![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Apr 29, 2018, 6:30 AM IST
ಹೊಸದಿಲ್ಲಿ: ಟ್ವೀಟರ್ನಲ್ಲಿ ಭಾವುಕ ಟ್ವೀಟೊಂದನ್ನು ಮಾಡಿರುವ ಗೌತಮ್ ಗಂಭೀರ್ ಅದರಲ್ಲಿ ಪರೋಕ್ಷವಾಗಿ ತನ್ನ ನೋವಿನ ಆಳವನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ಗಂಭೀರ್ ಸಿಆರ್ಪಿಎಫ್ ಯೋಧರ ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದರು. ನಕ್ಸಲರ ದಾಳಿಯಲ್ಲಿ ಮೃತರಾದ ಯೋಧರ ಆ ಮಕ್ಕಳನ್ನು ನೋಡಿದಾಗ ನನ್ನ ದುಃಖ ಅದಕ್ಕಿಂತ ಬಹಳ ಕಡಿಮೆ ಎನಿಸಿತು ಎಂದು ಗಂಭೀರ್ ಹೇಳಿಕೊಂಡಿದ್ದಾರೆ. ಇದು ಟ್ವೀಟರ್ನಲ್ಲಿ ಬಹಳ ಸದ್ದು ಮಾಡುತ್ತಿದೆ.
ಹಿಂದಿನ 6 ಐಪಿಎಲ್ ಆವೃತ್ತಿಯಲ್ಲಿ ಕೋಲ್ಕತಾ ತಂಡವನ್ನು ಮುನ್ನಡೆಸಿದ್ದ ಗಂಭೀರ್ ಅದರಲ್ಲಿ 2 ಬಾರಿ ತಂಡ ಟ್ರೋಫಿ ಎತ್ತಿ ಹಿಡಿಯಲು ಕಾರಣವಾಗಿದ್ದರು. ಆದರೆ ಈ ಬಾರಿ ಡೆಲ್ಲಿ ತಂಡಕ್ಕೆ ಆಯ್ಕೆಯಾಗಿದ್ದ ಅವರು ನಾಯಕತ್ವವನ್ನು ವಹಿಸಿದ್ದರು. ಅವರ ನೇತೃತ್ವದಲ್ಲಿ 6 ಪಂದ್ಯವಾಡಿ 5ರಲ್ಲಿ ಡೆಲ್ಲಿ ಸೋತು ಹೋಗಿತ್ತು. ಪರಿಣಾಮ ಅವರು ನಾಯಕತ್ವ ಬಿಡುವುದರ ಜತೆಗೆ, ತಂಡದಿಂದಲೂ ಹೊರಗುಳಿದರು.
ಸ್ವತಃ ಗಂಭೀರ್ ಕೂಡ ಫಾರ್ಮ್ ಕುಸಿತ ಅನುಭವಿಸಿ ಬಹಳ ನೋವಿನಲ್ಲಿದ್ದಾರೆ. ಇದೇ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಗಂಭೀರ್, ಆ ಮಕ್ಕಳ ಕಣ್ಣಿನಲ್ಲಿ ನೀರಿತ್ತು, ಅವರ ಹೃದಯದಲ್ಲಿ ದುಃಖ ತುಂಬಿಕೊಂಡಿತ್ತು. ಅವರೊಂದಿಗೆ ಮಾತನಾಡಿದಾಗ ನನ್ನ ದುಃಖ ಅದಕ್ಕಿಂತ ಬಹಳ ಕಡಿಮೆ ಎನಿಸಿತು ಎಂದು ಹೇಳಿಕೊಂಡಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.