ಪೂರ್ಣಾವಧಿ ಕೋಚ್‌ ಆಗುವತ್ತ ಧೋನಿ ಹೆಜ್ಜೆ

ಜು.2ರಿಂದ ಧೋನಿ ಆನ್‌ಲೈನ್‌ ಕ್ರಿಕೆಟ್‌ ಅಕಾಡೆಮಿ ಪ್ರಾರಂಭ ; ಹಠಾತ್‌ ನಿವೃತ್ತಿ ಘೋಷಿಸಿದರೂ ಅಚ್ಚರಿ ಇಲ್ಲ!

Team Udayavani, Jun 29, 2020, 10:29 AM IST

ಪೂರ್ಣಾವಧಿ ಕೋಚ್‌ ಆಗುವತ್ತ ಧೋನಿ ಹೆಜ್ಜೆ

ರಾಂಚಿ: ಭಾರತವನ್ನು ಎರಡು ವಿಶ್ವಕಪ್‌ ಕ್ರಿಕೆಟ್‌ ಕೂಟದಲ್ಲಿ ಯಶಸ್ವಿಯಾಗಿ ಮುನ್ನಡೆಸಿದ ಎಂ.ಎಸ್‌.ಧೋನಿ ನಿವೃತ್ತಿ ವಿಚಾರವಾಗಿ ವರ್ಷಗಳಿಂದ ವಿವಿಧ ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟವಾಗುತ್ತಲೇ ಇದೆ. ಆದರೆ ಧೋನಿ ಇದಕ್ಕೆಲ್ಲ ತಲೆ ಕೆಡಿಸಿಕೊಂಡಿಲ್ಲ, ಮೌನವಾಗಿಯೇ ಏನೂ ಆಗಿಲ್ಲ ಎನ್ನುವಂತೆ ತಮ್ಮ ಪಾಡಿಗೆ ತಾವಿದ್ದಾರೆ. ಅಂತಹ ಧೋನಿ ಇದೀಗ ಪೂರ್ಣಾವಧಿ ಕ್ರಿಕೆಟ್‌ ತರಬೇತುದಾರನಾಗುವತ್ತ ಹೆಜ್ಜೆ ಇಟ್ಟಿದ್ದಾರೆ.  ಹೌದು, ಸದ್ಯ ಜಾರ್ಖಂಡ್‌ನ‌ಲ್ಲಿರುವ ಧೋನಿ ಜುಲೈ2 ರಂದು ಆನ್‌ಲೈನ್‌ ಕ್ರಿಕೆಟ್‌ ಅಕಾಡೆಮಿಯನ್ನು ಆರಂಭಿಸುತ್ತಿದ್ದಾರೆ. ಇದರೊಂದಿಗೆ ಧೋನಿ ಮುಂದಿನ ದಿನಗಳಲ್ಲಿ ಕ್ರಿಕೆಟ್‌ ಜೀವನಕ್ಕೆ ಹಠಾತ್‌ ನಿವೃತ್ತಿ ಘೋಷಿಸಿದರೂ ಅಚ್ಚರಿ ಇಲ್ಲ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.

ಸುಸಜ್ಜಿತ ಅಕಾಡೆಮಿ: ಜಾರ್ಖಂಡ್‌ನ‌ಲ್ಲಿ ಅಕಾಡೆಮಿಗೆ ಸ್ವತಃ ಧೋನಿ ಚಾಲನೆ ನೀಡಲಿದ್ದಾರೆ. ಒಟ್ಟಾರೆ ಯೋಜನೆಯ ಮುಖ್ಯಸ್ಥನಾಗಿ ಧೋನಿ ಇರಲಿದ್ದಾರೆ. ಇವರೊಂದಿಗೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟ್‌ ದಿಗ್ಗಜ ಡ್ಯಾರಿಲ್‌ ಕುಲ್ಲಿನಾನ್‌ ಇದ್ದಾರೆ. ಇವರು ಅಕಾಡೆಮಿಯ ಕೋಚಿಂಗ್‌ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಈಗಾಗಲೇ ಅಕಾಡೆಮಿಗೆ 200ಕ್ಕೂ ಹೆಚ್ಚು ತರಬೇತುದಾರರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಆನ್‌ ಲೈನ್‌ ಮೂಲಕ ಸದ್ಯ ತರಬೇತಿ ಆರಂಭಿಸಲಾಗುತ್ತಿದೆ. ಆದರೆ ಅದರ ರೂಪುರೇಷ, ಕಾರ್ಯ ವೈಖರಿ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.  ಧೋನಿ 2017ರಲ್ಲಿ ದುಬೈನಲ್ಲಿ ಕ್ರಿಕೆಟ್‌ ಅಕಾಡೆಮಿ ತೆರೆದಿದ್ದರು. ಆದರೆ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಹೆಚ್ಚು ಬ್ಯುಸಿಯಾಗಿದ್ದರಿಂದ ಧೋನಿಗೆ ಅದರತ್ತ ಹೆಚ್ಚಿನ ಗಮನ ಕೊಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಕಾಡೆಮಿ ಅರ್ಧಕ್ಕೆ ನಿಂತು ಹೋಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಪೂರ್ಣಾವಧಿ ಕೋಚ್‌ ಆಗುವತ್ತ ಧೋನಿ ಹೆಜ್ಜೆ

