ಸೆಶನ್ ಕೂಡಾ ಮಳೆ ಆಪೋಶನವಾಗುವ ಸಾಧ್ಯತೆಯಿದೆ.
ಬಾಂಗ್ಲಾದೇಶದ ಆಟಗಾರರು ಸಹ ತಂಡದ ಹೋಟೆಲ್ ಗೆ ತೆರಳಿದ್ದಾರೆ ಎಂದು ಇಎಸ್ಪಿಎನ್ ಕ್ರಿಕ್ ಇನ್ಫೋ ವರದಿ ಮಾಡಿದೆ. ಇಂದಿನ ಪಂದ್ಯ ಬಹುತೇಕ ರದ್ದಾಗುವ ಸಾಧ್ಯತೆಯಿದೆ.
ಹವಾಮಾನ ಮುನ್ಸೂಚನೆಯು ಮಧ್ಯಾಹ್ನದ ನಂತರವೂ ಮಳೆ ಬರುವ ವರದಿ ನೀಡಿದೆ. ಮೈದಾನದಲ್ಲಿ ಕವರ್ ಹಾಕಿರುವ ಕಾರಣ ಅಭ್ಯಾಸ ಮಾಡುವುದು ಅಸಾಧ್ಯವಾಗಿದೆ. ಹೀಗಾಗಿ ಭಾರತೀಯ ತಂಡವು ಹೋಟೆಲ್ಗೆ ಹಿಂತಿರುಗಲು ಮತ್ತು ವಿಶ್ರಾಂತಿ ಪಡೆಯಲು ಆಯ್ಕೆ ಮಾಡಿಕೊಂಡಿದೆ ಎನ್ನಲಾಗಿದೆ.
#WATCH | Kanpur: India vs Bangladesh 2nd Test, Day-2 | Indian cricket team leaves from Green Park Stadium; the start of play for Day 2 in Kanpur has been delayed due to rain, tweets BCCI.#INDvBAN pic.twitter.com/cVe6z73M6z
— ANI (@ANI) September 28, 2024
ಕಾನ್ಪುರ ಟೆಸ್ಟ್ ನಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿದೆ. ಬಾಂಗ್ಲಾದೇಶ ತಂಡವು ಮೂರು ವಿಕೆಟ್ ಕಳೆದುಕೊಂಡು 107 ರನ್ ಗಳಿಸಿದೆ. 40 ರನ್ ಗಳಿಸಿರುವ ಮೊಮಿನುಲ್ ಹಕ್ ಮತ್ತು ಆರು ರನ್ ಗಳಿಸಿರುವ ಮುಶ್ಫೀಕರ್ ರಹೀಂ ವಿಕೆಟ್ ಕಾಯ್ದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.