IPL; ಆರ್ ಸಿಬಿ ಎದುರು ಮುಂಬೈಗೆ ಅತ್ಯಮೋಘ ಜಯ
ಎದ್ದು ಕಂಡ ಬೌಲಿಂಗ್ ವೈಫಲ್ಯ .. ಅಬ್ಬರ ಆರಂಭಿಸಿದ ಪಾಂಡ್ಯ ಪಡೆ
Team Udayavani, Apr 11, 2024, 11:54 PM IST
ಮುಂಬೈ: ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸೋಲಿನ ಸುಳಿಗೆ ಸಿಕ್ಕಿ ನಲುಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರು ಮುಂಬೈ ಇಂಡಿಯನ್ಸ್ ಗೆ 7 ವಿಕೆಟ್ ಗಳ ಅಮೋಘ ಜಯದ ನಗೆ ಬೀರಿದೆ.
ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್ ಸಿಬಿ 197 ರನ್ ಗಳ ಗುರಿ ಮುಂದಿಟ್ಟಿತು. ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್ , ರೋಹಿತ್ ಶರ್ಮ ಅವರ ಅಬ್ಬರದ ಬ್ಯಾಟಿಂಗ್ ನಿಂದ 15.3 ಓವರ್ ಗಳಲ್ಲೇ 3 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿ ಭರ್ಜರಿ ಗೆಲುವು ಸಾಧಿಸಿತು. ಬೆಂಗಳೂರಿನ ಬೌಲಿಂಗ್ ಕಳಪೆ ಎನ್ನುವುದನ್ನು ಮತ್ತೆ ನಿರೂಪಿಸಿದಂತಾಯಿತು.
ಇಶಾನ್ ಕಿಶನ್ 69(34ಎಸೆತ) ಗಳಿಸಿ ಔಟಾದರೆ, ಸಾಥ್ ನೀಡಿದ ರೋಹಿತ್ 38(24ಎಸೆತ) ಗಳಿಸಿ ಔಟಾದರು. ಆ ಬಳಿಕ ಬಂದ ಸ್ಟಾರ್ ಬ್ಯಾಟ್ಸ್ ಮ್ಯಾನ್ ಸೂರ್ಯಕುಮಾರ್ ಹಳಿಗೆ ಮರಳಿ ತನ್ನ ವೈಭವ ತೋರಿದರು.19 ಎಸೆತಗಳಲ್ಲಿ 52 ರನ್ ಚಚ್ಚಿದರು. ನಾಯಕ ಹಾರ್ದಿಕ್ ಪಾಂಡ್ಯ6 ಎಸೆತಗಳಲ್ಲಿ 21 ರನ್ ಕೊಡುಗೆ ನೀಡಿದರು. ತಿಲಕ್ ವರ್ಮ ಔಟಾಗದೆ 16 ರನ್ ಗಳಿಸಿದರು. 5 ವಿಕೆಟ್ ಕಿತ್ತ ವೇಗಿ ಬುಮ್ರಾ ಪಂದ್ಯ ಶ್ರೇಷ್ಠ ಎನಿಸಿಕೊಂಡರು.
ಇದನ್ನೂ ಓದಿ: IPL; ಅಬ್ಬರಿಸಿದ ಕಾರ್ತಿಕ್: ಮುಂಬೈ ಗೆ 197 ರನ್ ಗುರಿ ನೀಡಿದ ಆರ್ ಸಿಬಿ
RCB ಆಡಿದ 6 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಸೋತು ಮುಂದಿನ ಹಾದಿ ಕಠಿಣ ಮಾಡಿಕೊಂಡಿದೆ. ಮುಂಬೈ 5 ಪಂದ್ಯಗಳಲ್ಲಿ 2 ನೇ ಜಯ ತನ್ನದಾಗಿಸಿಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.