ಕಣಕ್ಕಿಳಿಯಲಿದ್ದಾರೆ ಧೋನಿ?: ಯುವಕರಿಗೆ ಕ್ರಿಕೆಟ್‌ ಪಾಠಗಳನ್ನು ಕಲಿಸಿಕೊಡಲು ಸ್ವತಃ ಧೋನಿಯೇ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ. ಹಿಂದೆ ಧೋನಿ ಸತತ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೂಟಗಳಲ್ಲಿ ಬ್ಯುಸಿಯಾಗಿರುತ್ತಿದ್ದರು ,ಆದರೆ  ಸದ್ಯ ಧೋನಿ ಮನೆಯಲ್ಲೇ ಇದ್ದಾರೆ. ಹೀಗಾಗಿ ನೇರವಾಗಿಅಕಾಡೆಮಿ ಕೆಲಸಗಳಲ್ಲಿ ಹೆಚ್ಚು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.

ಐಪಿಎಲ್‌ ನಡೆಯದಿದ್ದರೆ ಧೋನಿ ಕ್ರಿಕೆಟ್‌ಗೆ ನಿವೃತ್ತಿ?
ನಿವೃತ್ತಿ ವಿಚಾರಗಳು ಧೋನಿಯ ಸುತ್ತ ತಿರುಗುತ್ತಲೇ ಇದೆ. ಆದರೆ ಧೋನಿ ಮಾತ್ರ ಇದಕ್ಕೆಲ್ಲ ಕ್ಯಾರೆ ಎಂದಿಲ್ಲ, ತಮ್ಮ ಕುಟುಂಬದೊಂದಿಗೆ ನೆಮ್ಮದಿಯಾಗಿ ಕಾಲ ಕಳೆಯುತ್ತಿದ್ದಾರೆ. 13ನೇ
ಆವೃತ್ತಿ ಐಪಿಎಲ್‌ನಲ್ಲಿ ಧೋನಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಪ್ರತಿನಿಧಿಸು ವುದು ಖಾತ್ರಿಯಾಗಿತ್ತು. ಆದರೆ ಐಪಿಎಲ್‌ ನಡೆಯು ವ ಬಗ್ಗೆ ಇನ್ನೂ ಖಚಿತತೆ ಇಲ್ಲ. ಒಂದು ವೇಳೆ ಐಪಿಎಲ್‌ ನಡೆಯ ದಿದ್ದರೆ ಧೋನಿಗೆ ಮುಂಬರುವ ಟಿ20 ವಿಶ್ವಕಪ್‌ನ ಭಾರತ ತಂಡದಲ್ಲಿ ಸ್ಥಾನ ಸಿಗುವುದು ಕಷ್ಟವಾಗಬ ಹುದು, ಇದನ್ನೆಲ್ಲ ಗಮನಿಸುತ್ತಿದ್ದರೆ ಐಪಿಎಲ್‌ ಆಯೋಜನೆಯಾಗದಿ ದ್ದರೆ ಧೋನಿ ನಿವೃತ್ತಿ
ಹೇಳುವ ಸಾಧ್ಯತೆಗಳೇ ಹೆಚ್ಚು ಎನ್ನಲಾಗಿದೆ.
ಸಾವಯವ ಕೃಷಿ: ವಿಡಿಯೊ ವೈರಲ್‌
ಸಾವಿರಾರು ಕೋಟಿ ರೂ. ಒಡೆಯನಾದರೂ ಧೋನಿಗೆ ಸ್ವಲ್ಪವೂ ಅಹಂಕಾರವೆಂಬುದು ಇಲ್ಲ. ಸಮಯ ಬಂದರೆ ಟ್ರ್ಯಾಕ್ಟರ್‌ ಹಿಡಿದು ಉಳುಮೆ ಮಾಡಲು ಕೂಡ ಸಿದ್ಧ ಎನ್ನುವುದನ್ನು ಧೋನಿ ತೋರಿಸಿಕೊಟ್ಟಿದ್ದಾರೆ. ರಾಂಚಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ಧೋನಿ ಸಾವಯವ ಕೃಷಿಯಲ್ಲಿ ನಿರತರಾಗಿದ್ದಾರೆ. ಟ್ರ್ಯಾಕ್ಟರ್‌ ಸ್ಟಾರ್ಟ್‌ ಮಾಡಿ ಧೋನಿ ಉಳುಮೆ ಮಾಡುತ್ತಿರುವ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ. 2019ರ ವಿಶ್ವಕಪ್‌ ಸೆಮಿಫೈನಲ್‌ ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಧೋನಿ ಅಲ್ಲಿಂದ ಬಳಿಕ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.