WPL Auction: ಕಳೆದ ವರ್ಷ ಅನ್ ಸೋಲ್ಡ್, ಈ ಬಾರಿ 2 ಕೋಟಿ ರೂ ಪಡೆದ ದಾಖಲೆ ಬರೆದ ಕಶ್ವಿ
Team Udayavani, Dec 9, 2023, 5:36 PM IST
ಮುಂಬೈ: ವನಿತಾ ಪ್ರೀಮಿಯರ್ ಲೀಗ್ ನ ಮಿನಿ ಹರಾಜು ಕಾರ್ಯವು ಮುಂಬೈನಲ್ಲಿಂದು ನಡೆಯುತ್ತಿದೆ. ಸತರ್ ಲ್ಯಾಂಡ್, ಶಬ್ನಿಮ್ ಇಸ್ಮಾಯಿಲ್, ವೃಂದಾ ದಿನೇಶ್ ಮುಂತಾದವರು ಕೋಟಿ ಹಣ ಪಡೆದು ಮಿಂಚಿದರು. ಐದು ಡಬ್ಲ್ಯೂಪಿಎಲ್ ತಂಡಗಳು ತಮಗೆ ಬೇಕಾದ ಆಟಗಾರರನ್ನು ಪಡೆದಿದ್ದಾರೆ.
ಈ ವೇಳೆ ಎಲ್ಲರ ಅಚ್ಚರಿಗೆ ಕಾರಣವಾಗಿದ್ದು 20 ವರ್ಷ ಹರೆಯದ ಆಟಗಾರ್ತಿ ಕಶ್ವಿ ಗೌತಮ್. ಆಲ್ ರೌಂಡರ್ ಆಗಿರುವ ಕಶ್ವಿ ಈ ಬಾರಿಯ ಡಬ್ಲ್ಯೂಪಿಎಲ್ ಹರಾಜಿನಲ್ಲಿ ಅತೀ ಹೆಚ್ಚು ಹಣ ಪಡೆದ ದಾಖಲೆ ಬರೆದಿದ್ದಾರೆ.
ಗುಜರಾತ್ ಜೈಂಟ್ಸ್ ತಂಡವು ಕಶ್ವಿ ಗೌತಮ್ ಅವರನ್ನು ಬರೋಬ್ಬರಿ ಎರಡು ಕೋಟಿ ರೂ ನೀಡಿ ಹರಾಜಿನಲ್ಲಿ ಖರೀದಿಸಿದೆ. ಕಶ್ವಿ ಗೌತಮ್ ಅವರು ಅತಿ ಹೆಚ್ಚು ಹಣ ಪಡೆದ ಅನ್ ಕ್ಯಾಪ್ಡ್ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ.
ಫಾಸ್ಟ್ ಬೌಲಿಂಗ್ ಆಲ್ ರೌಂಡರ್ ಆಗಿರುವ ಕಶ್ವಿ ಗೌತಮ್ ಅವರು ವನಿತಾ ಕ್ರಿಕೆಟ್ ನಲ್ಲಿ ದಾಖಲೆ ಮಾಡಿದ ಆಟಗಾರ್ತಿ. ಚಂಡೀಗಢ ತಂಡದ ಪರವಾಗಿ ವನಿತಾ ಅಂಡರ್ 19 ಕೂಟದಲ್ಲಿ ಕಶ್ವಿ ಅರುಣಾಚಲ ಪ್ರದೇಶ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು.
ಇದನ್ನೂ ಓದಿ:WPL Auction; ಬರೋಬ್ಬರಿ 1.3 ಕೋಟಿ ರೂ ಬಾಚಿದ ಕರ್ನಾಟಕದ 21 ವರ್ಷದ ವೃಂದಾ ದಿನೇಶ್
ಕೇವಲ 20 ವರ್ಷ ವಯಸ್ಸಿನವರಾಗಿದ್ದರೂ, ಅವರು ಮಹಿಳಾ ಸೀನಿಯರ್ ಟಿ20 ಟ್ರೋಫಿ 2023 ರಲ್ಲಿ ಪ್ರತಿ ಓವರ್ಗೆ 4.14 ರನ್ಗಳ ಎಕಾನಮಿ ದರದಲ್ಲಿ ಏಳು ಪಂದ್ಯಗಳಲ್ಲಿ 12 ವಿಕೆಟ್ಗಳನ್ನು ಕಬಳಿಸಿದರು. ಅಲ್ಲದೆ ಅವರು ಹಾಂಗ್ ಕಾಂಗ್ ಎಸಿಸಿ ಎಮರ್ಜಿಂಗ್ ಟೂರ್ನಮೆಂಟ್ ನಲ್ಲಿ ಭಾರತೀಯ ತಂಡದಲ್ಲಿ ಸ್ಥಾನ ಪಡೆದರು.
A bid to remember!
Gujarat Giants win the bidding war to get Kashvee Gautam for INR 2 Cr 🔥🔥#TATAWPLAuction | @TataCompanies pic.twitter.com/JUlusSI9M8
— Women’s Premier League (WPL) (@wplt20) December 9, 2023
ಮುಂಬೈನಲ್ಲಿ ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಎ ಸರಣಿಯಲ್ಲಿ ಕಶ್ವಿ ಗೌತಮ್ ಭಾಗವಹಿಸಿದ್ದರು. ಅವರು ಭಾರತ ಎ ಪರ ಎರಡು ಪಂದ್ಯಗಳನ್ನು ಆಡಿ ಮೂರು ವಿಕೆಟ್ ಪಡೆದರು.
ಕಳೆದ ವರ್ಷದ ಡಬ್ಲ್ಯೂಪಿಎಲ್ ಹರಾಜಿನಲ್ಲಿ ಕಶ್ವಿ ಗೌತಮ್ ಅವರು ಅನ್ ಸೋಲ್ಡ್ ಆಗಿದ್ದರು. ಆದರೆ ಈ ಬಾರಿಯ ಹರಾಜಿನಲ್ಲಿ ಅತೀ ಹೆಚ್ಚು ಹಣ ಪಡೆದ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.