ತನ್ವೀರ್‌ ಅಮೆರಿಕದಿಂದ ಗಡೀಪಾರು


Team Udayavani, Dec 9, 2017, 11:49 AM IST

09-36.jpg

ನ್ಯೂಯಾರ್ಕ್‌: ವಿಶ್ವ ಸ್ನೋ ಶೂ ಸ್ಪರ್ಧಿ, 25 ವರ್ಷದ ಕಾಶ್ಮೀರದ ತನ್ವೀರ್‌ ಹುಸೇನ್‌ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಾನು ತಪ್ಪಿತಸ್ಥ ಎಂದು ಅಮೆರಿಕದ ಎಸೆಕ್ಸ್‌ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದಾರೆ. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದರಿಂದ 10 ವರ್ಷ ಜೈಲು ಶಿಕ್ಷೆ ಪಾಲಾಗುವ ಭೀತಿಗೊಳಗಾಗಿದ್ದ ಅವರು ಸದ್ಯ ಅದರಿಂದ ಪಾರಾಗಿದ್ದು ಭಾರತಕ್ಕೆ ಗಡೀಪಾರಾಗಲಿದ್ದಾರೆ. ಹುಸೇನ್‌ ತಾನು ತಪ್ಪಿತಸ್ಥ, ತನ್ನನ್ನು ತಾಯ್ನಾಡಿಗೆ ಕಳುಹಿಸಿಕೊಡಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡ ಪರಿಣಾಮ ಗಡೀಪಾರು ಮಾಡುವ ನಿರ್ಣಯ ತೆಗೆದುಕೊಳ್ಳಲಾಗಿದೆ. 

ಆಗಿದ್ದೇನು?: ಈ ವರ್ಷ ಫೆಬ್ರವರಿ 23ರಿಂದ 25ವರೆಗೆ ನ್ಯೂಯಾರ್ಕ್‌ನ ಸರನಾಕ್‌ ಲೇಕ್‌ ಎಂಬಲ್ಲಿ ವಿಶ್ವ ಸ್ನೋ ಶೂ ಸ್ಪರ್ಧೆಯಲ್ಲಿ ಭಾಗವಹಿಸಲು ಕಾಶ್ಮೀರದ ತನ್ವೀರ್‌ ಹುಸೇನ್‌ ತೆರಳಿದ್ದರು. ಹಿಮಾಚ್ಛಾದಿತ ಸ್ಥಳದಲ್ಲಿ ವೇಗವಾಗಿ ನಡೆಯುವುದು ಸ್ಪರ್ಧೆಯ ಗುರಿ. ಭಾರತದಿಂದ ಈ ಕೂಟದಲ್ಲಿ ಭಾಗವಹಿಸುವ ಏಕೈಕ ಸ್ಪರ್ಧಿಯಾಗಿದ್ದರಿಂದ ತನ್ವೀರ್‌ಗೆ ನ್ಯೂಯಾರ್ಕ್‌ನಲ್ಲಿ ಭಾರೀ ಗೌರವ ಸಿಕ್ಕಿತ್ತು. ಆದರೆ ಫೆ.27ರಂದು ಸೇವಕಿಯಾಗಿ ಬಂದಿದ್ದ 12 ವರ್ಷದ ಬಾಲಕಿಯ ಕೆಲವು ಭಾಗಗಳಿಗೆ ಕೈಹಾಕಿದ್ದು, ಆಕೆಯನ್ನು ಚುಂಬಿಸಿದ ಆರೋಪದಡಿ ಅವರನ್ನು ಬಂಧಿಸಲಾಗಿತ್ತು. ಇದನ್ನು ತನ್ವೀರ್‌ ನಿರಾಕರಿಸಿ, ತನ್ನ ವಿರುದ್ಧ ಪಿತೂರಿ ಮಾಡಲಾಗಿದೆ, ಅದನ್ನು ಸಾಬೀತು ಮಾಡಿಯೇ ಭಾರತಕ್ಕೆ ಹಿಂತಿರುಗುತ್ತೇನೆಂದಿದ್ದರು. 

ದಿನೇ ದಿನೇ ತನ್ವೀರ್‌ ವಿರುದ್ಧ ಆರೋಪ ತೀವ್ರವಾಗುತ್ತಲೇ ಹೋಯಿತು. ಅಪ್ರಾಪೆ¤ಯೊ ಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಆಕೆಯ ಗೌರವವನ್ನು ಹಾಳು ಮಾಡಲು ಯತ್ನಿಸಿದ ಪ್ರಕರಣದಡಿ ತನ್ವೀರ್‌ಗೆ ಹತ್ತು ವರ್ಷ ಜೈಲಾಗುವ ಸಾಧ್ಯತೆಯಿತ್ತು. ಸದ್ಯ ಅವರೇ ತಾನು ತಪ್ಪಿತಸ್ಥ ಎಂದು ಒಪ್ಪಿಕೊಂಡು, ತನ್ನನ್ನು ಭಾರತಕ್ಕೆ ಕಳುಹಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.

ತಮ್ಮ ತಾಯಿ ಶಪಿರೊ ಅನಾರೋಗ್ಯ ಪೀಡಿತರಾಗಿದ್ದು, ತಾನು ಮರಳುವರೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಿಲ್ಲವೆಂದು ಕುಳಿತಿದ್ದಾರೆ, ಸೋದರಿ ತಮ್ಮ ಮದುವೆಯನ್ನೇ ಮುಂದೂಡಿದ್ದಾರೆ. ಆದ್ದರಿಂದ ತಾನು ಭಾರತಕ್ಕೆ ತೆರಳಲೇಬೇಕು ಎಂದು
ತನ್ವೀರ್‌ ಎಸೆಕ್ಸ್‌ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಇದನ್ನು ಗಮನಿಸಿದ ನ್ಯಾಯಾಲಯ ಅವರ ವೀಸಾ ಅವಧಿ ಆಗಸ್ಟ್‌ನಲ್ಲೇ
ಮುಗಿದಿರುವುದರಿಂದ ಭಾರತಕ್ಕೆ ಗಡೀಪಾರು ಮಾಡಲು ತೀರ್ಮಾನಿಸಿದೆ. ಆದರೆ ಇದನ್ನು ಅಲ್ಲಿನ ಸ್ಥಳೀಯ ಪತ್ರಿಕೆಗಳು ಟೀಕಿಸಿವೆ. ಸರಳವಾಗಿ ತನ್ವೀರ್‌ ರನ್ನು ಭಾರತಕ್ಕೆ ಮರಳಲು ಬಿಡಬಹುದಿತ್ತು. ಗಡೀಪಾರು ಪ್ರಕ್ರಿಯೆಗೆ ಇನ್ನೂ ಒಂದು ತಿಂಗಳು ಬೇಕಾಗುತ್ತದೆ ಎನ್ನುವುದು ಪತ್ರಿಕೆಗಳ ಆಕ್ಷೇಪ. ಇದೆಲ್ಲದರ ನಡುವೆ ತನ್ವೀರ್‌ ತಾಯಿ ಪ್ರತಿಕ್ರಿಯಿಸಿ, ತನ್ನ ಮಗಳ ಪ್ರಕರಣದಿಂದ ಬೇಸತ್ತು ತಪ್ಪಿತಸ್ಥ ಎಂದು ಒಪ್ಪಿಕೊಳ್ಳಲು ತೀರ್ಮಾನಿಸಿದ್ದಾನೆ. ಆತ ನಿರಪರಾಧಿ ಎಂದು ಸಮರ್ಥಿಸಿಕೊಂಡಿದ್ದಾನೆ.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.