ಕೃಷಿ ನೀರಾವರಿ ಕೆರೆಯಲ್ಲಿ ಲಿಖಿತ್ ಈಜು ಅಭ್ಯಾಸ !

ಪುತ್ತೂರಿನ ವಿಟ್ಲದಲ್ಲಿ ಸಿಕ್ಕಿಹಾಕಿಕೊಂಡ ರಾಜ್ಯದ 15 ಈಜುಪಟುಗಳು; ಎರಡು ದಿನಗಳ ಶಿಬಿರಕ್ಕೆ ಬಂದವರು ಎರಡು ತಿಂಗಳಿನಿಂದ ಲಾಕ್‌ಡೌನ್‌

Team Udayavani, Apr 18, 2020, 6:15 AM IST

ಕೃಷಿ ನೀರಾವರಿ ಕೆರೆಯಲ್ಲಿ ಲಿಖಿತ್ ಈಜು ಅಭ್ಯಾಸ !

ಬೆಂಗಳೂರು: ಒಲಿಂಪಿಕ್ಸ್‌ಗೆ ಆಯ್ಕೆಯಾಗಬಲ್ಲ ಸಾಮರ್ಥ್ಯ ಹೊಂದಿರುವ ರಾಜ್ಯದ ಖ್ಯಾತ ಈಜುಪಟು ಎಸ್‌.ಪಿ.ಲಿಖಿತ್ ಸೇರಿದಂತೆ 15 ಮಂದಿ ಈಜುಪಟುಗಳು ಲಾಕ್‌ಡೌನ್‌ನಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಮೀಪದ ವಿಟ್ಲದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ.

ಹೌದು, ಕೇವಲ ಎರಡು ದಿನಗಳ ಶಿಬಿರಕ್ಕೆ ಎಂದು ಬಂದವರು ಇದೀಗ ಎರಡು ತಿಂಗಳಿನಿಂದ ಕಾಡಿನ ಸಮೀಪ ಬಂಧಿಯಾಗಿದ್ದಾರೆ.

ಕೆರೆಯೇ ಈಜು ಕೇಂದ್ರ
ಕೋಚ್‌ ಪಾರ್ಥ ವಾರಣಾಸಿ ಲಿಖೀತ್‌ ಅವರನ್ನು ಒಲಿಂಪಿಕ್ಸ್‌ಗೆ ತಯಾರಿ ನಡೆಸುತ್ತಿದ್ದಾರೆ. ಫೆಬ್ರವರಿಯಲ್ಲಿ ಹೆಚ್ಚುವರಿ ತರಬೇತಿಗಾಗಿ ಅವರ ಹುಟ್ಟೂರಾದ ವಿಟ್ಲದ ಅಡ್ಯನಡ್ಕದಲ್ಲಿನ ತಮ್ಮ ಕೃಷಿ ಭೂಮಿಗೆ ಬೆಂಗಳೂರಿನಿಂದ 15 ಮಂದಿ ವಿವಿಧ ವಯೋಮಿತಿ ಈಜು ಪಟುಗಳ ತಂಡವನ್ನು ಕರೆದುಕೊಂಡು ಹೋಗಿದ್ದರು. ಅವರಲ್ಲಿ 21 ವರ್ಷದ ಎಸ್‌.ಪಿ.ಲಿಖೀತ್‌ ಕೂಡ ಒಬ್ಬರು.

ಎರಡು ದಿನಗಳ ತರಬೇತಿ ಬಳಿಕ ಇನ್ನೇನು ಮತ್ತೆ ಬೆಂಗಳೂರಿಗೆ ಹೊರಡಬೇಕು ಎನ್ನುವಷ್ಟರಲ್ಲಿ ಕೋವಿಡ್ 19 ಮಹಾಮಾರಿ ಸೋಂಕಿನ ಸುದ್ದಿ ಕೇಳಿ ಎಲ್ಲ ಅಲ್ಲೇ ಉಳಿದುಕೊಂಡರು. ಕೆಲ ದಿನಗಳಲ್ಲಿ ಎಲ್ಲವೂ ಸರಿಯಾಗಬಹುದೆಂದು ಹಳ್ಳಿಯಲ್ಲಿಯೇ ಖುಷಿಪಡಲು ಅವರೆಲ್ಲ ನಿಂತರು. ಆದರೆ ಕೋವಿಡ್ 19 ಸೋಂಕಿನ ಪ್ರಮಾಣ ಏರಿಕೆಯಾಗಿದ್ದರಿಂದ ಕೇಂದ್ರ ಸರಕಾರ ಲಾಕ್‌ಡೌನ್‌ ಘೋಷಿಸಿತು. ಅಲ್ಲಿಂದ ಯಾರಿಗೂ ವಾಪಸ್‌ ಬೆಂಗಳೂರಿಗೆ ಮರಳಲು ಸಾಧ್ಯವಾಗಿರಲಿಲ್ಲ. ಈ ವೇಳೆ ಕೋಚ್‌ ಪಾರ್ಥ ವಾರಣಾಸಿ ಸುಮ್ಮನೆ ಕುಳಿತಿಲ್ಲ, ತಮ್ಮ ಕೃಷಿಗೆ ನೀರುಣಿಸುವ ಕೆರೆಯನ್ನೇ ಈಜುಕೊಳವಾಗಿ ಮಾರ್ಪಡಿಸಿ ಈಜು ಪಟುಗಳ ತರಬೇತಿಗೆ ತೊಂದರೆಯಾಗದಂತೆ ನೋಡಿಕೊಂಡು ಲಾಕ್‌ಡೌನ್‌ ಸಮಯ ವ್ಯರ್ಥವಾಗದಂತೆ ನೋಡಿಕೊಂಡಿದ್ದಾರೆ.

