ರಾಷ್ಟ್ರೀಯ ಸೈಕ್ಲಿಂಗ್‌ ಕೂಟದಲ್ಲಿ ಸೈಕ್ಲಿಸ್ಟ್‌ಗಳ ಪರದಾಟ


Team Udayavani, Jan 31, 2019, 12:55 AM IST

ban31011911medn.jpg

ಜೈಪುರ: ರಾಜಸ್ಥಾನದ ಜೈಪುರದಲ್ಲಿ ಬುಧವಾರದಿಂದ ರಾಷ್ಟ್ರೀಯ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ ಆರಂಭವಾಗಿದೆ. ಇದರಲ್ಲಿ ಭಾಗವಹಿಸುತ್ತಿರುವ ಸೈಕ್ಲಿಸ್ಟ್‌ಗಳ ಸಂಕಷ್ಟವನ್ನು ಮಾತ್ರ ದೇವರೇ ಸರಿಪಡಿಸಬೇಕು! ಸವಾಯ್‌ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿನ ವೆಲೊಡ್ರೋಮ್‌ (ಸೈಕ್ಲಿಂಗ್‌ ಅಂಕಣ) ಬಳಿ ರಾಜಸ್ಥಾನ ಸೈಕ್ಲಿಸ್ಟ್‌ಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಒಂದು ಚಿಕ್ಕ ಹಾಲ್‌ನಲ್ಲಿ 30 ಸ್ಪರ್ಧಿಗಳು ತಂಗಿದ್ದಾರೆ. ಅವರಿಗೆಲ್ಲ ಹಾಸಿಕೊಳ್ಳಲು ಸರಿಯಾದ ಹಾಸಿಗೆಗಳಿಲ್ಲ. ನೀಡಿರುವ ಹಾಸಿಗೆಗಳಿಗೆ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಉಷ್ಣಾಂಶವನ್ನು ತಡೆಯುವ ಶಕ್ತಿಯಿಲ್ಲ…ಹೀಗೆಂದು ಆಂಗ್ಲ ದಿನಪತ್ರಿಕೆ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಅಚ್ಚರಿಯೆಂದರೆ ಮಾಡಿರುವ ವಸತಿ ವ್ಯವಸ್ಥೆಯಲ್ಲೂ ತಾರತಮ್ಯವಿದೆ. ಬೇರೆ ಬೇರೆ ತಂಡಗಳಲ್ಲಿರುವ ಅಂತಾರಾಷ್ಟ್ರೀಯ ಸೈಕ್ಲಿಸ್ಟ್‌ಗಳಿಗೆ ಹೋಟೆಲ್‌ನಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಮಹಾರಾಷ್ಟ್ರ ತಂಡದಲ್ಲಿ ಮಯೂರ್‌ ಪವಾರ್‌, ಅಭಿಷೇಕ್‌ ಖಾಸಿತ್‌ ಎಂಬ ಅಂತಾರಾಷ್ಟ್ರೀಯ ಚಿನ್ನ ಗೆದ್ದಿರುವ ಇಬ್ಬರು ಸೈಕ್ಲಿಸ್ಟ್‌ಗಳಿದ್ದಾರೆ. ಅವರಿಗೆ ಹೋಟೆಲ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಆದರೆ 22 ಮಂದಿಯಿರುವ ಅವರ ತಂಡದ ಇತರೆ ಸದಸ್ಯರಿಗೆ, ಸವಾಯ್‌ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿರುವ ಪುಟ್ಟ ಹಾಲ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಹಲವು ಅಂತಾರಾಷ್ಟ್ರೀಯ ತಾರೆಯರೇ ಇರುವ, ರೈಲ್ವೇಸ್‌, ಸರ್ವಿಸಸ್‌ನಂತಹ ತಂಡಗಳು ತಮ್ಮ ವಸತಿ ವ್ಯವಸ್ಥೆಯನ್ನು ತಾವೇ ಮಾಡಿಕೊಂಡಿವೆ. ಸೂಕ್ತ ವಸತಿ ವ್ಯವಸ್ಥೆಯಿಲ್ಲದ ಸ್ಪರ್ಧಿಗಳು ತಮ್ಮ ಭವಿಷ್ಯದ ಬಗೆಗಿನ ಭೀತಿಯಿಂದ ಆಕ್ಷೇಪ ಎತ್ತಲು ಹಿಂಜರಿಯುತ್ತಿದ್ದಾರೆ.

ಈ ಬಗ್ಗೆ ರಾಜಸ್ಥಾನ ಸೈಕ್ಲಿಂಗ್‌ ಸಂಸ್ಥೆಯನ್ನು ಪ್ರಶ್ನಿಸಿದರೆ, ಅದರ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ನಮಗಿರುವ 75 ಲಕ್ಷ ರೂ. ಹಣದಲ್ಲೇ ಎಲ್ಲವನ್ನೂ ನಡೆಸಬೇಕು. ಇದರಲ್ಲಿ ಹಲವಾರು ವರ್ಷಗಳಿಂದ ಬಳಸದೇ ಹಾಗೇ ಉಳಿದುಕೊಂಡಿರುವ ವೆಲೊಡ್ರೋಮನ್ನೂ ನವೀಕರಣ ಮಾಡಬೇಕು ಎಂದು ತಮ್ಮ ಪರಿಸ್ಥಿತಿ ಹೇಳಿಕೊಳ್ಳುತ್ತಾರೆ.

ಸೈಕಲ್‌ ಬಿಟ್ಟಿರಲು ಸಿದ್ಧವಿಲ್ಲ: ಇದೇ ವೇಳೆ ಇನ್ನೊಂದು ಸ್ವಾರಸ್ಯಕರ ಸಂಗತಿಯೆಂದರೆ, ಸೈಕ್ಲಿಸ್ಟ್‌ಗಳು ಹೋಟೆಲ್‌ಗ‌ಳಲ್ಲಿ ಉಳಿದುಕೊಳ್ಳಲು ಒಪ್ಪುವುದಿಲ್ಲವಂತೆ. ಹೋಟೆಲ್‌ಗ‌ಳು ಸೈಕಲ್‌ ಒಳತರಲು ಅವಕಾಶ ನೀಡುವುದಿಲ್ಲ. ಆದರೆ ಸೈಕ್ಲಿಸ್ಟ್‌ಗಳು ಒಂದು ನಿಮಿಷವೂ ಸೈಕಲ್‌ ಬಿಟ್ಟು ಇರಲು ಸಿದ್ಧರಿಲ್ಲ. ಹೀಗಿದ್ದರೆ ವ್ಯವಸ್ಥೆ ಮಾಡುವುದು ಹೇಗೆ? ಎಂದು ಅಧಿಕಾರಿಗಳು ಪ್ರಶ್ನಿಸುತ್ತಾರೆ. ಕೇಂದ್ರ ಕ್ರೀಡಾಮಂತ್ರಿ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌, ಕ್ರೀಡಾಪಟುಗಳೇ ನಮ್ಮ ಕೇಂದ್ರವಾಗಬೇಕು ಎಂದು ಆಶಿಸಿದ್ದಾರೆ. ಆದರೆ ಸದ್ಯದ ಸ್ಥಿತಿಯಲ್ಲಿ ಅಂತಹ ಪರಿಸ್ಥಿತಿಯಿಲ್ಲ ಎನ್ನುವುದು ಖೇದಕರ ಎಂದು ಕ್ರೀಡಾಭಿಮಾನಿಗಳು ಬೇಸರಿಸಿದ್ದಾರೆ.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.