“ಯಾವುದೇ ಆತಂಕವಿಲ್ಲ’
ಈ ಬಗ್ಗೆ ಉದಯವಾಣಿ ಜತೆ ಮಾತನಾಡಿದ ಲಿಖೀತ್‌ ಪ್ರತಿಕ್ರಿಯಿಸಿದ್ದು ಹೀಗೆ, “ನನ್ನ ಮನೆ ಇರುವುದು ಬೆಂಗಳೂರಿನ ಗಿರಿನಗರದಲ್ಲಿ, ನೆಟ್ಟಕಲ್ಲಪ್ಪ ಈಜು ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದೇನೆ, ಚಿಕ್ಕವನಾಗಿದ್ದಾಗಿನಿಂದಲೇ ನಾನು ಈಜು ತರಬೇತಿ ಆರಂಭಿಸಿರುವುದರಿಂದ ಮನೆಯಲ್ಲಿ ಇದ್ದದ್ದು ತೀರ ಅಪರೂಪ, ಹೀಗಾಗಿ ನನ್ನ ಬಗ್ಗೆ ಮನೆಯವರು ಹೆಚ್ಚಿನ ಯೋಚನೆ ಮಾಡುವುದಿಲ್ಲ, ಆದರೆ ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಆಗಿರುವುದರಿಂದ ನನ್ನ ತಂದೆ-ತಾಯಿಗೆ ಹೆಚ್ಚಿನ ಆತಂಕವಿದೆ. ದಿನಕ್ಕೆ ಒಂದು ಸಲ ಫೋನ್‌ ಮಾಡಿ ವಿಚಾರಿಸುತ್ತಾರೆ. ಇಲ್ಲಿ ಸಿಕ್ಕಿಹಾಕಿಕೊಂಡಿರುವ ಬಗ್ಗೆ ಬೇಸರವಿಲ್ಲ, ನಮ್ಮ ಕೋಚ್‌ ನಮಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಯನ್ನು ಅವರ 100 ಎಕರೆ ಕೃಷಿ ಭೂಮಿಯಲ್ಲೇ ಮಾಡಿಕೊಟ್ಟಿದ್ದಾರೆ. ಕೋವಿಡ್ 19 ಇರುವುದರಿಂದ ಅವರು ನಮಗೆ ಹೊರಗೆಲ್ಲೂ ಹೋಗಲು ಬಿಡುವುದಿಲ್ಲ, ಏನೇ ಬೇಕಿದ್ದರೂ ಮನೆಗೆ ಅವರೇ ತಂದುಕೊಡುತ್ತಾರೆ, ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಜತೆಗೆ ಇಲ್ಲಿನ ಹಸಿರ ವಾತಾವರಣ ಮನಸ್ಸಿಗೆ ತುಂಬಾ ಹಿಡಿಸಿದೆ, ಕಾಡಿನ ಸಮೀಪ ಇರುವುದರಿಂದ ವಿವಿಧ ಬಗೆಯ ಪಕ್ಷಿ, ಚೇಳು, ನವಿಲು, ಹಾವು ಇತ್ಯಾದಿಗಳನ್ನು ನೋಡಿ ಸಂಭ್ರಮ ಪಡುತ್ತಿದ್ದೇವೆ’ ಎಂದರು.

ಲಿಖಿತ್ ಗೆ ಒಲಿಂಪಿಕ್ಸ್‌ ಅರ್ಹತೆಯ ಭರವಸೆ
ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಳ್ಳುವ ಭರವಸೆಯನ್ನು ಲಿಖಿತ್ ಹೊಂದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, “ಒಲಿಂಪಿಕ್ಸ್‌ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ. ಇದರಿಂದ ನನಗೆ ಅರ್ಹತೆ ಪಡೆದುಕೊಳ್ಳಲು ಅವಕಾಶ ಸಿಕ್ಕಿದೆ. 100 ಮೀ. ಬ್ರೆಸ್ಟ್‌ ಸ್ಟ್ರೋಕ್‌ನಲ್ಲಿ 59.93 ಸೆಕೆಂಡ್ಸ್‌ ನಲ್ಲಿ ಗುರಿ ತಲುಪಿದರೆ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಳ್ಳಬಹುದು. ಸದ್ಯ ನನ್ನ ಟೈಮಿಂಗ್ಸ್‌ 100 ಮೀ. ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ 1 ನಿಮಿಷ 2.02 ಸೆಕೆಂಡ್ಸ್‌ ಆಗಿದೆ. ಇನ್ನು ಸಾಕಷ್ಟು ಸುಧಾರಿಸಿಕೊಳ್ಳಬೇಕಿದೆ ಎಂದರು. ಲಿಖೀತ್‌ ಕಳೆದ ವರ್ಷ ಮಲೇಷ್ಯಾ ಈಜು ಕೂಟದಲ್ಲಿ ಪದಕ ಗೆದ್ದಿದ್ದರು ಜತೆಗೆ ಹಲವಾರು ರಾಜ್ಯ, ರಾಷ್ಟ್ರೀಯ ಕೂಟದಲ್ಲಿ ಮಿಂಚಿದ್ದಾರೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.